ಮೇಳದಲ್ಲಿ ತಂತ್ರಜ್ಞಾನದತ್ತ ರೈತರ ಚಿತ್ತ
Team Udayavani, Oct 26, 2019, 10:15 AM IST
ಬೆಂಗಳೂರು: ಸಾಂಪ್ರದಾಯಿಕ ಪದ್ಧತಿಗೆ ಅಂಟಿಕೊಂಡಿದ್ದ ರೈತರು ನಿಧಾನವಾಗಿ ತಂತ್ರಜ್ಞಾನದತ್ತ ಮುಖಮಾಡುತ್ತಿದ್ದಾರೆ. ಕುತೂಹಲದಿಂದ ವೀಕ್ಷಿಸಿ, ಅವುಗಳನ್ನು ಅಳವಡಿಸಿಕೊಳ್ಳುವ ಉತ್ಸುಕತೆ ತೋರಿಸುತ್ತಿದ್ದಾರೆ. – ಇಂತಹದ್ದೊಂದು ಪೂರಕ “ಟ್ರೆಂಡ್’ ಈ ಬಾರಿ ಕೃಷಿ ಮೇಳದಲ್ಲಿ ಕಂಡುಬರುತ್ತಿದೆ.
ಅದಕ್ಕೆ ತಕ್ಕಂತೆ ತಂತ್ರಜ್ಞಾನಗಳ ಪ್ರದರ್ಶನಕ್ಕೆ ಹೆಚ್ಚು ಒತ್ತುಕೊಡಲಾಗಿದೆ. ಅದಕ್ಕೆ ತಕ್ಕಂತೆ ಕಳೆದೆರಡು ದಿನಗಳಲ್ಲಿ ಭೇಟಿ ನೀಡಿದ ರೈತರು ಕೂಡ ಕೃಷಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಮಳಿಗೆಗಳು ಮತ್ತು ಪ್ರಾತ್ಯಕ್ಷಿಕೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆಯುತ್ತಿರುವುದು ಕಂಡುಬಂದಿತು. ಸೆನ್ಸರ್ ಆಧಾರಿತ ಬೇಸಾಯ, ಡ್ರೋನ್ ಬಳಕೆ, ಕಡಿಮೆ ಜಮೀನಿನಲ್ಲಿ ನಿಖರ ಬೇಸಾಯ ಪದ್ಧತಿಯಿಂದ ಹೆಚ್ಚು ಬೆಳೆಗಳನ್ನು ಬೆಳೆಯುವುದು, ನೀರಿನ ಸದ್ಬಳಕೆಗೆ ಸೂಕ್ಷ್ಮ ನೀರಾವರಿ, ನೀರಿನೊಂದಿಗೆ ಪೋಷಕಾಂಶ ಪೂರೈಸುವ ರಸಾವರಿ, ಸಂರಕ್ಷಿತ ಬೇಸಾಯ ಸೇರಿದಂತೆ ಹಲವು ಪ್ರದರ್ಶನಗಳು ಈ ಬಾರಿಯ ಪ್ರಮುಖ ಆಕರ್ಷಣೆಗಳಾಗಿವೆ. ಭೇಟಿ ನೀಡುವ ರೈತರು, ತಂತ್ರಜ್ಞಾನದ ಕಾರ್ಯವೈಖರಿ, ಖರ್ಚು-ವೆಚ್ಚದ ಮಾಹಿತಿ ಪಡೆಯುತ್ತಿದ್ದಾರೆ ಎಂದು ಜಿಕೆವಿಕೆ ವಿಜ್ಞಾನಿಗಳು ತಿಳಿಸುತ್ತಾರೆ.
250ಕ್ಕೂ ಅಧಿಕ ಜನ ಅಳವಡಿಕೆಗೆ ಆಸಕ್ತಿ: “ನಾನು ಕಳೆದ ಆರು ವರ್ಷಗಳಿಂದ ಕೃಷಿ ಮೇಳವನ್ನು ನೋಡುತ್ತಿದ್ದೇನೆ. ಈ ಬಾರಿ ರೈತರ ಆಸಕ್ತಿ ಕೊಂಚ ಭಿನ್ನವಾಗಿದೆ. ಭತ್ತದ ಬೆಳೆಯಲ್ಲಿ ಅಳವಡಿಸಿದ ನಿಖರ ಕೃಷಿಯನ್ನು ಕಳೆದೆರಡು ದಿನಗಳಲ್ಲಿ 30 ಸಾವಿರಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ. ಇದರಲ್ಲಿ ಸುಮಾರು 250 ಜನ ಸಾಕಷ್ಟು ಮಾಹಿತಿ ಪಡೆದುಕೊಂಡು, ಅಳವಡಿಸಿ ಕೊಳ್ಳುವ ಭರವಸೆ ನೀಡಿದರು. ಹೀಗೆ ತಂತ್ರಜ್ಞಾನ ಅಳವಡಿಕೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ’ ಎಂದು ಬೇಸಾಯ ಶಾಸ್ತ್ರಜ್ಞ ಡಾ.ಡಿ.ಸಿ. ಹನುಮಂತಪ್ಪ ಹೇಳಿದರು.
ಇದಲ್ಲದೆ, ಪ್ರಸಕ್ತ ಸಾಲಿನಲ್ಲಿ ಬಿ2ಬಿ ಆಯೋಜಿಸಲಾಗಿದೆ. ರೈತರು ಮತ್ತು ಉದ್ಯಮಿಗಳು ಹಾಗೂ ವಿಜ್ಞಾನಿಗಳ ನಡುವೆ ಸಂಪರ್ಕ ಕಲ್ಪಿಸಲು ಈ ವೇದಿಕೆಯನ್ನು ಮೊದಲ ಬಾರಿಗೆ ರೂಪಿಸಲಾಗಿದೆ. ಕೆಲವು ರೈತರು ನೀರು ನಿರ್ವಹಣೆ, ಸಮಗ್ರ ಬೇಸಾಯ ಪದ್ಧತಿ ಸೇರಿದಂತೆ ಸಂಬಂಧಪಟ್ಟ ವಿಜ್ಞಾನಿಗಳಿಗೆ ನೀಡಲಾಗುವುದು. ಮೇಳ ಮುಗಿದ ನಂತರ ಆ ರೈತರನ್ನು ಸಂಪರ್ಕಿಸಿ, ಮಾರ್ಗದರ್ಶನ ನೀಡಲಾಗುವುದು ಎಂದು ಬಿ2ಬಿಯಲ್ಲಿದ್ದ ಜಿಕೆವಿಕೆಯ ಅಗ್ರಿಕಲ್ಚರಲ್ ಮಾರ್ಕೆಟಿಂಗ್ ಆಂಡ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿಭಾಗದ ಸಿಬ್ಬಂದಿ ಡಾ.ಕಾವ್ಯ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ