ನಕಲಿ ಕಂದಾಯ ಅಧಿಕಾರಿ ಎಸಿಬಿ ಬಲೆಗೆ
Team Udayavani, Dec 12, 2018, 12:33 PM IST
ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ಕಂದಾಯ ಅಧಿಕಾರಿ ಎಂದು ಹೇಳಿ ಸರ್ಕಾರಿ ಸೌಲಭ್ಯಗಳನ್ನು ಮಾಡಿಸಿಕೊಡುವುದಾಗಿ ತಿಳಿಸಿ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾನೆ. ವಿಜಯನಗರ ನಿವಾಸಿ ರಂಗರಾಜು(54) ಬಂಧಿತ ಆರೋಪಿ.
ಮಡಿವಾಳದ ನಿವಾಸಿಯೊಬ್ಬರು ಆದಾಯ ಧೃಢೀಕರಣ ಪ್ರಮಾಣ ಪತ್ರಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಅವರಿಗೆ ದೂರವಾಣಿ ಕರೆ ಮಾಡಿದ್ದ ರಂಗರಾಜು, ತಾನು ಬೆಂಗಳೂರು ದಕ್ಷಿಣ ವಿಭಾಗದ ರಾಜಸ್ವ ನಿರೀಕ್ಷಕ ಎಂದು ಪರಿಚಯಿಸಿಕೊಂಡಿದ್ದಾನೆ. ಜತೆಗೆ, ಆದಾಯ ಧೃಢೀಕರಣ ಪ್ರಮಾಣ ಪತ್ರ ನೀಡಲು 900 ರೂ. ಲಂಚ ಬೇಡಿಕೆ ಇಟ್ಟಿದ್ದ.
ಈ ಕುರಿತು ದೂರದಾರರು ನೀಡಿದ ದೂರು ಆಧರಿಸಿ ಮಂಗಳವಾರ 900 ರೂ. ಲಂಚ ಸ್ವೀಕರಿಸಿದ ವೇಳೆ ಎಸಿಬಿ ದಾಳಿನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು ಜನರಿಗೆ ವಂಚಿಸುತ್ತಿದ್ದ. ಮಲ್ಲಿಕಾರ್ಜುನ್ ಎಂಬ ಹೆಸರಿನಲ್ಲಿ ಉಪ ತಹಶೀಲ್ದಾರ್ ಎಂದು ನಮೂದಾಗಿರುವ ನಕಲಿ ಗುರುತಿನ ಚೀಟಿ ಹೊಂದಿರುವುದು ಬೆಳಕಿಗೆ ಬಂದಿದ್ದು,
ನಕಲಿ ಗುರುತಿನ ಚೀಟಿ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಆತ ಉಪತಹಶೀಲ್ದಾರ್ ಕಚೇರಿಯಲ್ಲಿ ಯಾವ ಅಧಿಕಾರಿ ಜತೆ ಸಂಪರ್ಕ ಸಾಧಿಸಿದ್ದ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ. ಆರೋಪಿ ರಂಗರಾಜುವಿಗೆ ಹಣ ನೀಡಿ ಮೋಸಹೋದವರು ದೂರು ನೀಡಿದರೆ ಕ್ರಮ ವಹಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ