ಕಡತ ವಿಲೇವಾರಿಗೆ ಶರವೇಗ


Team Udayavani, Mar 22, 2018, 6:00 AM IST

vidhana-soudha-750.jpg

ಬೆಂಗಳೂರು: ರಾಜ್ಯಾಡಳಿತದ ಶಕ್ತಿ ಕೇಂದ್ರ ವಿಧಾನಸೌಧ, ವಿಕಾಶಸೌಧ ಸೇರಿ ಆಡಳಿತ ಯಂತ್ರದ ಪ್ರಮುಖ ಕೇಂದ್ರಗಳು ಈಗ “ಕಡತ ವಿಲೇವಾರಿ’ ತರಾತುರಿಯಲ್ಲಿವೆ. ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಿ ಕಚೇರಿಗಳ ಹಿರಿಯ-ಕಿರಿಯ ಅಧಿಕಾರಿಗಳು ಬಿಡುವಿಲ್ಲದ ಕೆಲಸದಲ್ಲಿ ಮಗ್ನರಾಗಿದ್ದಾರೆ.

ಸರ್ಕಾರದ ಹಲವಾರು ಯೋಜನೆಗಳ ಅನುಷ್ಠಾನ, ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಒಂದೆಡೆಯಾದರೆ ಹಲವಾರು ದಿನಗಳಿಂದ ನೆನಗುದಿಗೆ ಬಿದ್ಧಿದ್ದ ಕಡತಗಳ ವಿಲೇವಾರಿಗೆ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಮುಖ್ಯಮಂತ್ರಿಗಳು, ಸಚಿವರ ಇಲಾಖೆಗಳಿಗೆ ಸಂಬಂಧಪಟ್ಟ ಕಡತಗಳು ಶಕ್ತಿ ಕೇಂದ್ರದಲ್ಲಿ ಒಂದು ಮೇಜಿನಿಂದ ಇನ್ನೊಂದು ಮೇಜಿಗೆ ಓಡಾಡುತ್ತಿರುವುದು ಒಂದೆಡೆಯಾದರೆ, ಶಾಸಕರ ಕ್ಷೇತ್ರದ ಯೋಜನೆಗಳ ಕಡತಗಳೂ ತರಾತುರಿಯಲ್ಲಿ ಸರ್ಕಾರದ ಆದೇಶ ರೂಪಕ್ಕಿಳಿಯುತ್ತಿವೆ.

ಇದೇ 23 ರಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲಿದೆ ಎನ್ನುವ ಸುದ್ದಿ ದಟ್ಟವಾಗಿ ಹರಡಿದ್ದರ ಪರಿಣಾಮ ಸರ್ಕಾರಿ ಕಚೇರಿಗಳಲ್ಲಿ ಕಡತಗಳು ಕ್ಷಿಪ್ರಗತಿಯಲ್ಲಿ ವಿಲೇವಾರಿಯಾಗುತ್ತಿವೆ.

ಅಧಿಕಾರಿಗಳ ಮೇಲೆ ಒತ್ತಡ:
ನೀತಿ ಸಂಹಿತೆ ಅಡ್ಡಿಬರುವುದರಿಂದ ವಿಳಂಬ ಮಾಡದೇ ಕಡತ ವಿಲೇವಾರಿಗೆ ಅಧಿಕಾರಿಗಳ ಮೇಲೆ ಸಚಿವರು, ಶಾಸಕರು ಒತ್ತಡ ಹಾಕುತ್ತಿದ್ದಾರೆ. ಕಾನೂನಿನ ಪರಿಮಿತಿಯೊಳಗಿರುವ ಫೈಲ್‌ಗ‌ಳನ್ನೂ ಅಧಿಕಾರಿಗಳು ಸಹಿ ಹಾಕಿ ಕಳುಹಿಸುತ್ತಿದ್ದಾರೆ. ಹಲವು ಕಡತಗಳನ್ನು ವಿಲೇವಾರಿ ಮಾಡಲು ಸಚಿವರು, ಶಾಸಕರು ಮತ್ತವರ ಬೆಂಬಲಿಗರಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಅಧಿಕಾರಿಗಳು ನಿಯಮ ಉಲ್ಲಂ ಸಲು ನಿರಾಕರಿಸಿದರೂ ಪ್ರಭಾವ ಶಾಲಿ ಸಚಿವರು ಪಟ್ಟು ಹಿಡಿದು ಕಡತಗಳನ್ನು ವಿಲೇವಾರಿ ಮಾಡಿಸಿಕೊಳ್ಳುತ್ತಿದ್ದಾರೆಂದು ಹೇಳಲಾಗಿದೆ.

ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಕಡತವನ್ನು ಸಚಿವ ಸಂಪುಟಕ್ಕೆ ಕಳಿಸಿ ಅಲ್ಲಿ ನಾವು ವಿಶೇಷ ಅನುಮತಿ ಪಡೆದು ಮುಖ್ಯಮಂತ್ರಿಗಳಿಂದ, ಇಲ್ಲವೇ ಸಂಬಂಧಪಟ್ಟ ಸಚಿವರಿಂದ ಅನುಮೋದನೆ ಪಡೆದುಕೊಳ್ಳುತ್ತೇವೆಂದು ಬಲವಂತವಾಗಿ ಕಡತಕ್ಕೆ ಅಧಿಕಾರಿಗಳಿಂದ ಸಹಿ ಹಾಕಿಸಲಾಗುತ್ತಿದೆ. ಇದರಿಂದ ಅಧಿಕಾರಿಗಳು ಸಂಕಷ್ಟಕ್ಕೆ ಎದುರಿಸಬೇಕಾಗಿವೆ. ಕಾನೂನಿನ ವ್ಯಾಪ್ತಿ ಮೀರಿ ಸಹಿಯನ್ನೂ ಹಾಕಲಾಗದೇ, ಸಚಿವರ ಎದುರು ಉತ್ತರ ನೀಡಲಾಗದೇ ಪೇಚಿಗೆ ಸಿಲುಕಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳನ್ನು ಪ್ರತಿಷ್ಟಾಪಿಸುವಂತಿಲ್ಲವೆಂದು ಸುಪ್ರೀಂ ಕೋರ್ಟ್‌ ತೀರ್ಪಿದ್ದರೂ ಹಿರಿಯ ಸಚಿವರೊಬ್ಬರು ತಮ್ಮ ಕ್ಷೇತ್ರದಲ್ಲಿ 7 ಪ್ರತಿಮೆಗಳ ಅನಾವರಣಕ್ಕೆ ಪಟ್ಟು  ಹಿಡಿದು ಒತ್ತಡ ಹೇರಿದ್ದರಿಂದ ಅಧಿಕಾರಿ ಗೊಂದಲಕ್ಕೊಳಗಾಗಿ ದಾರಿಕಾಣದೆ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

23 ರಂದು ಸಂಪುಟ ಸಭೆ
ಕೇಂದ್ರ ಚುನಾವಣೆ ಆಯೋಗ ಶುಕ್ರವಾರ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎನ್ನುವ ವದಂತಿ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನವೇ ಸರ್ಕಾರದ ಕೆಲವು ಯೋಜನೆಗಳಿಗೆ ಅನುಮೋದನೆ ಪಡೆಯಲು ಸಿಎಂ ಸಿದ್ದರಾಮಯ್ಯ ಮಾ.23 ರಂದು ಸಚಿವ ಸಂಪುಟ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ಸಂಪುಟ ಸಭೆ ನಡೆಯಲಿದ್ದು, ವಾರದಲ್ಲಿ ನಡೆಯುತ್ತಿರುವ ಎರಡನೇ ಸಂಪುಟ ಸಭೆ ಇದಾಗಿದೆ.

ಸೋಮವಾರವಷ್ಟೇ ಸಂಪುಟ ಸಭೆ ನಡೆದು ಅದರಲ್ಲಿ ಲಿಂಗಾಯತ -ವೀರಶೈವ ಸಮುದಾಯಕ್ಕೆ ಪ್ರತ್ಯೇಕ ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವ ತೀರ್ಮಾನ ಕೈಗೊಳ್ಳಲಾಗಿತ್ತು. 23ರ ಸಭೆಯಲ್ಲೂ ಅನೌಪಚಾರಿಕವಾಗಿ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.