ಉಗ್ರ ಪ್ರಚೋದನೆ : ಯುವಕರಿಗೆ ತರಬೇತಿ ನೀಡಲು ಇಕ್ರಾ ಕ್ಯಾಂಪ್‌


Team Udayavani, Oct 9, 2020, 11:31 AM IST

BNG-TDY-1

ಸಾಂದರ್ಭಿಕ ಚಿತ್ರ

ಬೆಂಗಳೂರು: ಐಸಿಸ್‌ ಉಗ್ರ ಸಂಘಟನೆ ಪರವಾಗಿ ಕೆಲಸ ಮಾಡುತ್ತಿದ್ದ ಇಬ್ಬರು ರಾಷ್ಟ್ರೀಯ ತನಿಖಾ ದಳ ( ಎನ್‌ಐಎ) ಬಲೆಗೆ ಬಿದ್ದಿದ್ದು, ಇದರಲ್ಲಿ ಇರ್ಫಾನ್‌ ನಾಸೀರ್‌ ಅಕ್ಕಿ ವ್ಯಾಪಾರ ಮಾಡಿಕೊಂಡು ಯುವಕರನ್ನು ಐಸಿಸ್‌ಸಂಘಟನೆಯತ್ತ ಸೆಳೆಯುತ್ತಿದ್ದ. ಮತ್ತೂಬ್ಬ  ಆರೋಪಿ ಅಬ್ದುಲ್‌ ಖಾದೆರೆ ಇ-ಮೇಲ್‌ ಮೂಲಕ ಉಗ್ರ ಸಂಘಟನೆ ಮಾಡುತ್ತಿದ್ದದ್ದು, ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ನಗರದಲ್ಲಿ ಸಗಟು ಅಕ್ಕಿ ವ್ಯಾಪಾರಿಯಾಗಿರುವ ಇರ್ಫಾನ್‌ ನಾಸೀರ್‌ ನಗರದ ಯುವಕರನ್ನು  ಸಂಘಟನೆಯತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ವಾಟ್ಸ್‌ ಆ್ಯಪ್‌ ಗ್ರೂಪ್‌ ಸೃಷ್ಟಿಸಿ, ಸಿರಿಯಾದಲ್ಲಿನ ವಿಡಿಯೋಗಳನ್ನು ತೋರಿಸಿ ಯುವಕರಿಗೆ ಧರ್ಮಾಂಧತೆ ಬಿತ್ತುತ್ತಿದ್ದ. ಈತನಿಂದ ಪ್ರೇರಣೆಗೊಂಡ ಹಲವರು ಸಿರಿಯಾಗೆ ತೆರಳಿದ್ದಾರೆ. ಐಸಿಸ್‌ ಪರ ಒಲವುಳ್ಳ ಯುವಕರಿಗೆ ತರಬೇತಿ ನೀಡಲು ಇಕ್ರಾ ಕ್ಯಾಂಪ್‌ಗ್ಳನ್ನು ನಡೆಸುತ್ತಿದ್ದ. ಈ ಕ್ಯಾಂಪ್‌ಗ್ಳನ್ನು ನಡೆಸಲು ಸೌದಿ ಅರೇಬಿಯಾದಲ್ಲಿರುವ ಸೈಯದ್‌ ಇಕ್ಬಾಲ್‌ ಜಹೀರ್‌ ಎಂಬಾತನ ನೆರವು ಪಡೆದಿದ್ದ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಇ-ಮೇಲ್‌ ಮೂಲಕ ಸಂಪರ್ಕ!: ಚೆನೈನ ಬ್ಯಾಂಕ್‌ವೊಂದರಲ್ಲಿ ಉದ್ಯೋಗಿ ಆಗಿರುವ ಅಬ್ದುಲ್‌ ಖಾದೆರ್‌ ಐಸಿಸ್‌ ಪರವಾಗಿ ಅಪಾರಒಲವು ಹೊಂದಿದ್ದಾನೆ. ಆತನ ಇ- ಮೇಲ್‌ ಗಳನ್ನು ಶೋಧಿಸಿದಾಗ ಹಲವು ಮಹತ್ತರ ಮಾಹಿತಿಗಳು ಲಭ್ಯವಾಗಿವೆ.ಲೆಬನಾನ್‌ ಹಿಜ್‌º -ಉತ್‌ ತೆಹ್‌ರಿರ್‌ ಸಂಘಟನೆ ಜತೆ ಸಂಪರ್ಕ ಸಾಧಿಸಿ ಇ-ಮೇಲ್‌ ಕಳುಹಿಸಿ ಅಪಾರ ಪ್ರಮಾಣದಲ್ಲಿ ಸಂಘಟನೆಗಾಗಿ ದೇಣಿಗೆ ಪಡೆದುಕೊಂಡಿದ್ದಾನೆ. ಅದೇ ದೇಣಿಗೆ ಹಣವನ್ನು ಸಿರಿಯಾ ಎಮೆರ್ಜೆನ್ಸಿ ಸಮಯದಲ್ಲಿ ಅಂದರೆ ಐಸಿಸ್‌ ಸಂಕಷ್ಟದಲ್ಲಿದ್ದಾಗ ಹಣ ಕಳುಹಿಸಿಕೊಟ್ಟಿದ್ದಾನೆ. ಜತೆಗೆ, ತನ್ನ ಸಹಚರರಿಗೆ ಮುಂದಿನ ಇಸ್ಲಾಮಿಕ್‌ ಸ್ಟೇಟ್ಸ್‌ ಹೇಗಿರಬೇಕುಅದಕ್ಕೆ ಹೇಗೆಲ್ಲಾ ಸಂಘಟನೆ ಬಲಪಡಿಸಬೇಕು ಎಂಬುದರ ಬಗ್ಗೆ ಇ-ಮೇಲ್‌ಗ‌ಳನ್ನು ಕಳುಹಿಸಿಕೊಟ್ಟಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ಹತ್ತು ದಿನ ಕಸ್ಟಡಿಗೆ! : ಶಂಕಿತ ಉಗ್ರರಿಬ್ಬರನ್ನು ಹೆಚ್ಚಿನ ವಿಚಾರಣೆಗೆ ಎನ್‌ಐಎ ಹತ್ತುದಿನಗಳ ಕಾಲ ವಶಕ್ಕೆ ಪಡೆದಿದೆ. ಗುರುವಾರ ಆರೋಪಿಗಳಿಬ್ಬರನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಸಂಧರ್ಭದಲ್ಲಿ ಆರೋಪಿಗಳಿಬ್ಬರು ಸಾಕಷ್ಟು ಯುವಕರಿಗೆ ಐಸಿಸ್‌ ಒಲವು ಬೆಳೆಸಿದ್ದಾರೆ. ಸಿರಿಯಾಗೆ ತೆರಳಲು ನೆರವು ನೀಡಿದ್ದಾರೆ. ಈಗಲೂ ಹಲವರು “ಕುರಾನ್‌ ಸರ್ಕ್‌ಲ್‌’ ಹೆಸರಿನಲ್ಲಿ ಸಕ್ರಿಯರಾಗಿದ್ದಾರೆ. ದಾಳಿ ವೇಳೆ ಹಲವು ಮಹತ್ತರ ಸಾಕ್ಷ್ಯಾಗಳು ಲಭ್ಯವಾಗಿವೆ. ಆರೋಪಿಗಳ ಸಂಪರ್ಕ ಜಾಲ ಹಾಗೂ ಚಟುವಟಿಕೆಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕಿದೆ ಹೀಗಾಗಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಬೇಕು ಎಂದು ಎನ್‌ಐಎ ಪರ ವಿಶೇಷ ಅಭಿಯೋಜಕರಾದ ಪಿ. ಪ್ರಸನ್ನಕುಮಾರ್‌ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಮನವಿಯನ್ನು ನ್ಯಾಯಾಲಯ ಮಾನ್ಯ ಮಾಡಿತು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.