ಕಾಲೇಜಿನಲ್ಲಿ ನೃತ್ಯ ಮಾಡುವ ವಿಷಯಕ್ಕೆ ಜಗಳ : ಚಾಕು ಇರಿದು ವಿದ್ಯಾರ್ಥಿ ಕೊಲೆ
Team Udayavani, Aug 13, 2022, 12:42 PM IST
ಬೆಂಗಳೂರು: ವಿದ್ಯಾರ್ಥಿಗಳ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಶಾಂಪುರ ಮುಖ್ಯರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಎಚ್ಬಿಆರ್ ಲೇಔಟ್ ಸಮೀಪ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೊಹಮ್ಮದ್ ಅರ್ಬಾಜ್ (18) ಕೊಲೆಯಾದ ವಿದ್ಯಾರ್ಥಿ. ಈ ಘಟನೆಯಲ್ಲಿ ಮತ್ತೂಬ್ಬ ಪಿಯುಸಿ ವಿದ್ಯಾರ್ಥಿ ಫರಾಜ್ ಸಹ ಗಾಯಗೊಂಡಿದ್ದಾನೆ.
ಕೃತ್ಯ ಎಸಗಿ ಪರಾರಿಯಾಗಿರುವ ಬಿ.ಕಾಂ ವಿದ್ಯಾರ್ಥಿ ಮೊಹಮ್ಮದ್ ಸಾದ್ ಹಾಗೂ ಆತನ ಸ್ನೇಹಿತರ ಪತ್ತೆಗಾಗಿ ಶೋಧ ನಡೆಸಲಾಗಿದೆ.
ಕಾಲೇಜಿನಲ್ಲಿ ಗುರುವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಮಾಡುವ ವಿಚಾರಕ್ಕೆ ಅರ್ಬಾಜ್ ಹಾಗೂ ಸಾದ್ ಮಧ್ಯೆ ಜಗಳವಾಗಿದೆ. ಈ ವೇಳೆ ಕೆರಳಿದ ಆರೋಪಿ, ಶುಕ್ರವಾರ ಹೊರಗಿನ ಏಳೆಂಟು ಮಂದಿ ಹುಡುಗರನ್ನು ಕರೆತಂದು ಕಾಲೇಜು ಮುಗಿಸಿ ಹೊರಟಿದ್ದ ಅರ್ಬಾಜ್ ಮೇಲೆ ಗಲಾಟೆ ಮಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಅರ್ಬಾಜ್ಗೆ ಚಾಕು ಇರಿದು ಸಾದ್ ಹಾಗೂ ಆತನ ಗೆಳೆಯರು ಓಡಿ ಹೋಗಿದ್ದಾರೆ. ಕೂಡಲೇ ಗಾಯಾಳುವನ್ನು ಸಮೀಪ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ