![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಪೊಲೀಸರಿಗೆ ಶರಣಾದ ನಕಲಿ ಸೋಮಣ್ಣ
Team Udayavani, Apr 22, 2018, 12:16 PM IST
![nakali-som.jpg](https://www.udayavani.com/wp-content/uploads/2018/04/22/nakali-som-418x465.jpg)
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ಅವರ ಸೋಗಿನಲ್ಲಿ ಜನರಿಗೆ ಕೋಟ್ಯಂತರ ರೂ. ವಂಚಿಸಿ ಬಂಧನಕ್ಕೊಳಗಾಗಿ ಮಹಜರು ಸಂದರ್ಭದಲ್ಲಿ ಚಿತ್ರದುರ್ಗ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಎಲ್.ಸೋಮಣ್ಣ (39) ಪೊಲೀಸರಿಗೆ ಶರಣಾಗಿದ್ದಾನೆ. ಇದೇ ವೇಳೆ ಆರೋಪಿಗೆ ಆಶ್ರಯ ನೀಡಿದ ಒಬ್ಬ ಮಹಿಳೆ ಸೇರಿ ಮೂವರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಚಿನ್ನದಂಗಡಿ ಮಾಲೀಕರಿಂದ 1.88 ಕೋಟಿ ರೂ. ಬೆಲೆಯ ಚಿನ್ನದ ತಾಳಿ, ಬಿಸ್ಕತ್ ಪಡೆದು ವಂಚಿಸಿದ ಸೋಮಣ್ಣನನ್ನು ಬಸವೇಶ್ವರನಗರ ಪೊಲೀಸರು ಏ.4ರಂದು ಬಂಧಿಸಿದ್ದರು. ಏ.11ರಂದು ಚಿತ್ರದುರ್ಗಕ್ಕೆ ಮಹಜರ್ಗೆ ಕರೆದೊಯ್ದಿದ್ದಾಗ ಪೊಲೀಸರನ್ನು ತಳ್ಳಿ 11 ಅಡಿ ಮೇಲಿಂದ ಜಿಗಿದು ತಪ್ಪಿಸಿಕೊಂಡಿದ್ದ.
ಅಲ್ಲಿಂದ ದಾವಣಗೆರೆಗೆ ಆಟೋದಲ್ಲಿ ಹೋಗಿ ಸಂಬಂಧಿಕರಿಂದ ಹಣ ಪಡೆದು ಆಟೋ ಚಾಲಕನಿಗೆ 1 ಸಾವಿರ ರೂ. ಬಾಡಿಗೆ ಕೊಟ್ಟಿದ್ದ. ಅನಂತರ ಬೆಂಗಳೂರು ಮತ್ತು ಮೈಸೂರಿನಲ್ಲಿ ಸುತ್ತಾಡಿ ಕೊನೆಗೆ ವಕೀಲರನ್ನು ಭೇಟಿ ಮಾಡಿ ಅವರ ಸಹಾಯದಿಂದ ಏ.20ರಂದು ಸಂಜೆ 5ನೇ ಎಸಿಎಂಎಂ ನ್ಯಾಯಾಲಯದಲ್ಲಿ ಶರಣಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗೆ ಆಶ್ರಯ ನೀಡಿದ ಕೊಡಿಗೇಹಳ್ಳಿಯ ಸಹಕಾರ ನಗರದ ಬಾಲಾಜಿ(48), ಸರಿತಾ (37) ಹಾಗೂ ದೇವನಹಳ್ಳಿಯ ಶಾಣಪ್ಪನಹಳ್ಳಿಯ ವಿಜಯ್ಕುಮಾರ್ನನ್ನು ಬಂಧಿಸಲಾಗಿದೆ. ಸೋಮಣ್ಣನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸಂಸದರ ವಿರುದ್ಧ ಕಿಡಿ, ಪೊಲೀಸರಿಗೆ ಬೆದರಿಕೆ: ಬಿಜೆಪಿ ಸಂಸದ ಶ್ರೀರಾಮುಲು ತನ್ನ ಪ್ರಭಾವ ಬಳಸಿ ಪೊಲೀಸರು ನನ್ನನ್ನು ಬಂಧಿಸುವಂತೆ ಮಾಡಿದ್ದಾರೆ. ಈ ಬಾರಿ ಮೊಣಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸದಂತೆ ನನಗೆ ಶ್ರೀರಾಮುಲು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿ ಸೋಮಣ್ಣ ಆರೋಪಿಸಿದ್ದಾನೆ.
ಆದರೆ, ಸಂಸದರಿಗೆ ಈತನ ಹೆಸರೇ ಗೊತ್ತಿಲ್ಲ. ಹಾಗೇ ಪೊಲೀಸರು ಬಂಧಿಸಲು ತೆರಳಿದಾಗ “ನಾನು ಮುಂದೆ ಶಾಸಕನಾಗುವವನು, ಸುಮ್ಮನೆ ಬಿಟ್ಟುಬಿಡಿ. ಹೊರಬಂದ ಮೇಲೆ ನೀರು ನೆರಳು ಇಲ್ಲದ ಜಾಗಕ್ಕೆ ವರ್ಗಾವಣೆ ಮಾಡಿಸುತ್ತೆನೆ,’ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಠಾಧೀಶರ ಭೇಟಿಗೂ ಸುಳ್ಳು: ಆರೋಪಿ ಎಲ್.ಸೋಮಣ್ಣ, ತುಮಕೂರಿನ ಸಿದ್ಧಗಂಗಾ ಮಠ ಹಾಗೂ ಮೈಸೂರಿನ ಸುತ್ತೂರು ಮಠಕ್ಕೆ ಹೋದಾಗ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ಆಪ್ತರು ಎಂದು ಹೇಳಿಕೊಂಡು ಪ್ರವೇಶ ಪಡೆದುಕೊಂಡಿದ್ದ. ಚಿತ್ರದುರ್ಗದ ಮುರುಘಾ ಮಠಕ್ಕೆ ಹೋದಾಗ ಸಂಸದ ಶ್ರೀರಾಮುಲು ಹೆಸರು ಬಳಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.