3ವರ್ಷ ಹೋರಾಡಿ ಟಿಕೆಟ್‌ ಹಣ ವಾಪಾಸ್‌ ಪಡೆದ


Team Udayavani, May 2, 2018, 3:03 PM IST

3varsha.jpg

ಬೆಂಗಳೂರು: ವಿಮಾನ ರದ್ದಾದರೂ ಟಿಕೆಟ್‌ ಕಾಯ್ದಿರಿಸಿದ ಗ್ರಾಹಕರಿಗೆ ಹಣ ವಾಪಸ್‌ ಮಾಡದ ಖಾಸಗಿ ವಿಮಾನಯಾನ ಸೇವಾ ಸಂಸ್ಥೆಯೊಂದು ಇದೀಗ ತನ್ನ ಗ್ರಾಹಕರೊಬ್ಬರಿಗೆ ವಿಮಾನ ಟಿಕೆಟ್‌ ದರವನ್ನು ಬಡ್ಡಿಯೊಂದಿಗೆ ವಾಪಸ್‌ ನೀಡುವುದರ ಜತೆಗೆ ಹೆಚ್ಚುವರಿ ದಂಡವನ್ನೂ ಪಾವತಿಸಬೇಕಾದ ಪ್ರಸಂಗ ಬಂದಿದೆ.

ಏಕಾಏಕಿ ವಿಮಾನ ಪ್ರಯಾಣ ಸೇವೆ ರದ್ದಾಗಿದ್ದರಿಂದ ಮುಂಗಡ ಟಿಕೆಟ್‌ ಬುಕ್‌ ಮಾಡಿ ಹಣ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರು ಸ್ಪೈಸ್‌ ಜೆಟ್‌ ವಿಮಾನಯಾನ ಸಂಸ್ಥೆ ವಿರುದ್ಧ ಗ್ರಾಹಕರ ವೇದಿಕೆಯಲ್ಲಿ ಮೂರು ವರ್ಷಗಳ ಕಾನೂನು ಹೋರಾಟ ನಡೆಸಿ ಜಯ ಗಳಿಸಿದ್ದಾರೆ.

ಸ್ಪೈಸ್‌ಜೆಟ್‌ ಸಂಸ್ಥೆ 2015ರ ಜನವರಿಯಲ್ಲಿ ತನ್ನ ಸೇವೆ ಸ್ಥಗಿತದಿಂದ ತಾವು ಮುಂಗಡವಾಗಿ ಟಿಕೆಟ್‌ಗೆ ಪಾವತಿಸಿದ್ದ ಹಣಕೊಡಿಸುವಂತೆ ಮುನೇಕೊಳಾಲುವಿನ ಅಶ್ವಿ‌ನ್‌ಕುಮಾರ್‌ ಶಂಕರ್‌ ತಲವಾರ್‌ ಸಲ್ಲಿಸಿದ್ದ ದೂರು ಪುರಸ್ಕರಿಸಿರುವ ನಗರದ ನಾಲ್ಕನೇ ಗ್ರಾಹಕರ ವೇದಿಕೆ ಪರಿಹಾರ ಕೊಡಿಸಿದೆ. ಆರ್ಥಿಕ ಸಂಕಷ್ಟ ಹಾಗೂ ಇನ್ನಿತರೆ ಕಾರಣಗಳಿಂದ 2015ರ ಜನವರಿಯಲ್ಲಿ ಸ್ಪೈಸ್‌ ಜೆಟ್‌ ಸಂಸ್ಥೆಯ 300 ವಿಮಾನಗಳ ಹಾರಾಟ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.

ಈ ವೇಳೆ ಗ್ರಾಹಕರಿಗೆ ಆದ ಅನನುಕೂಲಕ್ಕೆ ಕ್ಷಮೆ ಕೋರಿದ ಸಂಸ್ಥೆ, ವಿಮಾನಯಾನ ಕಾಯ್ದೆಯನ್ವಯ ಟಿಕೆಟ್‌ ಹಣ ಮರುಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಆದರೆ, ಈ ವಾದವನ್ನು ತಳ್ಳಿಹಾಕಿರುವ ಗ್ರಾಹಕರ ವೇದಿಕೆ, ಅಸಮರ್ಪಕ ಸೇವೆಯಿಂದ ಆದ ತೊಂದರೆಗೆ ಪರಿಹಾರ ನೀಡಲು ಆದೇಶಿಸಿದ್ದು, ಮುಂದಿವಾರದಲ್ಲಿ ಪರಿಹಾರ ಪಾವತಿಸಲು ನಿರ್ದೇಶಿಸಿತು.

ಖಾಸಗಿ ಕಂಪನಿಯ ಉದ್ಯೋಗಿ ಅಶ್ವಿ‌ನ್‌ಕುಮಾರ್‌ ಜ. 19ಕ್ಕೆ 2015ರ ಅನ್ವಯವಾಗುವಂತೆ ಬೆಂಗಳೂರಿನಿಂದ ದೆಹಲಿ, ದೆಹಲಿಯಿಂದ ಶ್ರೀನಗರಕ್ಕೆ ಮತ್ತು ಫೆ. 2ರಂದು ವಾಪಾಸ್‌ ಪ್ರಯಾಣಕ್ಕೆ ಸ್ಪೈಸ್‌ ಜೆಟ್‌ ವಿಮಾನದಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಿ ಕ್ರೆಡಿಟ್‌ ಕಾರ್ಡ್‌ ಮೂಲಕ 8274 ರೂ. ಪಾವತಿಸಿದ್ದರು. ಆದರೆ, ಜ. 9ಕ್ಕೆ ಅಶ್ವಿ‌ನ್‌ ಕುಮಾರ್‌ ಅವರ ಮೊಬೈಲ್‌ಗೆ ಸ್ಪೈಸ್‌ ಜೆಟ್‌ ಸಂಸ್ಥೆಯಿಂದ ಸಂದೇಶ ಬಂದಿದ್ದು,

ಅದರಲ್ಲಿ, ಜನವರಿ ತಿಂಗಳಲ್ಲಿ ಹಲವು ತಾಂತ್ರಿಕ ಕಾರಣಗಳಿಂದ ನಮ್ಮ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿತ್ತು. ಹೀಗಾಗಿ ಬೇರೆ ವಿಮಾನದಲ್ಲಿ ಪ್ರವಾಸ ಮಾಡಿದ್ದರು. ಬಳಿಕ ಮುಂಗಡ ಟಿಕೆಟ್‌ ಬುಕ್‌ಗೆ ಪಾವತಿಸಿದ್ದ ಹಣ ವಾಪಾಸ್‌ ನೀಡುವಂತೆ ಇ-ಮೇಲ್‌ ಮೂಲಕ ಸ್ಪೈಸ್‌ ಜೆಟ್‌ ಸಂಸ್ಥೆಗೆ ಮನವಿ ಮಾಡಿದ್ದರೂ ಪ್ರಯೋಜನ ವಾಗದ ಹಿನ್ನೆಲೆ  ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿದ್ದರು.

ಪರಿಹಾರ ಏನು?: ಅರ್ಜಿದಾರ ಅಶ್ವಿ‌ನ್‌ಕುಮಾರ್‌ ಅವರು ಪಾವತಿಸಿದ್ದ ಟಿಕೆಟ್‌ ಹಣ 9 ಸಾವಿರ ರೂ., ಸೇವೆ ಸ್ಥಗಿತಗೊಂಡ ಕಾರಣ ಬೇರೆ ಸಂಸ್ಥೆಯಿಂದ ಟಿಕೆಟ್‌ ಖರೀದಿಸಲು ಅನುಭವಿಸಿದ ತೊಂದರೆಗೆ 10 ಸಾವಿರ ರೂ. ಮೊತ್ತವನ್ನು ಶೇ 6ರಷ್ಟು ಬಡ್ಡಿಯೊಂದಿಗೆ ವಾಪಾಸ್‌ ನೀಡಬೇಕು. ಜತೆಗೆ ಕಾನೂನು ಹೋರಾಟದ ಶುಲ್ಕ 1 ಸಾವಿರ ರೂ. ನೀಡುವಂತೆ ಸ್ಪೈಸ್‌ ಜೆಟ್‌ ವ್ಯವಸ್ಥಾಪಕ ನಿರ್ದೇಶಕರಿಗೆ  ಗ್ರಾಹಕರ ವೇದಿಕೆ ಆದೇಶಿಸಿದೆ.

ಟಾಪ್ ನ್ಯೂಸ್

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.