ರುದ್ರಭೂಮಿ ತೆರವಿಗೆ ಮುಂದಾದರೆ ಹೋರಾಟ
Team Udayavani, May 18, 2019, 3:00 AM IST
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌರಿಪಾಳ್ಯದ ಹಿಂದೂ ರುದ್ರಭೂಮಿ ತೆರವುಗೊಳಿಸಲು ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕಾಳಿಮಠದ ರಿಷಿಕುಮಾರ ಅವರು ಎಚ್ಚರಿಕೆ ನೀಡಿದ್ದಾರೆ.
ಗೋರಿಪಾಳ್ಯ ಹಿಂದೂ ರುದ್ರಭೂಮಿ ತೆರವುಗೊಳಿಸಿ ಮೈದಾನ ಮಾಡಲಾಗುತ್ತಿದೆ ಎಂಬ ವದಂತಿ ಹರದಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ರುದ್ರಭೂಮಿಯಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಶ್ರೀರಾಮಸೇನೆ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದರು.
ಸಚಿವ ಜಮೀರ್ ಅಹಮದ್ ಹಾಗೂ ಪಾಲಿಕೆ ಸದಸ್ಯೆ ಪತಿ ಅಲ್ತಾಫ್ಖಾನ್ ಗೌರಿಪಾಳ್ಯದ ಹಿಂದೂ ರುದ್ರಭೂಮಿ ತೆರವುಗೊಳಿಸಿ ಮೈದಾನ ಮಾಡಲು ಮುಂದಾಗಿದ್ದಾರೆ ಎಂಬ ಫೋಸ್ಟ್ಗಳು ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹೀಗಾಗಿ ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದು, ಇದು ಮುಂದುವರಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸದಸ್ಯೆ ಸೀಮಾ ಅವರ ಪತಿ ಅಲ್ತಾಫ್ ಖಾನ್, ರುದ್ರಭೂಮಿಯನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸುವ ಕಾರ್ಯಕ್ಕೆ ನಾವು ಮುಂದಾಗಿಲ್ಲ. ನಾವು ಹಿಂದೂಪರವಾಗಿದ್ದು, ನಾವು ರುದ್ರಭೂಮಿ ತೆರವುಗೊಳಿಸಲು ಮುಂದಾಗಿದ್ದೇವೆ ಎಂಬುದನ್ನು ಸಾಬೀತುಪಡಿಸಿದರೆ, ತಮ್ಮ ಪತ್ನಿಯಿಂದ ಪಾಲಿಕೆ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದಾಗಿ ಸವಾಲು ಹಾಕಿದರು.
ಆಗ ರಿಷಿಕುಮಾರ ಅವರು ರುದ್ರಭೂಮಿಯಲ್ಲಿ ಗೋರಿ ಕಲ್ಲುಗಳನ್ನು ತೆರವುಗೊಳಿಸಿರುವ ಜಾಗವನ್ನು ತೋರಿಸಿದಾಗ, ಇದು ರಾಜಕೀಯವಾಗಿ ತಮಗೆ ಆಗದವರು ಮಾಡಿದ್ದಾರೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…