ಸಿಎಂ ಹೆಸರಿನಲ್ಲಿ ನಕಲಿ ಟ್ವಿಟರ್: ಆರೋಪಿ ಸೆರೆ
Team Udayavani, Jul 1, 2017, 11:19 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆದು ಅವಹೇಳನಕಾರಿ ಟ್ವೀಟ್ ಮಾಡಿದ್ದ ಪ್ರಕರಣ ಸಂಬಂಧ ಖಾಸಗಿ ಕಂಪನಿಯ ಉದ್ಯೋಗಿಯನ್ನು ಶುಕ್ರ ವಾರ ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಮಧುಸೂಧನ್ (30)ಬಂಧಿತ ಆರೋಪಿ.
ಆರೋಪಿ ಮಧುಸೂಧನ್ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಸಿಎಂ ಆಫ್ ಕರ್ನಾಟಕ ಹೆಸರಿನ ಟ್ವಿಟರ್ ಖಾತೆ ಸೃಷಿಸಿ, ಸಿದ್ದರಾಮಯ್ಯ ಅವರು ನಿದ್ದೆ ಮಾಡುವುದು ಸೇರಿ ಇನ್ನಿತರ ಅವಹೇಳನಕಾರಿ ಟ್ವೀಟ್ ಮಾಡುತ್ತಿದ್ದ ಬಗ್ಗೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿ, ನಕಲಿ ಖಾತೆಯಲ್ಲಿ ಟ್ವೀಟ್ ಮಾಡುತ್ತಿದ್ದ. ಈ ಬಗ್ಗೆ ದೂರು ದಾಖಲಾದ ಬಳಿಕ ಎಚ್ಚೆತ್ತುಕೊಂಡು, ಟ್ವಿಟರ್ ಖಾತೆಯನ್ನು ನಾನೇ ಗಡ್ಡಪ್ಪ ಎಂದು ಬದಲಾಯಿಸಿ ಕೆಲ ಸಮಯ ಬಳಕೆ ಮಾಡಿದ್ದ. ಬಳಿಕ, ಅದನ್ನೂ ಸ್ಥಗಿತಗೊಳಿಸಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಟ್ವಿಟರ್ ಖಾತೆ ಬಗ್ಗೆ ಡಿಸೆಂಬರ್ 29ರಂದು ಸಿಎಂ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಅವರು ಸಿಐಡಿ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ