ಮಾರುಕಟ್ಟೆ ಆರಂಭಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
ಸೆ.1ರಿಂದ ಕೆ.ಆರ್, ಕಲಾಸಿಪಾಳ್ಯ ಮಾರ್ಕೆಟ್ ಪುನಾರಂಭಕ್ಕೆ ಒತ್ತಾಯ
Team Udayavani, Aug 25, 2020, 12:32 PM IST
ಬೆಂಗಳೂರು: ಕೆ.ಆರ್. ಮಾರುಕಟ್ಟೆ ಹಾಗೂ ಕಲಾಸಿ ಪಾಳ್ಯ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ನೂರಾರು ರೈತರು ಮತ್ತು ವ್ಯಾಪಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮಾರುಕಟ್ಟೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡದೇ ಇರುವುದರಿಂದ ನೂರಾರು ಜನ ರೈತರು ಹಾಗೂ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾರುಕಟ್ಟೆಗಳನ್ನು ಪುನಾರಂಭ ಮಾಡಬೇಕು ಎಂದು ಒತ್ತಾಯಿಸಿ ಕೆ.ಆರ್ ಮಾರುಕಟ್ಟೆ ವೃತ್ತದಿಂದ ಬಿಬಿಎಂಪಿ ಕಚೇರಿವರೆಗೂ ನೂರಾರು ರೈತರು, ವ್ಯಾಪಾರಿಗಳು ಸೋಮವಾರ ರ್ಯಾಲಿ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮಾರುಕಟ್ಟೆಗಳನ್ನು ಸೀಲ್ಡೌನ್ ಮಾಡಲಾಗಿತ್ತು. ಇದೀಗ ದೇಶದೆಲ್ಲೆಡೆ ಅನ್ಲಾಕ್ ಮಾಡಲಾಗಿದೆ. ಆದರೆ, ಮಾರುಕಟ್ಟೆ ಗಳಲ್ಲಿ ಮಾರಾಟಕ್ಕೆ ಅವಕಾಶ ನೀಡುತ್ತಿಲ್ಲ. ಹೀಗಾಗಿ, ರೈತರು ಅರ್ಧ ಬೆಲೆಗೆ ತರಕಾರಿ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಕೋವಿಡ್ ತೀವ್ರಗೊಂಡಿದ್ದರಿಂದ 4 ತಿಂಗಳಿಂದ ಮಾರುಕಟ್ಟೆ ಬಂದ್ ಮಾಡಲಾಗಿದೆ. ಇದರಿಂದ ಬೆಳೆಗಾರರಿಗೆ ಮಾರುಕಟ್ಟೆ ವ್ಯವಸ್ಥೆಯಿಲ್ಲದೆ ನಷ್ಟವಾಗಿದೆ. ಇದು ಆಡಳಿತ ನಡೆಸುವವರಿಗೆ ಗೊತ್ತಾಗುತ್ತಿಲ್ಲವೇ? ಸ್ವತಃ ಮುಖ್ಯಮಂತ್ರಿಗಳು ಯಾವುದೇ ಲಾಕ್ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಷ್ಟಾದರೂ, ರೈತರಿಗೇ ಅನ್ಯಾಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುನಾರಂಭಕ್ಕೆ ಅಗತ್ಯ ಸಿದ್ಧತೆ : ಕೆ.ಆರ್ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆ ಪುನಾರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಇದಕ್ಕಾಗಿ ಮೂರು ಅಥವಾ ನಾಲ್ಕು ದಿನ ಅವಕಾಶ ಬೇಕು. ಎರಡೂ ಮಾರುಕಟ್ಟೆಗಳನ್ನು ಸ್ಯಾನಿಟೈಸ್ ಮಾಡಿ ಹಾಗೂ ಮಾರ್ಷಲ್ಗಳನ್ನು ನೇಮಿಸಬೇಕು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ತಿಳಿಸಿರುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ನಂತರ ಮಾಹಿತಿ ನೀಡಿದರು. ಕೋವಿಡ್ ಸೋಂಕು ತಡೆಗೆ ಅಗತ್ಯ ವ್ಯವಸ್ಥೆ ಮಾಡಿಕೊಂಡು, ಸೆ. 1ರಿಂದ ಮಾರುಕಟ್ಟೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದು ಹುಸಿಯಾದರೆ, ಸೆ. 2ರಿಂದ ಯಾವುದೇ ಅನುಮತಿಗಾಗಿ ಕಾಯದೆ, ಸ್ವತಃ ನಾವೇ (ರೈತರು, ವ್ಯಾಪಾರಿಗಳು) ವ್ಯಾಪಾರ ಪ್ರಾರಂಭಿಸುತ್ತೇವೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು