ನಕಲಿ ನೋಟು ಮುದ್ರಣ ಜಾಲ ಬಲೆಗೆ


Team Udayavani, May 4, 2019, 3:02 AM IST

nakali-no

ಬೆಂಗಳೂರು: ಖೋಟಾ ನೋಟು ದಂಧೆಯಲ್ಲಿ ಕಳೆದುಕೊಂಡಿದ್ದ ಹಣ ಸಂಪಾದಿಸಲು “ಖೋಟಾ ನೋಟು’ ಪ್ರಿಂಟ್‌ ಮಾಡಿ, ಚಲಾವಣೆಗೆ ಯತ್ನಿಸಿದ ಬಿಎಂಟಿಸಿ ಚಾಲಕರಿಬ್ಬರು ಸೇರಿ ಮೂವರು ಜೈಲು ಸೇರಿದ್ದಾರೆ.

ಬಿಎಂಟಿಸಿ ಚಾಲಕ ಹಾಗೂ ಕಂಡಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೋಮನಗೌಡ (38), ಚಾಲಕ ನಂಜೇಗೌಡ (32) ಹಾಗೂ ಫೋಟೋಗ್ರಾಫ‌ರ್‌ ಕಿರಣ್‌ಕುಮಾರ್‌ ಬಂಧಿತ ಆರೋಪಿಗಳು.

ಖೋಟಾ ನೋಟು ಚಲಾವಣೆ ಯತ್ನ ಮಾಹಿತಿ ಮೇರೆಗೆ ಏ.26ರಂದು ಕಾರ್ಯಾಚರಣೆ ನಡೆಸಿರುವ ಯಲಹಂಕ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿ ಎರಡು ಸಾವಿರ ರೂ. ಮುಖಬೆಲೆಯ 81.30 ಲಕ್ಷ ರೂ. ಖೋಟಾ ನೋಟು ಜಪ್ತಿ ಮಾಡಿದ್ದರು.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ತನಿಖಾ ತಂಡ, ತಲೆಮರೆಸಿಕೊಂಡಿರುವ ಮತ್ತೂಬ್ಬ ಆರೋಪಿ ರಾಮಕೃಷ್ಣ ಬಂಧನಕ್ಕೆ ಬಲೆಬೀಸಿದೆ. ಖೋಟಾ ನೋಟು ದಂಧೆಯಲ್ಲಿ ತೊಡಗಿಸಿಕೊಂಡಿರುವ ಚಿತ್ರದುರ್ಗ ಮೂಲದ ರಾಮಕೃಷ್ಣ ಎಂಬಾತನಿಗೆ ಈ ಹಿಂದೆ ಒಂದು ಲಕ್ಷ ರೂ. ನೀಡಿದ್ದ ಸೋಮನಗೌಡ, ಆತನಿಂದ ಉಡುಗೊರೆ ಪಡೆದುಕೊಂಡಿದ್ದ.

ಇದಾದ ಬಳಿಕ ಕಳೆದ ವರ್ಷ 7 ಲಕ್ಷ ರೂ. ನೀಡಿದ್ದ. ಈ ವೇಳೆ ವಂಚಿಸಿದ ರಾಮಕೃಷ್ಣ, ಹಣವನ್ನೂ ವಾಪಸ್‌ ನೀಡಿರಲಿಲ್ಲ. ಅದರ ಬದಲಿಗೆ ಖೋಟಾ ನೋಟು ಮುದ್ರಿಸಲು ಸಲಹೆ ನೀಡಿದ್ದ. ಆತನ ಮಾತು ನಂಬಿದ ಸೋಮನಗೌಡ, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಸ್ನೇಹಿತರ ಜತೆಗೂಡಿ ಖೋಟಾನೋಟು ಮುದ್ರಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಬಾಡಿಗೆ ಕೊಠಡಿಯಲ್ಲಿ ಪ್ರಿಂಟ್‌!: ಖೋಟಾ ನೋಟು ಮುದ್ರಿಸುವ ಯೋಜನೆ ಕುರಿತು ನಂಜೇಗೌಡ ಹಾಗೂ ಕಿರಣ್‌ಕುಮಾರ್‌ಗೆ ತಿಳಿಸಿದ್ದ ಸೋಮನಗೌಡ, ಗಾರೆಬಾವಿ ಪಾಳ್ಯದಲ್ಲಿ ಕೊಠಡಿ ಬಾಡಿಗೆಗೆ ಪಡೆದು, ಅಲ್ಲೇ ನೋಟು ಮುದ್ರಣ ಆರಂಭಿಸಿದ್ದ. ಫೋಟೋಶಾಪ್‌, ಸ್ಕ್ಯಾನಿಂಗ್‌ ಕೌಶಲ್ಯ ಹೊಂದಿರುವ ಡಿಪ್ಲೊಮಾ ಪದವೀಧರ ಕಿರಣ್‌,

ಎರಡು ಸಾವಿರ ರೂ. ಅಸಲಿ ನೋಟು ಸ್ಕ್ಯಾನ್‌ ಮಾಡಿ, ಫೋಟೋಶಾಪ್‌ನಲ್ಲಿ ನೋಟಿನ ನಂಬರ್‌ಗಳನ್ನು ಬದಲಿಸಿ ಕಲರ್‌ ಪ್ರಿಂಟ್‌ ತೆಗೆಯುತ್ತಿದ್ದ. ಇದೇ ರೀತಿ ಆರೋಪಿಗಳು ಲಕ್ಷಾಂತರ ರೂ. ನಕಲಿ ನೋಟು ಮುದ್ರಿಸಿದ್ದರು. ಮಾರ್ಚ್‌ ತಿಂಗಳಲ್ಲಿ ನೋಟುಗಳ ಮುದ್ರಣ ಆಗಿರುವ ಆಗಿರುವ ಸಾಧ್ಯತೆಯಿದೆ ಎಂದು ಅಧಿಕಾರ ಮಾಹಿತಿ ನೀಡಿದರು.

ಕಿಂಗ್‌ಪಿನ್‌ ಬಂಧನಕ್ಕೆ ಶೋಧ: ಈ ಜಾಲ ಆಳವಾಗಿ ಬೇರು ಬಿಟ್ಟಿರುವ ಅಂಶ ಆರೋಪಿಗಳ ವಿಚಾರಣೆ ವೇಳೆ ತಿಳಿದುಬಂದಿದೆ. ತಲೆಮರೆಸಿಕೊಂಡಿರುವ ರಾಮಕೃಷ್ಣನ ನಿಜ ಹೆಸರು ಬೇರೆಯೇ ಇದೆ. ಆತ ಬೇರೆ ಬೇರೆ ಹೆಸರುಗಳಲ್ಲಿ ಹಲವರಿಗೆ ವಂಚಿಸಿರುವ ಮಾಹಿತಿಯಿದೆ. ಆತನ ಬಂಧನಕ್ಕೆ ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಆತ ಬಳಸುತ್ತಿದ್ದ ಮೊಬೈಲ್‌ ಸಂಖ್ಯೆಯೂ ಸ್ಥಗಿತಗೊಂಡಿದೆ. ಆತನ ಬಂಧನದ ಬಳಿಕ ಜಾಲದ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.