ಸರ್ಕಾರ ಉಳಿಸಲು ಸುಳ್ಳು ಹೇಳಿಕೆ
Team Udayavani, Mar 22, 2019, 6:35 AM IST
ಬೆಂಗಳೂರು: “ರಾಜ್ಯ ಸರ್ಕಾರವನ್ನು ಉಳಿಸುವ ಸಲುವಾಗಿ ಬಿಜೆಪಿ ಮುಖಂಡರಿಂದ ಐದು ಕೋಟಿ ರೂ. ಪಡೆದಿದ್ದಾಗಿ ಹೇಳಿಕೆ ನೀಡಿದ್ದೆ’ ಎಂದು ಶಾಸಕ ಶ್ರೀನಿವಾಸಗೌಡ ಎಸಿಬಿ ಅಧಿಕಾರಿಗಳ ಎದುರು ಹೇಳಿಕೆ ದಾಖಲಿಸಿದ್ದಾರೆ.
ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಮುಖಂಡರಿಂದ ಮುಂಗಡವಾಗಿ ಐದು ಕೋಟಿ ರೂ. ಪಡೆದ ಆರೋಪ ಪ್ರಕರಣ ಸಂಬಂಧ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಗುರುವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಕಚೇರಿಗೆ ಹಾಜರಾಗಿದ್ದು, ತಮ್ಮ ಹೇಳಿಕೆ ದಾಖಲಿಸಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಕಚೇರಿಗೆ ಆಗಮಿಸಿದ ಶ್ರೀನಿವಾಸ ಗೌಡ ಅವರನ್ನು ಎಸಿಬಿ ಅಧಿಕಾರಿಗಳು ಸತತ ಒಂದೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಬಿಜೆಪಿ ಮುಖಂಡರು 5 ಕೋಟಿ ರೂ.ಅನ್ನು ತಮ್ಮ ಮನೆಗೆ ತಂದಿಟ್ಟಿರುವುದಾಗಿ ಹೇಳಿಕೆ ನೀಡಿದ ಕುರಿತ ಪ್ರಶ್ನೆಗಳಿಗೆ ಶಾಸಕರು ಉತ್ತರಿಸಿದ್ದಾರೆ.
“ಮೈತ್ರಿ ಸರ್ಕಾರ ರಚನೆಯಾದ ಬಳಿಕ ಬಿಜೆಪಿ ನಡೆಸುತ್ತಿದ್ದ ಆಪರೇಷನ್ ಕಮಲ ತಪ್ಪಿಸಲು, ಸರ್ಕಾರ ಉಳಿಸಲು ಬಿಜೆಪಿಯಿಂದ ಮುಂಗಡವಾಗಿ ಐದು ಕೋಟಿ ರೂ. ಪಡೆದಿದ್ದಾಗಿ ಹೇಳಿಕೆ ನೀಡಿದ್ದೆ ಅಷ್ಟೇ. ಬೇರೆ ಯಾವುದೇ ಉದ್ದೇಶವಿಲ್ಲ. ನಾನು ಜೆಡಿಎಸ್ನ ನಿಷ್ಠಾವಂತ ಕಾರ್ಯಕರ್ತ. ಹಣ ಇತರೆ ಯಾವುದರಿಂದಲೂ ನನಗೆ ಆಮಿಷವೊಡ್ಡಲು ಸಾಧ್ಯವಿಲ್ಲ’ ಎಂದು ಹೇಳಿಕೆ ದಾಖಲಿಸಿದ್ದಾರೆ ಎಂದು ಎಸಿಬಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ