ಜಲಮಂಡಳಿ ಎಂಜಿನಿಯರ್ಗಳ ವಿರುದ್ಧ ಎಫ್ಐಆರ್ ದಾಖಲು
Team Udayavani, Jan 26, 2020, 3:05 AM IST
ಬೆಂಗಳೂರು: ಚುಂಚಘಟ್ಟ ಕೆರೆಗೆ ಹೊಲಸು ನೀರು ಹರಿ ಬಿಟ್ಟಿರುವ ಆರೋಪದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಬ್ಬರು ಎಂಜಿನಿಯರ್ಗಳ ವಿರುದ್ಧ ಕೋಣನಕುಂಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
“ಚುಂಚಘಟ್ಟ ಕೆರೆ ಸೇರುತ್ತಿದೆ ಹೊಲಸು’ ಎಂಬ ಶೀರ್ಷಿಕೆ ಅಡಿಯಲ್ಲಿ ಉದಯವಾಣಿ ಜ.24ರಂದು ವಿಶೇಷ ವರದಿ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಬಿಬಿಎಂಪಿ ಕೆರೆ ವಿಭಾಗದ ಎಇಇ ಲಿಂಗೇಗೌಡ ದೂರು ಕೊಟ್ಟಿದ್ದು, ಈ ಸಂಬಂಧ ಬಿಡಬ್ಲೂಎಸ್ಎಸ್ಬಿ ದಕ್ಷಿಣ ವಿಭಾಗದ ಎಂಜಿನಿಯರ್ಗಳಾದ ರಾಘವೇಂದ್ರ ಹಾಗೂ ರಮೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಕುಮಾರಸ್ವಾಮಿ ಲೇಔಟ್ ಸಮೀಪ 22 ಎಕರೆ ಚುಂಚಘಟ್ಟ ಕೆರೆ ಇದ್ದು, ಬಿಬಿಎಂಪಿಯ ಕೆರೆ ವಿಭಾಗದವರು 2018-19ನೇ ಸಾಲಿನಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಚುಂಚಘಟ್ಟ ಕೆರೆ ಅಭಿವೃದ್ಧಿಪಡಿಸಲಾಗಿತ್ತು. ಕೆರೆಯಲ್ಲಿ ಶುದ್ಧಗೊಳಿಸಿ ಮಳೆ ನೀರು ಸಂಗ್ರಹಿಸಿದ್ದರು. ಕಳೆದ 15 ದಿನದಿಂದ ಬಿಡಬ್ಲೂéಎಸ್ಎಸ್ಬಿ ಅಧಿಕಾರಿಗಳು ಕೆರೆಗೆ ಕೊಳಚೆ ನೀರು ಹರಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಸ್ಥಳೀಯರಿಂದ ದೂರು ಕೇಳಿ ಬಂದ ಹಿನ್ನೆಲೆ ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಕೆರೆಗೆ ಹರಿದು ಬರುತ್ತಿರುವ ಕೊಳೆಚೆ ನೀರು ತಡೆಯುವಂತೆ ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೂ ಎಚ್ಚೆತ್ತುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು