ಚಿಕಿತ್ಸೆ ಫಲಿಸದೆ ಸಂಜನಾ ಸಾವು
Team Udayavani, Oct 20, 2017, 6:15 AM IST
ಬೆಂಗಳೂರು: ಈಜಿಪುರದ ಗುಂಡಪ್ಪ ಗಾರ್ಡ್ನ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂರು ವರ್ಷದ ಸಂಜನಾ ಗುರುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಇಡೀ ದುರುತಂದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ 8 ಮಂದಿ ಅಸುನೀಗಿದಂತಾಗಿದೆ.
ಅ.16ರಂದು ಬೆಳಗ್ಗೆ 6.45ರ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಕಟ್ಟಡ ಕುಸಿದು ಏಳು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದರು. ಈ ಪೈಕಿ ಸಂಜನಾ ಪೋಷಕರು ಕೂಡ ದಾರುಣವಾಗಿ ಸಾವನ್ನಪ್ಪಿದ್ದರು. ಆದರೆ, ಅವಶೇಷಗಳಡಿ ಸಿಲುಕಿದ್ದ ಸಂಜನಾಳನ್ನು ರಕ್ಷಣಾ ಪಡೆಗಳು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಶೇ.70ರಷ್ಟು ಸುಟ್ಟಗಾಯಗಳಿಂದ ನರಳುತ್ತಿದ್ದ ಈಕೆಯನ್ನು ವೈದ್ಯರು ತುರ್ತು ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಮೊದಲೆರಡು ದಿನಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಸಂಜನಾಳ ಆರೋಗ್ಯದಲ್ಲಿ ಗುರುವಾರ ಸಂಜೆ ಏಕಾಏಕಿ ಏರುಪೇರು ಕಂಡು ಬಂದಿದೆ. ಕೂಡಲೇ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಅಣಿ ಮಾಡಿಕೊಳ್ಳುತ್ತಿದ್ದರು. ಅಷ್ಟರಲ್ಲಿ ಸಂಜನಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಬಾಲಕಿಯ ದೇಹ ಶೇ.70 ರಷ್ಟು ಸುಟ್ಟು ಹೋಗಿತ್ತು. ಮೊದಲ ಎರಡು ದಿನಗಳ ಅವಧಿಯಲ್ಲಿ ಸಂಜನಾ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿತ್ತು. ಆದರೆ, ಗುರುವಾರ ಬೆಳಗ್ಗೆಯಿಂದ ಆಕೆ ಸ್ಥಿತಿ ಗಂಭೀರವಾಗಿತ್ತು. ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಇದಕ್ಕೂ ಮೊದಲು ಬೆಳಗ್ಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದರು. ಪ್ರಕರಣದ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಜಳಾಳ ಅಜ್ಜಿ ಶಾಂತಮ್ಮ, “”ಮಗ, ಸೊಸೆಯನ್ನು ಕಳೆದುಕೊಂಡ ನನಗೆ ಮೊಮ್ಮಗಳು ಬದುಕುಳಿಯುತ್ತಾಳೆ ಎಂಬ ನಂಬಿಕೆ ಇತ್ತು. ಇದು ಈಗ ಹುಸಿಯಾಗಿದೆ. ಇದೀಗ ನನಗೆ ಯಾರು ಇಲ್ಲ. ಒಬ್ಬಂಟಿಯಾಗಿದ್ದೇನೆ. ಬುಧವಾರ ರಾತ್ರಿ ನನ್ನೊಂದಿಗೆ ಮಾತನಾಡಿ ಅಪ್ಪ, ಅಮ್ಮನ ಬಗ್ಗೆ ವಿಚಾರಿಸಿದ್ದಳು. ಬೆಳಗ್ಗೆ ನಾನೇ ಹಾಲು ಕುಡಿಸಿದ್ದೆ. ವೈದ್ಯರು ಕೂಡ ಉತ್ತಮವಾಗಿಯೇ ಚಿಕಿತ್ಸೆ ನೀಡಿದ್ದಾರೆ. ಆದರೆ, ಸಂಜೆ ವೇಳೆಗೆ ಸಾವನ್ನಪ್ಪಿದ್ದಾಳೆ. ಶುಕ್ರವಾರ ಮಧ್ಯಾಹ್ನ ಅಂತ್ಯಸಂಸ್ಕಾರ ಮಾಡಲಾಗುವುದು” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ