24 ಗಂಟೆಯಲ್ಲಿ ಹಸಿಕಸ ಗೊಬ್ಬರ ಮಾಡುವ ಯಂತ್ರ


Team Udayavani, Dec 11, 2021, 10:51 AM IST

ರಸಗೊಬ್ಬರ ಬಳಕೆ

ಬೆಂಗಳೂರು: ನಗರ ಜಿಲ್ಲಾ ಪಂಚಾಯ್ತಿಯ ಹಲವು ಪ್ರದೇಶಗಳು ಪಾಲಿಕೆ ವ್ಯಾಪ್ತಿಗೆ ಹೊಂದಿಕೊಂಡಿದ್ದು ವೇಗವಾಗಿ ಬೆಳೆಯುತ್ತಿವೆ. ಭವಿಷ್ಯತ್ತಿನಲ್ಲಿ ಕಸದ ಸಮಸ್ಯೆ ಉಂಟಾಗದಿರಲಿ ಎಂಬ ಉದ್ದೇಶದಿಂದ ಬೆಂಗ ಳೂರು ನಗರ ಜಿಲ್ಲಾ ಪಂಚಾಯ್ತಿ ಇದೀಗ ಗ್ರಾಪಂ ಮಟ್ಟದಲ್ಲಿ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ.

ಹೆಸರುಘಟ್ಟ ಹೋಬ ಳಿಯ ಅರಕೆರೆ ಗ್ರಾಪಂಯಲ್ಲಿ ಸ್ವತ್ಛ ಸಂಕೀರ್ಣ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಹೆಜ್ಜೆಯಿರಿಸಿದ್ದು, ಸಾವ ಯವ ತ್ಯಾಜ್ಯ ಪರಿವರ್ತಕ ಯಂತ್ರ ಅಳವಡಿಕೆ ಮಾಡ ಲಾಗುತ್ತಿದೆ. ಇಡೀ ಜಿಲ್ಲೆಗೆ ಮಾದರಿ ಘಟಕ ಇದಾಗಲಿದೆ.ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ 86 ಗ್ರಾಪಂ ಗಳಿದ್ದು ಈಗಾಗಲೇ ಹದಿನೇಳು ಗ್ರಾಪಂಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಮಾಡಲಾಗಿದೆ.

ಗೊಬ್ಬರ ರೈತರ ಬೆಳೆಗಳಿಗೆ ಅಳವಡಿಕೆ: ಅರೆಕೆರೆ ಗ್ರಾಪಂಯ ಘನ ತ್ಯಾಜ್ಯ ಘಟಕದಲ್ಲಿ 24 ಗಂಟೆಗಳಲ್ಲಿ ಹಸಿಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ಸಾವ ಯವ ತ್ಯಾಜ್ಯ ಪರಿವರ್ತಕ ಯಂತ್ರವನ್ನು ಶೀಘ್ರದಲ್ಲೇ ಅಳವಡಿಕೆ ಮಾಡಲಾಗುತ್ತದೆ. ಇದರಿಂದ ಉತ್ಪತ್ತಿಯಾ ಗುವ ಗೊಬ್ಬರವನ್ನು ರೈತರು ಬೆಳೆಗಳಿಗೆ ಬಳಕೆ ಮಾಡಿಕೊಳ್ಳಬಹುದಾಗಿದೆ.

ಜತೆಗೆ ಎರೆಹುಳ್ಳು ಘಟಕ ಕೂಡ ಇಲ್ಲಿರಲಿದೆ. ಅಧಿಕ ಸಂಖ್ಯೆಯಲ್ಲಿ ಹಸಿ ತ್ಯಾಜ್ಯ ಸಂಗ್ರಹವಾಗಲಿದ್ದು ಆ ಹಿನ್ನೆಲೆಯಲ್ಲಿಯೇ ಘಟಕದಲ್ಲಿ ಹಂದಿಗಳನ್ನು ಸಾಕಾ ಣಿಕೆ ಮಾಡುವ ಉದ್ದೇಶ ಕೂಡ ಇದೆ ಎಂದು ಅರೆಕೆರೆ ಗ್ರಾಪಂಯ ಅಧ್ಯಕ್ಷ ತಿಮ್ಮೇಗೌಡ ಮಾಹಿತಿ ನೀಡಿದ್ದಾರೆ. ಭವಿಷ್ಯತ್ತಿನ ದೃಷ್ಟಿಯಲ್ಲಿಟ್ಟುಕೊಂಡು ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಗ್ರಾಪಂ ನಿರ್ಧರಿಸಿದೆ. ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಘಟಕ ನಿರ್ಮಾಣ ವಾಗಲಿದೆ.

ಇದನ್ನೂ ಓದಿ: ರಾಯರ ವೃಂದಾವನಕೆ ಬೆಳ್ಳಿ ಕವಚ ಸಮರ್ಪಣೆ

ಸ್ವತ್ಛ ಭಾರತ್‌ ಮಿಷನ್‌ ಯೋಜನೆ ಅನು ದಾನ ಕೂಡ ಬಳಕೆ ಮಾಡಿಕೊಳ್ಳಲಾಗುವುದು.ಉಳಿದ ಹಣವನ್ನು ಪಂಚಾಯ್ತಿಯ ಸ್ವನಿಧಿಯಿಂದ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆಧುನಿಕ ಯಂತ್ರ ಅಳವಡಿಕೆ: ಗ್ರಾಪಂ ವ್ಯಾಪ್ತಿಯ ಲ್ಲೀಗ ಸುಮಾರು 400 ರಿಂದ 500 ಕೆ.ಜಿ.ಹಸಿಕ ಕಸ ಉತ್ಪತ್ತಿಯಾಗುತ್ತಿದೆ. ಆದರೆ ಭವಿಷ್ಯತ್ತಿನ ಹಿನ್ನೆಲೆಯಲ್ಲಿ 1 ಟನ್‌ ಹಸಿಕಸವನ್ನು ಗೊಬ್ಬರ ಮಾಡುವ ಆಧುನಿಕ ಯಂತ್ರ ಅಳವಡಿಕೆ ಮಾಡಲಾಗುತ್ತಿದೆ.

ಇದು ಜಿಲ್ಲೆಗೆ ಮಾದರಿ ಘಟಕವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿ ದ್ದಾರೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ದೊಡ್ಡ ಮಟ್ಟದಲ್ಲಿ ಅತಿ ವೇಗವಾಗಿ ಅಭಿವೃದ್ದಿಯಾಗು ತ್ತಿದ್ದು ಮುಂದಿನ ದಿನಗಳಲ್ಲಿ ಅದಕ್ಕೆ ಹೊಂದಿಕೊಂಡಿ ರುವ ಪ್ರದೇಶದಲ್ಲಿ ಕಸದ ತೊಂದರೆ ಉಂಟಾಗಬಾ ರದು ಎಂಬ ಸದುದ್ದೇಶ ಕೂಡ ಇದರಲ್ಲಿದೆ ಎಂದು ಹೇಳಿದ್ದಾರೆ.

“ಅರಕೆರೆ ಗ್ರಾಪಂಯಲ್ಲಿ ಭವಿಷ್ಯತ್ತನ್ನು ದೃಷ್ಟಿಯಲ್ಲಿಟ್ಟುಕೊಂಡು ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಮಾಡುವ ಕಾರ್ಯ ನಡೆದಿದೆ. ಹಾಗೆಯೇ ಬಹುವಿಧಗಳಲ್ಲಿ ಕಸ ಸಂಗ್ರಹಣ ಮಾಡುವ ಕಾರ್ಯಕೂಡ ಇಲ್ಲಿ ನಡೆಯಲಿದೆ.ಗಾರ್ಡನ್‌ ಕೂಡ ನಿರ್ಮಾಣ ಮಾಡಲಾಗುತ್ತಿದ್ದು ಮಾದರಿ ಘನ ತ್ಯಾಜ್ಯ ಘಟಕ ನಿರ್ಮಾಣ ಮಾಡಲಾಗುತ್ತದೆ.” ಚಂದ್ರಪ್ಪ, ಪಿಡಿಒ, ಅರೆಕೆರೆ ಗ್ರಾಪಂ

ಎಲ್ಲೆಲ್ಲಿ ಘಟಕ ಸ್ಥಾಪನೆ ?

ನಗರ ಜಿಲ್ಲಾ ಪಂಚಾಯ್ತಿಯ ಪ್ರತಿಯೊಂದು ಗ್ರಾಪಂಯಲ್ಲೂ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಮಾಡುವ ಉದ್ದೇಶ ಜಿಲ್ಲಾಡಳಿತಕ್ಕೆ ಇದೆ. ಈ ಹಿಂದೆ ಕೆಲವು ಗ್ರಾಪಂಯಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತು ಘಟಕ ಸ್ಥಾಪನೆಗೆ ಜಾಗದ ಸಮಸ್ಯೆ ಉಂಟಾಗಿತ್ತು. ಆದರೆ ಈಗ 54 ಗ್ರಾಪಂಗಳಲ್ಲಿ ಜಾಗ ಗುರುತಿಸುವ ಕೆಲಸ ಕೂಡ ನಡೆದಿದೆ ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜಾನುಕುಂಟೆ, ಸಿಂಗನಾಯಕನಹಳ್ಳಿ, ದೊಡ್ಡ ಜಾಲ, ಹುಸ್ಕೂರು, ಹಾಲೂರು, ದೊಡ್ಡಗುಬ್ಬಿ, ಕಣ್ಣೂರು, ಕಿತ್ತಗನೂರು, ಹೆಸರು‌ಘಟ್ಟ, ಶಾಂತಿಪುರ, ಮಾಯಸಂದ್ರ ಸೇರಿದಂತೆ 17 ಗ್ರಾಪಂಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಗಿದೆ.ಕೆಲವು ಘಟಕಗಳಲ್ಲಿ ಉತ್ಪಾದನೆ ಆಗುತ್ತಿರುವ ಗೊಬ್ಬರನ್ನು ರೈತರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

●ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.