ಬಣ್ಣದ ಗೋದಾಮಿಗೆ ಬೆಂಕಿ


Team Udayavani, Feb 14, 2019, 7:15 AM IST

blore-2.jpg

ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ (ಬಿಐಇಸಿ) ಹಿಂಭಾಗದಲ್ಲಿರುವ ಕುದುರಗೆರೆ ಗ್ರಾಮದಲ್ಲಿನ ಯುನೈಟೆಡ್‌ ಪೇಂಟ್ಸ್‌ ಗೋದಾಮಿನಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ದಟ್ಟ ಹೊಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದನ್ನು ಕಂಡು ಸುತ್ತಲ ನಾಗರಿಕರು ಕೆಲ ಕಾಲ ಆತಂಕಕ್ಕೆ ಒಳಗಾದರು.

ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಕೋಟ್ಯಂತರ ರೂ. ಮೌಲ್ಯದ ಕಚ್ಚಾ ತೈಲ ಮತ್ತು ಪೇಂಟ್‌ ಬಾಕ್ಸ್‌ಗಳು ಬೆಂಕಿಗಾಹುತಿಯಾಗಿವೆ. ಕುದುರಗೆರೆ ಗ್ರಾಮದ 3 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ಯುನೈಟೆಡ್‌ ಪೇಂಟ್ಸ್‌ ಕಂಪನಿಯ ಗೋದಾಮು ಇದೆ. ಅಲ್ಲಿ ವಿವಿಧ ಬಗೆಯ ಪೇಂಟ್‌ (ಬಣ್ಣ) ತಯಾರಿಸಲು ಟಿಮ್ಮರ್‌ ಆಯಿಲ್‌ ಮತ್ತಿತರ ಕಚ್ಚಾ ಸಾಮಗ್ರಿಗಳಿದ್ದ ಬ್ಯಾರಲ್‌ ಶೇಖರಿಸಿಡಲಾಗಿತ್ತು. ಈ ಬ್ಯಾರಲ್‌ಗ‌ಳ ಬಳಿ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿ ಕೊಂಡಿದೆ. ಪರಿಣಾಮ, ಬ್ಯಾರಲ್‌ ಸಿಡಿದು ಬೆಂಕಿ ಕೆನ್ನಾಲಿಗೆ ಇಡೀ ಗೋದಾಮನ್ನು ಆವರಿಸಿಕೊಂಡು, ನೋಡ ನೋಡುತ್ತಲೇ ದಟ್ಟ ಹೊಗೆ ಬಾನೆತ್ತರದವರೆಗೂ ಆವರಿಸಿತು.

ಗೋದಾಮಿನಲ್ಲಿ ಹಲವು ವರ್ಷಗಳಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ಬ್ಯಾರಲ್‌ ಕಚ್ಚಾ ಸಾಮಗ್ರಿ ಹಾಗೂ ಪೇಂಟ್‌ ಬಾಕ್ಸ್‌ಗಳನ್ನು ಇರಿಸಿದ್ದು, ಅವುಗಳನ್ನು ಕಾಲಕಾಲಕ್ಕೆ ಬಳಸಿಲ್ಲ. ಹಾಗೇ ಗೋದಾಮಿನ ಸುತ್ತ ಸಾಕಷ್ಟು ಹುಲ್ಲು ಬೆಳೆದಿದ್ದು, ನೀಲಗಿರಿ ಮರಗಳ ಎಲೆಗಳು ಉದುರಿ ಒಣಗಿವೆ. ದಾರಿಹೋಕರು ಧೂಮಪಾನ ಮಾಡಿ ಬಿಸಾಡಿದ ಬೆಂಕಿ ಕಡ್ಡಿ ಅಥವಾ ಬೀಡಿ, ಸಿಗರೆಟ್‌ ಕಿಡಿಯಿಂದ ಎಲೆಗಳಿಗೆ ಬೆಂಕಿ ಹೊತ್ತಿಕೊಂಡು, ಗೋದಾಮಿಗೆ ವ್ಯಾಪಿಸಿರಬಹುದು ಎಂದು ಸಾರ್ವಜನಿಕರು ಶಂಕಿಸಿದ್ದಾರೆ.

ಪ್ರಾಣಾಪಾಯವಿಲ್ಲ: ಘಟನೆ ನಡೆದಾಗ ಕಾವಲುಗಾರರನ್ನು ಹೊರತುಪಡಿಸಿ ಬೇರಾರೂ ಗೋದಾಮಿನಲ್ಲಿ ಇರಲಿಲ್ಲ. ಇಬ್ಬರು ಕಾವಲುಗಾರರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅತ್ತ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಮತ್ತು ಗೋದಾಮು ಕಾವಲುಗಾರರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.

20ಕ್ಕೂ ಹೆಚ್ಚು ವಾಹನಗಳ ಜತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, 15 ಲಕ್ಷ ಲೀಟರ್‌ಗೂ ಹೆಚ್ಚು ನೀರು ಮತ್ತು ರಾಸಾಯನಿಕ ದ್ರವಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದರು. ಬೆಳಗ್ಗೆ 11 ಗಂಟೆಗೆ ಕಾಣಿಸಿಕೊಂಡ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸತತ 7 ಗಂಟೆಗಳ ಕಾಲ
ಶ್ರಮಿಸಿದ್ದು, ಸಂಜೆ 6 ಗಂಟೆಗೆ ಬೆಂಕಿ ನಿಯಂತ್ರಣಕ್ಕೆ ಬಂತು. ಘಟನೆ ಬಳಿಕ ಸ್ಥಳದಲ್ಲಿ ನೆರೆದಿದ್ದ ನೂರಾರು ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಜತೆಗೆ ಗೋದಾಮಿನ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಜನ, ವಾಹನ ಸಂಚರಿಸದಂತೆ ಎಚ್ಚರ ವಹಿಸಿ, ರಸ್ತೆ ಬಂದ್‌ ಮಾಡಿದ್ದರು. ಗೋದಾಮಿನ ಬಳಿ ಯಾರೂ ಸುಳಿಯದಂತೆ ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡಲಾಯಿತು.

ಸಂಚಾರ ಅಸ್ತವ್ಯಸ್ತ: ಅಗ್ನಿ ಅವಘಡದ ಸುದ್ದಿ ತಿಳಿದು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳ ಚಾಲಕರು ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ದರಿಂದ ಹಾಗೂ ಪೊಲೀಸರು ಸರ್ವಿಸ್‌ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ ಕಾರಣ, ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಯಿತು.
 
ಯಾವುದೇ ಆತಂಕವಿಲ್ಲ, ಎಚ್ಚರಿಕೆ ಅಗತ್ಯ: ಎಸ್ಪಿ ಗೋದಾಮಿನಲ್ಲಿದ್ದ ಪೇಂಟ್‌ ತಯಾರಿಕೆಗೆ ಬಳಸುವ ಟಿಮ್ಮರ್‌ ಆಯಿಲ್‌ ಮತ್ತು ಪೇಂಟ್‌ ಬಾಕ್ಸ್‌ಗಳಿಗೆ ಬೆಂಕಿ ತಗುಲಿ ದುರ್ಘ‌ಟನೆ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ನಾಗರಿಕರ ರಕ್ಷಣೆಗಾಗಿ ಮತ್ತು ಕೆಮಿಕಲ್‌ ಡ್ರಮ್‌ಗಳು ಸ್ಫೋಟಗೊಳ್ಳದಂತೆ ರಾಸಾಯನಿಕ ದ್ರವಗಳೊಂದಿಗೆ 15 ಲಕ್ಷ ಲೀ. ನೀರು ಬಳಸಿ ಬೆಂಕಿ ನಿಯಂತ್ರಿಸಲಾಗಿದೆ.

ಟಿಮ್ಮರ್‌ ಆಯಿಲ್‌ ಮತ್ತಿತರ ಕಚ್ಚಾ ಸಾಮಗ್ರಿ ಖಾಲಿ ಆಗುವವರೆಗೂ ಬೆಂಕಿ ಇರಲಿದ್ದು, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗೋದಾಮು ಸುತ್ತಲ ಬಡಾವಣೆಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದು, ಬಡಾವಣೆ ನಿವಾಸಿಗಳನ್ನು ದೂರ ಕಳುಹಿಸಲಾಗಿದೆ. ಸದ್ಯಕ್ಕೆ ಯಾವುದೇ ಆತಂಕವಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ್‌ ಮಾಹಿತಿ ನೀಡಿದ್ದಾರೆ. 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.