ಸತತ ಮಳೆಗೆ ಮನೆ ಕುಸಿಯುವ ಭೀತಿ
Team Udayavani, Oct 17, 2021, 10:38 AM IST
ಟಿ.ದಾಸರಹಳ್ಳಿ: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ಲಕ್ಕಸಂದ್ರ ಸೇರಿ ಹಲವೆಡೆ ಮನೆಗಳು ಧರೆಗೆ ಉರುಳಿವೆ. ಕ್ಷೇತ್ರದ ಬಾಗಲ ಗುಂಟೆ ವಾರ್ಡ್ನ ಗುಂಡಪ್ಪ ಬಡಾವಣೆಯ ಒಂದು ಮನೆ ಹಾಗೂ ಸೌಂದರ್ಯ ಬಡಾ ವಣೆಯ ಎರಡು ಮನೆಗಳು ಕುಸಿಯುವ ಆತಂಕ ಎದುರಾಗಿದೆ.
ಪೂರ್ಣಿಮಾ, ರಂಗಸ್ವಾಮಿ ಭಾಗ್ಯಮ್ಮ ಎಂಬುವರ ಮನೆಗಳು ಯಾವುದೇ ಕ್ಷಣದಲ್ಲಿ ಬಿದ್ದುಹೋಗುವ ಸಾಧ್ಯತೆಯಿದ್ದು ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ಬಡಾವಣೆಯ ಮಾಲೀಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಸಾಲ ಮಾಡಿ ನಿರ್ಮಿಸಿರುವ ಮನೆಗಳು ಕುಸಿಯುವ ಹಂತ ತಲುಪಿವೆ.
ಪ್ರಾಣ ರಕ್ಷಣೆಗಾಗಿ ಮನೆ ಖಾಲಿ ಮಾಡಿದ್ದೇವೆ ಎಂದು ಮನೆ ಮಾಲೀಕರಾದ ಪೂರ್ಣಿಮಾ ಅಳಲು ತೋಡಿಕೊಂಡರು. ಯಜಮಾನರು ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ನಾನು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರೂ ಜೀವನ ನಿರ್ವಹಣೆ ದುಸ್ತರವಾಗಿದೆ. ಮನೆ ಕುಸಿಯುವ ಭೀತಿಯಿಂದಾಗಿ ಮನೆ ಖಾಲಿ ಮಾಡುವ ಅನಿವಾರ್ಯ ಪರಿಸ್ಥಿತಿಯಿಂದಾಗಿ ಬೀದಿಗೆ ಬೀಳುವಂತಾಗಿದೆ.
ಇದನ್ನೂ ಓದಿ;- ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು
ಸರ್ಕಾರ, ಬಿಬಿಎಂಪಿ ಹಾಗೂ ಸಂಬಂಧಪಟ್ಟವರು ಕೂಡಲೇ ನೆರವಿಗೆ ಧಾವಿಸಬೇಕೆಂದು ಮಳೆಹಾನಿ ಸಂತ್ರಸ್ತೆ ಭಾಗ್ಯಮ್ಮ ಮನವಿ ಮಾಡಿದರು. ಮತ್ತೂಂದೆಡೆ ಮಲ್ಲಸಂದ್ರ ವಾರ್ಡ್ನ ಕೆಂಪೇಗೌಡ ಉದ್ಯಾನದಲ್ಲಿ ಬೃಹತ್ ಪ್ರಮಾಣದ ನೀರು ಸಂಗ್ರಹವಾಗಿ ಕೋಟೆಯ ಗೋಡೆಯ ಭಾಗವೊಂದು ಕುಸಿದಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ದಾಸರಹಳ್ಳಿ ವಲಯ ಜಂಟಿ ಆಯುಕ್ತ ನರಸಿಂಹಮೂರ್ತಿ ಭೇಟಿ ಪರಿಶೀಲನೆ ನಡೆಸಿ ಅನಾಹುತ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ