ಕಡತ ವಿಲೇವಾರಿ ಈಗ ಸೂಪರ್‌ ಫಾಸ್ಟ್‌


Team Udayavani, Oct 9, 2018, 6:00 AM IST

coalition-government-file.jpg

ಬೆಂಗಳೂರು: ಕಳೆದ ಮೂರು ತಿಂಗಳಲ್ಲಿ ಸಚಿವಾಲಯದಲ್ಲಿ ಕಡತಗಳ ವಿಲೇವಾರಿ ಕಾರ್ಯ ಚುರುಕುಗೊಂಡಿದ್ದು, ಬರೋಬ್ಬರಿ 41 ಸಾವಿರ ಕಡತಗಳು ಇತ್ಯರ್ಥಗೊಂಡಿವೆ.

ಸದ್ಯ ಕಂದಾಯ ಇಲಾಖೆಯಲ್ಲಿ 15,000 ಹಾಗೂ ನಗರಾಭಿವೃದ್ಧಿ ಇಲಾಖೆಯಲ್ಲಿ 13,000 ಕಡತಗಳು ಬಾಕಿ ಇದ್ದು, ಇವುಗಳ ತ್ವರಿತ ವಿಲೇವಾರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಸಚಿವಾಲಯದಲ್ಲೂ ಕಡತ ವಿಲೇವಾರಿ ನಿರೀಕ್ಷಿತ ಪ್ರಮಾಣದಲ್ಲಿರಲಿಲ್ಲ. ಆ ಹಿನ್ನೆಲೆಯಲ್ಲಿ ಹಿಂದೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಟಿ.ಎಂ.ವಿಜಯ ಭಾಸ್ಕರ್‌ ಅವರು ದೈನಂದಿನ ಕಡತ ಬಾಕಿ ಕುರಿತು ಎಸ್‌ಎಂಎಸ್‌ ರವಾನಿಸುವ ವ್ಯವಸ್ಥೆ ಜಾರಿಗೊಳಿಸಿದ್ದರು. ಅಂದರೆ ಅಧಿಕಾರಿಗಳು ಒಂದು ಕಡತವನ್ನು ಐದು ದಿನದಲ್ಲಿ ವಿಲೇವಾರಿ ಮಾಡಬೇಕಿತ್ತು. ಕಡತ ಪರಿಶೀಲಿಸಿ ಮುಂದಿನ ಕ್ರಮಕ್ಕೆ ಮೇಲಿನ ಅಧಿಕಾರಿಗಾಗಲಿ ಇಲ್ಲವೇ ಅಧೀನ ಅಧಿಕಾರಿಗಾಗಲಿ ರವಾನಿಸಬೇಕಿತ್ತು. ಅದರಂತೆ 15 ದಿನಗಳ ಕಾಲ ವಿಲೇವಾರಿ ಮಾಡದೆ ಉಳಿಸಿಕೊಂಡಿರುವ ಕಡತಗಳ ವಿವರವನ್ನು ಎಸ್‌ಎಂಎಸ್‌ ಮೂಲಕ ಕಳುಹಿಸುವಂತೆ ಸೂಚಿಸಿದ್ದರು. ಅದರ ಪ್ರಕಾರ ಆರು ತಿಂಗಳ ಹಿಂದೆ 1.50 ಲಕ್ಷಕ್ಕೂ ಹೆಚ್ಚು ಕಡತಗಳು ಬಾಕಿ ಉಳಿದಿದ್ದವು.

41,000 ಕಡತ ವಿಲೇವಾರಿ:
ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ವಿಜಯ ಭಾಸ್ಕರ್‌ ಅವರು ಕಡತ ವಿಲೇವಾರಿಗೆ ಆದ್ಯತೆ ನೀಡಿ ನಿರಂತರವಾಗಿ ಮೇಲ್ವಿಚಾರಣೆ ನಡೆಸಲಾರಂಭಿಸಿದ್ದಾರೆ. ಪರಿಣಾಮವಾಗಿ 41,000ಕ್ಕೂ ಹೆಚ್ಚು ಕಡತಗಳು ಇತ್ಯರ್ಥಗೊಂಡಿವೆ. ಮುಖ್ಯ ಕಾರ್ಯದರ್ಶಿಗಳೇ ಖುದ್ದಾಗಿ ಇದರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಮಾಸಿಕ 150ಕ್ಕೂ ಹೆಚ್ಚು ಸಭೆ:
ಕಾರ್ಯಾಂಗದ ಮುಖ್ಯಸ್ಥರಾದ ಮುಖ್ಯ ಕಾರ್ಯದರ್ಶಿಗಳು  ಮಾಸಿಕ 150ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ಮುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ತಿಂಗಳ ಮೊದಲ ದಿನ ಕಾರ್ಯದರ್ಶಿಗಳೊಂದಿಗೆ ಬಜೆಟ್‌ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಾರೆ. ಮೂರನೇ ದಿನ ಹೈಕೋರ್ಟ್‌, ಮಾನವ ಹಕ್ಕುಗಳ ಆಯೋಗ ಸೇರಿದಂತೆ ಇತರೆ ಇಲಾಖೆಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಚರ್ಚೆ. ನಾಲ್ಕನೇ ದಿನ ಕೆಪಿಎಸ್‌ಸಿಗೆ ಸಂಬಂಧಪಟ್ಟ ವಿಚಾರ ಕುರಿತು ಸಭೆ. 8ನೇ ದಿನ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ. ನಾನಾ ಯೋಜನೆಗೆ ಭೂಸ್ವಾಧೀನ, ಅರಣ್ಯ ಇಲಾಖೆ ಅನುಮತಿ ಇತರೆ ಪ್ರಗತಿ ಪರಿಶೀಲಿಸುತ್ತಾರೆ.

16ರಂದು ಬಜೆಟ್‌ ಅನುಷ್ಠಾನದ ಬಗ್ಗೆ ಕಾರ್ಯದರ್ಶಿಗಳ ಸಭೆ. 17ರಂದು ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿ ಮಂಡಳಿ ಸಭೆ. 18ನೇ ತಾರೀಖೀನಂದು ಎಲ್ಲ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಮಾತೃಪೂರ್ಣ, ಅಪೌಷ್ಠಿಕತೆ ನಿವಾರಣೆ, ಸ್ವತ್ಛ ಭಾರತ್‌ ಅಭಿಯಾನ ಕುರಿತು ಜಿಲ್ಲಾವಾರು ಪ್ರಗತಿ ಪರಿಶೀಲನೆ. 20ರಂದು ಕೆಡಿಪಿ ಸಭೆ. 25ರಂದು ಹುಬ್ಬಳ್ಳಿ- ಧಾರವಾಡ ನಗರ ಅಭಿವೃದ್ಧಿ ಕುರಿತಂತೆ ಸಭೆ. ಜತೆಗೆ ಇ- ಆಡಳಿತ ಪ್ರಗತಿ ಪರಿಶೀಲನೆ.

ರಾಜಧಾನಿಯ ಅಭಿವೃದ್ಧಿ ಕಾರ್ಯಗಳಿಗೂ ಗಮನ ನೀಡಿರುವ ಮುಖ್ಯ ಕಾರ್ಯದರ್ಶಿಗಳು ತಿಂಗಳ ಮೊದಲ ಶುಕ್ರವಾರ ಸಬ್‌ಅರ್ಬನ್‌ ರೈಲ್ವೆ ಯೋಜನೆ, ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆ ಪ್ರಗತಿ ಪರಿಶೀಲನೆ ನಡೆಸುತ್ತಾರೆ. ಎರಡನೇ ಶುಕ್ರವಾರ ಬಿಬಿಎಂಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ನಿತ್ಯ ಮಧ್ಯಾಹ್ನ 3.30ರಿಂದ 4.30ರವರೆಗೆ ಸಾರ್ವಜನಿಕರನ್ನು ಭೇಟಿಯಾಗುತ್ತಾರೆ.

ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತು
ಕಾರ್ಯಾಂಗದ ಸುಗಮ ಕಾರ್ಯ ನಿರ್ವಹಣೆಗೆ ಒತ್ತು ನೀಡಲಾಗಿದ್ದು, ಅದಕ್ಕೆ ಪೂರಕವಾಗಿ ಸಭೆಗಳನ್ನು ನಡೆಸಲಾಗುತ್ತಿದೆ. ಇಲಾಖೆಗಳ ನಡುವೆ ಸಮನ್ವಯಕ್ಕೂ ಒತ್ತು ನೀಡಲಾಗಿದೆ. ನಿತ್ಯ ಕನಿಷ್ಠ ಐದು ಸಭೆಗಳಿರುತ್ತವೆ. ತಿಂಗಳಿಗೆ 125ರಿಂದ 150 ಸಭೆ ನಡೆಸುತ್ತೇನೆ. ಕಡತ ವಿಲೇವಾರಿಗೂ ಆದ್ಯತೆ ನೀಡಲಾಗಿದ್ದು, ವಿಲೇವಾರಿಯಾಗದ ಕಡತಗಳ ಸಂಖ್ಯೆ 1.50 ಲಕ್ಷದಿಂದ 1.09 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ “ಉದಯವಾಣಿ’ಗೆ ತಿಳಿಸಿದರು.

ನಿಯಮಿತ ಸಭೆಗಳಿಂದಾಗಿ ಯೋಜನೆಗಳ ಅನುಷ್ಠಾನವೂ ವೇಗ ಪಡೆಯುತ್ತದೆ. ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ವಿದ್ಯುತ್‌ ಪೂರೈಕೆ ಕುರಿತಂತೆ ಪವರ್‌ ಗ್ರಿಡ್‌ ಕಾರ್ಪೊರೇಷನ್‌ ಯೋಜನೆಯೊಂದು ಮೂರ್‍ನಾಲ್ಕು ವರ್ಷದಿಂದ ಬಾಕಿ ಇತ್ತು. ತಮಿಳುನಾಡು, ಆಂಧ ಪ್ರದೇಶದಲ್ಲಿ ಈ ಯೋಜನೆ ಕಾರ್ಯಗತವಾಗಿದೆ. ಮುಖ್ಯಮಂತ್ರಿಗಳ ಸೂಚನೆಯಂತೆ 10 ದಿನಕ್ಕೊಮ್ಮೆ ಪ್ರಗತಿ ಪರಿಶೀಲಿಸಲಾಗುತ್ತಿದ್ದು, ಇದೀಗ ವೇಗ ಪಡೆದುಕೊಂಡಿದೆ. ರೈಲ್ವೆ, ಹೆದ್ದಾರಿ, ಹಾಸ್ಟೆಲ್‌, ವಸತಿ ಶಾಲೆ, ನಿವೇಶನರಹಿತರಿಗೆ ಮನೆ ನಿರ್ಮಾಣ ಯೋಜನೆಗಳಿಗೆ ಆದ್ಯತೆ ಮೇರೆಗೆ ಭೂಸ್ವಾಧೀನಕ್ಕೆ ಒತ್ತು ನೀಡಲಾಗಿದೆ. ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ ಜನರಿಗೆ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ ಎಂದು ಹೇಳಿದರು.

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.