ಬೀದಿ ನಾಯಿಗಳ ಬಗ್ಗೆ ಅನುಕಂಪವಿರಲಿ: ನಟಿ
Team Udayavani, Sep 1, 2018, 12:19 PM IST
ಬೆಂಗಳೂರು: ಬೀದಿ ನಾಯಿಗಳ ಬಗ್ಗೆಯೂ ಪ್ರೀತಿ, ಕರುಣೆ, ಅನುಕಂಪ ತೋರಬೇಕು ಎಂದು ಚಿತ್ರ ನಟಿ
ಸಂಯುಕ್ತ ಹೊರನಾಡು ಹೇಳಿದ್ದಾರೆ. ರಂಗೋಲಿ ಮೆಟ್ರೋ ಕಲಾ ಕೇಂದ್ರದ ಛಾಯಾ ಆರ್ಟ್ ಗ್ಯಾಲರಿಯಲ್ಲಿ ನಮ್ಮ ಪ್ರಾಣಿಗಳ ಸಂರಕ್ಷಣಾ ಚಾರಿಟಲ್ ಟ್ರಸ್ಟ್ ಆಯೋಜಿಸಿದ್ದ ಸುಜಾಯ ಜಗದೀಶ್ ಅವರ “ಎಂಪ್ಯಾಶನ್’ಕೃತಿ ಬಿಡುಗಡೆ ಹಾಗೂ ಬೀದಿ ನಾಯಿಗಳ ರಕ್ಷಣೆ ಕುರಿತ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ
ಪಾಲ್ಗೊಂಡು ಮಾತನಾಡಿದ ಅವರು, ಆಸರೆ ಇಲ್ಲದ ಪ್ರಾಣಿಗಳ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದು ಮನವಿ ಮಾಡಿದರು.
ಶ್ರೀಲಂಕಾದಲ್ಲಿ ಬೀದಿ ನಾಯಿಗಳ ಬಗ್ಗೆ ವಿಶೇಷ ಕಾಳಜಿ ತೋರಲಾಗುತ್ತಿದೆ. ಅದೇ ರೀತಿ ಅನುಕಂಪ ನಾವು ಕೂಡ ತೋರಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಾಣಿ ಪ್ರಿಯೆ ಸುಜಾಯ ಜಗದೀಶ್ ಅವರ ಕಾರ್ಯ ಶ್ಲಾಘನೀಯ,ನಮ್ಮ ಪ್ರಾಣಿಗಳ ಸಂರಕ್ಷಣಾ ಚಾರಿಟಲ್ ಟ್ರಸ್ಟ್ ನಿಂದ ಸಂರಕ್ಷಿಸಲ್ಪಟ್ಟ 20ಬೀದಿ ನಾಯಿಗಳನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡಲಾಯಿತು ಎಂದು ಪುಸ್ತಕ ರೂಪದಲ್ಲಿ ತೆರೆದಿಟ್ಟಿದ್ದಾರೆ.ಇದಕ್ಕೆ ಕಲಾವಿದೆ ಸಂಧ್ಯಾ ಕೆ.ಶಿರಸಿ ಅವರು ವರ್ಣಚಿತ್ರಗಳ ಮೂಲಕ ಮನ ಮುಟ್ಟುವಂತೆ ಮಾಡಿದ್ದಾರೆ ಎಂದರು.
ಹಿರಿಯ ಕೃಷಿ ವಿಜ್ಞಾನಿ ಡಾ.ಮಂಜುನಾಥ್ ಮಾತನಾಡಿ, ಬೀದಿ ನಾಯಿಗಳ ಬಗ್ಗೆ ಕಾಳಜಿ ತೋರುವ ಇಂತಹ ಅಪರೂಪದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದರು. ಈ ವೇಳೆ ಲೇಖಕಿ ಸುಜಾಯ ಜಗದೀಶ್, ನಮ್ಮ ಪ್ರಾಣಿಗಳ ಸಂರಕ್ಷಣಾ ಚಾರಿಟಲ್ ಟ್ರಸ್ಟ್ನ ಎಂ.ಜಗದೀಶ್, ಕಲಾವಿದೆ ಸಂಧ್ಯಾ ಶಿರಸಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್