ಐದನೇ ಮಹಡಿಯಿಂದ ಬಿದ್ದು ಮಹಿಳೆ ಸಾವು: ಕೊಲೆ ಶಂಕೆ


Team Udayavani, Sep 18, 2018, 12:23 PM IST

idane.jpg

ಬೆಂಗಳೂರು: ಉತ್ತರಹಳ್ಳಿಯ ಮಂತ್ರಿ ಅಫೈನ್‌ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಭಾನುವಾರ ಬಿದ್ದು ಮೃತಪಟ್ಟ ಛತ್ತಿಸ್‌ಘಡ ಮೂಲದ ಸೋನಾಲ್‌ ಅಗರ್‌ವಾಲ್‌  ಸಾವಿಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಠಾಣೆ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಮೃತ ಮಹಿಳೆ ಸೋನಾಲ್‌ ಅಗರ್‌ವಾಲ್‌ ಪತಿ ವೈದ್ಯ ಅವಿನಾಶ್‌ ಅಗರ್‌ವಾಲ್‌ ನೀಡಿದ ದೂರಿನ ಅನ್ವಯ, ಐಪಿಸಿ ಕಲಂ 302ರ ಅನ್ವಯವೇ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ, ತನಿಖೆ ಪೂರ್ಣಗೊಂಡ ಬಳಿಕವೇ ಮಹಿಳೆಯ ಸಾವಿನ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸರು ತಿಳಿಸಿದರು.

ತಾನು ಕೆಲಸ  ಮಾಡುವ ಆಸ್ಪತ್ರೆಯಿಂದ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಮನೆಗೆ ಆಗಮಿಸಿದ್ದಾಗ, ಪತ್ನಿ, ನಾದಿನಿ ಹಾಗೂ ಮಗ ಮನೆಯಲ್ಲಿಯೇ ಇದ್ದರು. ನಾದಿನಿ ಹಾಗೂ ಮಗ ಇಬ್ಬರೂ ಮೊದಲಿಗೆ ಸಾಂಸ್ಕೃತಿಕ ಕಾರ್ಯಕ್ರಮ ನೋಡಿಕೊಂಡು ಬರುತ್ತೇವೆ ಎಂದು ಹೊರಗಡೆ ಹೋದರು. ಇದಾದ ಕೆಲ ಸಮಯದ ಬಳಿಕ ನಾನು ಸ್ನಾನಕ್ಕೆ ಹೊರಟಾಗ ಪತ್ನಿ ಸೋನಾ ಕೂಡ ಹೊರಗಡೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು.

ಇದಾದ ಅರ್ಧ ಗಂಟೆ ಬಳಿಕ ವಾಪಾಸ್‌ ಬಂದ ನಾದಿನಿ ಹಾಗೂ ಮಗ ಸೋನಾಲ್‌  ಅಪಾಟ್‌ಮೆಂಟ್‌ ಕೆಳಗೆ ಬಿದ್ದಿರುವುದನ್ನು ತಿಳಿಸಿದಾಗ ಹೋಗಿ ನೋಡಿದರೆ ಮೃತಪಟ್ಟಿದ್ದರು. ಆಕೆಯ ಕೊಲೆಯಾಗಿರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಅವಿನಾಶ್‌ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ವಿವರಿಸಿದರು. 

ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ದಂಪತಿ ಅನೂನ್ಯವಾಗಿದ್ದರು. ಯಾವುದೇ ವೈಮನಸ್ಸು ಇರಲಿಲ್ಲ ಎಂದು ಸಂಬಂಧಿಕರಿಂದ ತಿಳಿದು ಬಂದಿದೆ. ತನಿಖೆಯನ್ನು° ಹಲವು ಆಯಾಮಗಲ್ಲಿ ಕೂಲಂಕುಶವಾಗಿ ವಿಚಾರಣೆ ನಡೆಸುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯೂ ಬರಬೇಕಿದೆ. ಇನ್ನು ಎರಡು ಮೂರು ದಿನಗಳಲ್ಲಿ ಸೋನಾಲ್‌ ಸಾವಿನ ಬಗ್ಗೆ ಖಚಿತತೆ ಸಿಗಲಿದೆ ಎಂದು ಅಧಿಕಾರಿ ತಿಳಿಸಿದರು.

ಕಳ್ಳತನ ಆರೋಪಕ್ಕೆ ಹೆದರಿದಳೇ?: ಮೃತ ಸೋನಾ ಎದುರುಗಡೆ ಮನೆಯ ಫ್ಲ್ಯಾಟ್‌ನಿಂದ ಹಾರಿ ಕೆಳಗೆ ಬಿದ್ದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಾಫ್ಟ್ವೇರ್‌ ಕಂಪೆನಿಯೊಂದರ ಮಾಲೀಕರು ಆಗಿರುವ  ಆ ಫ್ಲ್ಯಾಟ್‌ನ ಮಾಲೀಕರು ಒಂದು ವಾರದಿಂದ ಬೀಗ ಹಾಕಿಕೊಂಡು ಹೊರಗೆ ತೆರಳಿದ್ದಾರೆ ಎಂಬ ಮಾಹಿತಿಯಿದೆ. ಜತೆಗೆ, ಮೃತ ಸೋನಾಳ  ಒಳಉಡುಪಿನಲ್ಲಿ ಡಾಲರ್‌, ಚಿನ್ನಾಭರಣ, ಹಣ, ಫ್ಲ್ಯಾಟ್‌ನ ಕೀ ಕೂಡ ಇತ್ತು. ಹೀಗಾಗಿ ಹಲವು ಅನುಮಾನಗಳು ಉದ್ಭವಿಸಿವೆ.

ಆಕೆ ಕಳ್ಳತನ ಉದ್ದೇಶದಿಂದ ಫ್ಲ್ಯಾಟ್‌ಗೆ ತೆರಳಿ ಯಾರಾದರೂ ಬಂದಿದ್ದರಿಂದ ಹೆದರಿ ಕೆಳಕ್ಕೆ ಹಾರಿದ್ದಳೇ? ಆಕೆಯನ್ನು ಯಾರಾದರೂ ತಳ್ಳಿದ್ದಾರೆಯೇ? ಎಂಬುದು  ಗೊತ್ತಾಗಬೇಕಿದೆ.ಈಗಾಗಲೇ ಮೃತ ಸೋನಾಳ ಪತಿ, ಅಕ್ಕ-ಪಕ್ಕದ ಫ್ಲ್ಯಾಟ್‌ಗಳ ನಿವಾಸಿಗಳು, ಸೆಕ್ಯೂರಿಟಿ ಗಾರ್ಡ್‌ ಸೇರಿದಂತೆ ಹಲವರಿಂದ ಮಾಹಿತಿ ಕಲೆ ಹಾಕಲಾಗಿದೆ. ಮಹಿಳೆಯ ಬಳಿ ದೊರೆತ ಡಾಲರ್‌, ಚಿನ್ನಾಭರಣ, ಆಕೆ ಕೆಳಗೆ ಹಾರಿದ ಫ್ಲ್ಯಾಟ್‌ ಮಾಲೀಕರ ವಿವರಗಳನ್ನು ತನಿಖಾ ದೃಷ್ಟಿಯಿಂದ ಹಂಚಿಕೊಳ್ಳಲು ಸಾಧ್ಯವಿಲ್ಲ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.