ಕನ್ನಡ ಉಳಿಸಲು ಹೋರಾಡಿ
Team Udayavani, Mar 11, 2019, 6:29 AM IST
ಕೆ.ಆರ್.ಪುರ: ಕನ್ನಡ ಭಾಷೆ, ನೆಲ, ಜಲ, ಗಡಿಯ ವಿಚಾರ ಬಂದಾಗ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಹೋರಾಡಿ ಕನ್ನಡತನ ಉಳಿಸಬೇಕೆಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಮಹೇಶ್ಕುಮಾರ್ ತಿಳಿಸಿದರು. ಇಲ್ಲಿನ ಕೃಷ್ಣ ಚಿತ್ರಮಂದಿರದ ಮುಖ್ಯ ರಸ್ತೆ ಡಾ.ವಿಷ್ಣುಸೇನಾ ಸೇವೆಯ ಸೇನಾ ಕಚೇರಿಯಲ್ಲಿ ನೂತನ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗೆ ಚಾಲನೆ ನೀಡಿ ಮಾತನಾಡಿದರು.
ಸಮಾಜಮುಖೀ ಕಾರ್ಯ: ನೂತನ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ನಾಡಿನ ಏಳಿಗೆಗಾಗಿ ರಾಜ್ಯಾದ್ಯಂತ ವಿವಿಧ ಹೋರಾಟ-ಸಮಾಜಮುಖೀ ಕಾರ್ಯಗಳಲ್ಲಿ ಸಕ್ರಿಯವಾಗಿ ಶ್ರಮಿಸುತ್ತೇವೆ.
ಕಾರ್ಯಕರ್ತರು ಸಂಘಟನೆ ಹೆಸರನ್ನು ದುರ್ಬಳಕೆ ಮಾಡದೆ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕೆಂದರು. ಈ ವೇಳೆ ಕೆ.ಆರ್.ಪುರದ ವಿವಿಧಡೆ ಬೈಕ್ ರ್ಯಾಲಿ ನಡೆಯಿತು. ದೇವಸಂದ್ರದ ವಿದ್ಯಾರಣ್ಯ ಅನಾಥಾಶ್ರಮದ ಮಕ್ಕಳಿಂದ ನೂತನ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಉದ್ಘಾಟಿಸಲಾಯಿತು.
ಕೆ.ಆರ್.ಪುರ ಘಟಕದ ಡಾ.ವಿಷ್ಣುಸೇನಾ ಸೇವೆಯ ಅಧ್ಯಕ್ಷ ಎಂ.ಬಾಬು, ವಿಜಯಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಪ್ರವೀಣ್ಗೌಡ, ಕಾರ್ಯದರ್ಶಿ ಉಮೇಶ್, ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಸುಬ್ರಮಣ್ಯ, ಮನು, ಪುರುಷೋತ್ತಮ, ಸಂತೋಷಕುಮಾರ್, ನಾಯಕ್, ಫಣೀಂದ್ರ, ರಮೇಶ್, ನಿಖೀಲ್ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ