ಮನೆ ಮನೆಗೆ ತೆರಳಿ ಕುಟುಂಬ ಸಮೀಕ್ಷೆಗೆ ಒತ್ತಡ?


Team Udayavani, May 11, 2021, 10:17 AM IST

ಮನೆ ಮನೆಗೆ ತೆರಳಿ ಕುಟುಂಬ ಸಮೀಕ್ಷೆಗೆ ಒತ್ತಡ?

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ ಸೋಂಕು ಉಲ್ಬಣದ ನಡುವೆ ಮನೆ ಮನೆಗೆ ತೆರಳಿ ಕುಟುಂಬ ಸಮೀಕ್ಷೆ ನಡೆಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಒತ್ತಡ ಹಾಕಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ.

ನಗರ ಪ್ರದೇಶಗಳು, ಹಳ್ಳಿಗಳು ಎಲ್ಲಾ ಕಡೆ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಪ್ರತಿ ಮನೆಗೆ ತೆರಳಿ ಕುಟುಂಬಗಳ ಸಮೀಕ್ಷೆ ನಡೆಸುವಂತೆ ಕೆಲ ಜಿಲ್ಲೆಗಳಲ್ಲಿ ಅಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ “ಸಂತಾನೋತ್ಪತ್ತಿ ಮತ್ತು ಮಗುವಿನ ಕಾರ್ಯಕ್ರಮ”ದಡಿ ಮೊಬೈಲ್‌ ಆ್ಯಪ್‌ ಮೂಲಕ ಕುಟುಂಬಗಳ ಸಮೀಕ್ಷೆ ನಡೆಸಲಾಗುತ್ತಿದೆ. ಇದರ ಹೊಣೆಗಾರಿಕೆಯನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದೆ.

ಆದರೆ, ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಇಂತಹ ಸಂದರ್ಭದಲ್ಲಿ ಮನೆಗಳಿಗೆ ತೆರಳಿ ಪ್ರತಿ ಕುಟುಂಬದ ಮಾಹಿತಿ ಸಂಗ್ರಹಿಸುವುದು ಅಪಾಯವನ್ನು ಮೈ ಮೇಲೆ ಎಳೆದುಕೊಂಡಂತಾಗುತ್ತದೆ. ಅಲ್ಲದೇ ಕೋವಿಡ್ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಬರುತ್ತಿದ್ದವರಿಗೆ ಅವರ ಮನೆಗೆ ಹೋಗಿ ಆಹಾರ ಸಾಮಗ್ರಿಗಳನ್ನು ವಿತರಿಸುವ ಜವಾಬ್ದಾರಿ ಸೇರಿ ಕೋವಿಡ್ ಸಂಬಂಧಿತ ಇನ್ನೂ ಅನೇಕ ಜವಾಬ್ದಾರಿಗಳನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸಲಾಗಿದೆ. ಅದರ ಒತ್ತಡವೇ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಕುಟುಂಬ ಸಮೀಕ್ಷೆ ಹೇಗೆ ಸಾಧ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರ ಪ್ರಶ್ನೆ.

ಸ್ಪಷ್ಟತೆ ಇಲ್ಲ: ಕುಟುಂಬ ಸಮೀಕ್ಷೆಗೆ ಸಂಬಂಧಿಸಿದಂತೆ ಇಲಾಖೆಯ ನಿರ್ದೇಶಕರು ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದನಿರ್ದೇಶಕರು ಮಾ.29ರಂದು ಜಂಟಿ ಸುತ್ತೋಲೆ ಹೊರಡಿಸಿ, ಏ.28ರೊಳಗೆ ಕುಟುಂಬ ಸಮೀಕ್ಷೆ ಪೂರ್ಣಗೊಳಿಸಬೇಕು. ಯಾವುದೇ ಒಂದು ಕುಟುಂಬ ಸಮೀಕ್ಷೆಯಿಂದ ಬಿಟ್ಟು ಹೋಗಬಾರದು ಎಂದು ತಾಕೀತು ಮಾಡಲಾಗಿತ್ತು. ಆದರೆ, ಕೋವಿಡ್ ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಿಸಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಸಮರ್ಪಕ ರೀತಿಯಲ್ಲಿ ಸಮೀಕ್ಷೆ ನಡೆದಿರಲಿಲ್ಲ. ಕೆಲವು ಜಿಲ್ಲೆಗಳಲ್ಲಿ ಆರಂಭವಾಗಿದ್ದರೆ, ಇನ್ನೂ ಕೆಲವು ಕಡೆ ಈಗಲೂ ಒತ್ತಡ ಹಾಕಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸಮೀಕ್ಷೆ ನಿಲ್ಲಿಸಬೇಕೇ, ಸ್ಥಗಿತಗೊಳಿಸಬೇಕೇ ಎಂಬ ಬಗ್ಗೆ ಇಲಾಖೆಯಿಂದ 300 ಆಕ್ಸಿಜನೇಟೆಡ್‌ ಬೆಡ್‌ ವ್ಯವಸ್ಥೆ ಸ್ಪಷ್ಟತೆ ಇಲ್ಲ.

ಕುಟುಂಬ ಸಮೀಕ್ಷೆ ನಿರಂತರ ಚಟುವಟಿಕೆ. ಸದ್ಯದ ಕೋವಿಡ್ ಉಲ್ಬಣ ಸ್ಥಿತಿಯಲ್ಲಿ ಸಮೀಕ್ಷೆ ಬೇಡ ಎಂಬ ಮನವಿಗಳು ಅಂಗನವಾಡಿ ಕಾರ್ಯಕರ್ತೆಯರಿಂದ ಬರುತ್ತಿವೆ. ಈ ವಿಚಾರವನ್ನು ಇಲಾಖೆಯ ಕಾರ್ಯದರ್ಶಿಯವರ ಗಮನಕ್ಕೆ ತರಲಾಗಿದೆ. – ಅನುರಾಧ, ನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಕುಟುಂಬ ಸಮೀಕ್ಷೆ ನಡೆಸುವಂತೆ ಕೆಲ ಜಿಲ್ಲೆಗಳಲ್ಲಿ ಒತ್ತಡ ಹಾಕಲಾಗುತ್ತಿದೆ. ಸದ್ಯದ ಸ್ಥಿತಿಯಲ್ಲಿ ಸಮೀಕ್ಷೆ ಬೇಡ ಎಂಬ ವಿಚಾರವನ್ನುಇಲಾಖೆಯ ಗಮನಕ್ಕೆ ತರಲಾಗಿದೆ. ಆದರೆ, ಈವರೆಗೆ ಯಾವುದೇ ಸ್ಪಷ್ಟ ಸೂಚನೆ ಸಿಕ್ಕಿಲ್ಲ. – ಎಂ. ಜಯಮ್ಮ, ಪ್ರ.ಕಾರ್ಯದರ್ಶಿ, ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಫೆಡರೇಷನ್‌

 

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.