ಮಹದಾಯಿ: ಅಹೋರಾತ್ರಿ ಧರಣಿ ಮುಂದುವರಿಕೆ


Team Udayavani, Dec 25, 2017, 6:30 AM IST

Farmers-seen-protesting.jpg

ಬೆಂಗಳೂರು: ಮಹದಾಯಿ ಬಿಕ್ಕಟ್ಟು ಬಗೆಹರಿಸುವಂತೆ ಉತ್ತರ ಕರ್ನಾಟಕ ಭಾಗದಿಂದ ಬಂದಿರುವ ರೈತರು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂದೆ ಶನಿವಾರದಿಂದ ನಡೆಸುತ್ತಿರುವ ಆಹೋರಾತ್ರಿ ಧರಣಿ ಮುಂದುವರಿದಿದ್ದು, ಭಾನುವಾರ ಆಮ್‌ ಆದ್ಮಿ ಪಕ್ಷ ಮತ್ತು ಜನ ಸಾಮಾನ್ಯರ ವೇದಿಕೆ ಬೆಂಬಲ ವ್ಯಕ್ತಪಡಿಸಿ ಧರಣಿಗೆ ಕೈಜೋಡಿಸಿವೆ.

ಬಿಜೆಪಿ ಕಚೇರಿ ಎದುರು ಮಹಿಳೆಯರು, ಮಕ್ಕಳು, ಯುವಕರೊಂದಿಗೆ ಶನಿವಾರದಿಂದ ಧರಣಿ ಆರಂಭಿಸಿರುವ ರೈತರು ರಾತ್ರಿ ಚಳಿಯಲ್ಲಿ ನಡುಗುತ್ತಾ ತಮ್ಮ ಹೋರಾಟ ಮುಂದುವರಿಸಿದ್ದು, ಅಲ್ಲಿಯೇ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸುವವರೆಗೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ನಮಗೆ ಮಹದಾಯಿ ನದಿಯ ನೀರು ಬೇಕೆ ಹೊರತು ಈ ಬಗ್ಗೆ ಸರ್ಕಾರ ಅಥವಾ ರಾಜಕೀಯ ಮುಖಂಡರಿಂದ ಪೊಳ್ಳು ಭರವಸೆ ಬೇಕಾಗಿಲ್ಲ. ಮಹದಾಯಿ ನದಿ ನೀರು ಬಿಡಲು ಗೋವಾ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರಾದರೂ ನೀರು ಯಾವಾಗಿನಿಂದ ಬಿಡುಗಡೆ ಮಾಡಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಆದ್ದರಿಂದ ಅವರಿಂದ ಸ್ಪಷ್ಟ ಉತ್ತರಕ್ಕಾಗಿ ಈ ಹೋರಾಟ ನಡೆಸಲಾಗುತ್ತಿದೆ ಎಂದು ಪ್ರತಿಭಟನಾನಿರತರು ಹೇಳಿದ್ದು, ಈ ಭರವಸೆ ಸಿಗುವವರೆಗೂ ಇಲ್ಲೇ ಕುಳಿತುಕೊಳ್ಳುವುದಾಗಿ ಪಟ್ಟು ಹಿಡಿದಿದ್ದಾರೆ.

ಮಹಿಳೆಯರು ಮತ್ತು ಮಕ್ಕಳು ಚಳಿಯಲ್ಲೇ ರಾತ್ರಿ ಧರಣಿ ಮುಂದುವರಿಸಿದ್ದರಿಂದ ಸ್ಥಳೀಯರು ಅವರಿಗೆ ಹೊದಿಕೆಗಳನ್ನು ನೀಡಿದರಾದರೂ ರೈತರು ನಯವಾಗಿಯೇ ತಿರಸ್ಕರಿಸಿದರು. ಡಾ.ರಾಜ್‌ಕುಮಾರ್‌ ಅಭಿಮಾನ ದೇವರಾಜ್‌ ಎಂಬುವರು ಹೋರಾಟನಿರತರಿಗೆ ಬನ್‌ ಮತ್ತು ಚಹಾ ವಿತರಿಸಿದರು.

ಭಾನುವಾರ ಬೆಳಗ್ಗೆ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಜನ ಸಾಮಾನ್ಯರ ವೇದಿಕೆ ಅಧ್ಯಕ್ಷ$ಡಾ. ಅಯ್ಯಪ್ಪ, ಧರಣಿ ಎಷ್ಟು ದಿನ ಮುಂದುವರಿದರೂ ಅಷ್ಟೂ ದಿನವೂ ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಜನ ಸಾಮಾನ್ಯ ವೇದಿಕೆ ಸಿದ್ದವಾಗಿದೆ ಎಂದು ಹೇಳಿದರು.

ಇನ್ನೊಂದೆಡೆ ಸಂಜೆ ವೇಳೆ ಆಮ್‌ ಆದ್ಮಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಧರಣಿ ಸ್ಥಳಕ್ಕೆ ಭೇಟಿ ನೀಡಿ, ಕರ್ನಾಟಕಕ್ಕೆ ಮಹದಾಯಿ ನದಿಯಿಂದ ನೀರು ತರಿಸುವ ವಿಚಾರದಲ್ಲಿ ಯಡಿಯೂರಪ್ಪ ಅವರು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಆದ್ದರಿಂದ ಈ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

HD ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ವಶಕ್ಕೆ

HD ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ವಶಕ್ಕೆ

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

bjpಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

ಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.