30 ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ ನರ್ತನ


Team Udayavani, Feb 25, 2019, 6:30 AM IST

30akre.jpg

ಬೆಂಗಳೂರು/ಯಲಹಂಕ: ವಾಯುನೆಲೆ ಬಳಿಯ ಜಾರಕಬಂಡೆ ಕಾವಲ್‌ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು 30 ಎಕರೆ ಅರಣ್ಯ ಪ್ರದೇಶ ಆಹುತಿಯಾಗಿದೆ. ಯಲಹಂಕ ವಾಯುನೆಲೆಯ ಪಾರ್ಕಿಂಗ್‌ನಲ್ಲಿ ಫೆ.23ರಂದು ಅಗ್ನಿ ದುರಂತ ಸಂಭವಿಸಿ 300 ಕಾರುಗಳು ಭಸ್ಮವಾದ ಘಟನೆ ಬೆನ್ನಲ್ಲೇ, ವಾಯುನೆಲೆ ಹಿಂಭಾಗದ ಜಾರಕಬಂಡೆ ಕಾವಲ್‌ನಲ್ಲಿ ಭಾನುವಾರ ಬೆಂಕಿ ಹೊತ್ತಿಕೊಂಡಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಿವಕೋಟೆಯ ವೀರಭದ್ರಪ್ಪ ಎಂಬುವವರ ನೀಲಗಿರಿ ತೋಟದಲ್ಲಿ ಕಾಣಿಸಿಕೊಂಡ ಬೆಂಕಿ, ಕೆಲವೇ ನಿಮಿಷಗಳಲ್ಲಿ ಜಾರಕಬಂಡೆ ಪ್ರದೇಶಕ್ಕೂ ವ್ಯಾಪಿಸಿದೆ. ನೋಡ ನೋಡುತ್ತಿದ್ದಂತೆ ಸುಮಾರು 30 ಎಕರೆ ಪ್ರದೇಶದಲ್ಲಿ ವ್ಯಾಪಿಸಿ ಉರಿದಿದೆ.

ವಿಷಯ ತಿಳಿದ ಕೂಡಲೇ ಅರಣ್ಯಾಧಿಕಾರಿಗಳು ಹಸಿಸೊಪ್ಪಿನ ಮೂಲಕ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, 1 ಗಂಟೆ ಸತತ ಕಾರ್ಯಾಚರಣೆ ನಂತರ ಬೆಂಕಿ ನಂದಿಸಿವೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹೊತ್ತಿದ್ದು ಹೇಗೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಯಾರಾದರೂ ಕಿಡಿಗೇಡಿಗಳು ಬೆಂಕಿ ಹಚ್ಚಿದರೇ ಅಥವಾ ಬೇಸಿಗೆಯಾದ್ದರಿಂದ ಬಿಸಿಲಿನ ಝಳಕ್ಕೆ ಬೆಂಕಿ ಹೊತ್ತಿಕೊಂಡಿತೇ ಎಂದು ತಿಳಿಯಬೇಕಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದರು.

ಜನವರಿಯಿಂದ 740 ಕರೆಗಳು: ಬೆಂಗಳೂರು ನಗರ ಪ್ರದೇಶದಲ್ಲಿ 2019ರ ಜನವರಿಯಿಂದ ಬೆಂಕಿ ಅವಘಡಗಳಿಗೆ ಸಂಭವಿಸಿದಂತೆ ಇದುವರೆಗೂ 740 ದೂರುಗಳು ಬಂದಿದ್ದು, ತಕ್ಷಣ ಸ್ಪಂದಿಸಿ ಬೆಂಕಿ ನಂದಿಸಲಾಗಿದೆ. ಕಳೆದ 15 ದಿನಗಳಿಂದ ಅರಣ್ಯ ಪ್ರದೇಶದಲ್ಲಿ ಬೆಂಕಿ ನಂದಿಸುವ ಕಾರ್ಯಕ್ಕೂ ತಂಡಗಳು ತೆರಳಿದ್ದವು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.