ಮೊದಲ “ರೋಶಿನಿ’ ಶಾಲೆ ಸಜ್ಜು


Team Udayavani, Feb 26, 2019, 6:29 AM IST

modala.jpg

ಬೆಂಗಳೂರು: “ಬಿಬಿಎಂಪಿ ರೋಶಿನಿ’ ಯೋಜನೆಯ “ಲೈಟಿಂಗ್‌ ಸ್ಕೂಲ್‌’ ಯೋಜನೆಯಡಿ ಮೊದಲ ಮಾದರಿ ಶಾಲೆ ಸಜ್ಜಾಗಿದೆ. ಪಾಲಿಕೆಯ 156 ಶಾಲಾ-ಕಾಲೇಜುಗಳಲ್ಲಿ ಯೋಜನೆ ಜಾರಿಗೊಳಿಸುವ ಮೊದಲು ಪ್ರಮುಖ ಆರು ಶಾಲೆಗಳನ್ನು ಮಾದರಿ ಶಾಲೆಗಳಾಗಿ ಪರಿವರ್ತಿಸಿ, ಬಳಿಕ ಉಳಿದ ಶಾಲೆಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲು ಮೈಕ್ರೋಸಾಫ್ಟ್ ಯೋಜನೆ ರೂಪಿಸಿದೆ.

ಅದರಂತೆ ಎಲ್ಲ ಏಳು ಕಡೆಗಳಲ್ಲಿ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶಿವಾಜಿನಗರದ ಕ್ಲೀವ್‌ಲ್ಯಾಂಡ್‌ಟೌನ್‌ ಶಾಲೆ ಉದ್ಘಾಟನೆಗೆ ಸಿದ್ಧವಾಗಿದೆ. ಮಾದರಿ ಶಾಲೆಗಳ ಹೊರಭಾಗ ಹಾಗೂ ತರಗತಿ ಕೊಠಡಿಗಳು ಹಳದಿ ಬಣ್ಣದಿಂದ ಕಂಗೊಳಿಸುತ್ತಿದೆ.

ಬಿಬಿಎಂಪಿ ಶಾಲಾ-ಕಾಲೇಜುಗಳನ್ನು ಉನ್ನತೀಕರಿಸಿ ಮಕ್ಕಳಿಗೆ 21ನೇ ಶತಮಾನ ಕಲಿಕಾ ಮಾದರಿಗಳ ಮೂಲಕ ಶಿಕ್ಷಣ ನೀಡುವ ಉದ್ದೇಶದಿಂದ ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅವಾಂತ್‌ ಗಾರ್ಡ್‌ ಸಂಸ್ಥೆಗಳು ಪಾಲಿಕೆಯ ಸಹಯೋಗದಲ್ಲಿ “ರೋಶಿನಿ’ ಯೋಜನೆ ಜಾರಿಗೊಳಿಸುತ್ತಿದೆ. ಮಾದರಿ ಶಾಲೆಗಳ ಮೂಲಕ ವಿದ್ಯಾರ್ಥಿಗಳನ್ನು ಪಾಲಿಕೆಯ ಶಾಲೆಗಳತ್ತ ಆಕರ್ಷಿಸುವ ಮೂಲಕ ಪಾಲಿಕೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡುವುದು ಇದರ ಉದ್ದೇಶವಾಗಿದೆ.

ಆ ಮೂಲಕ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ದೊರೆಯುವ ರೀತಿಯಲ್ಲಿಯೇ ಗುಣಮಟ್ಟದ ಶಿಕ್ಷಣ ಪಾಲಿಕೆ ಶಾಲೆಯಲ್ಲಿಯೂ ದೊರೆಯುತ್ತದೆ ಎಂಬುದನ್ನು ಜನರಿಗೆ ತಿಳಿಸಲಾಗುತ್ತದೆ. ಜತೆಗೆ ಮಕ್ಕಳು ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ, ಕ್ರೀಡೆ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ, ಕಂಪ್ಯೂಟರ್‌ ಹೀಗೆ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಅಂಕಣಗಳ ವ್ಯವಸ್ಥೆ ಮಾಡಲಾಗಿದೆ. 

ಸ್ಮಾರ್ಟ್‌ ಕ್ಲಾಸ್‌ ರೂಂ ಸಿದ್ಧ: ರೋಶಿನಿ ಯೋಜನೆಯಡಿಯಲ್ಲಿ ಮೊದಲ ಸ್ಮಾರ್ಟ್‌ ಕ್ಲಾಸ್‌ ರೂಂ ಕ್ಲೀವ್‌ಲ್ಯಾಂಡ್‌ಟೌನ್‌ ಪಾಲಿಕೆಯ ಶಾಲೆಯಲ್ಲಿ ಸಿದ್ಧವಾಗಿದೆ. ಅದರಂತೆ ತರಗತಿಯಲ್ಲಿ ಬಹುಪಯೋಗಿ ಸ್ಮಾರ್ಟ್‌ ಟಿವಿಯನ್ನು ಅಳವಡಿಕೆ ಮಾಡಲಾಗಿದ್ದು, ಇದನ್ನು ಬೋರ್ಡ್‌, ಟಿವಿ, ಕಂಪ್ಯೂಟರ್‌ ಆಗಿ ಬಳಸಬಹುದಾಗಿದೆ. ಇನ್ನು ಕೆಲವು ಶಾಲೆಗಳಲ್ಲಿ ಅತ್ಯಾಧುನಿಕ ಉಪಕರಣಗಳನ್ನು ಒಳಗೊಂಡ ಪ್ರಯೋಗಾಲಯ ಸಹ ನಿರ್ಮಾಣವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. 

ಕಟ್ಟಡ ಹಾಗೂ ಶೌಚಾಲಯ ವ್ಯವಸ್ಥೆ: ಮಾದರಿಯ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ಸಮರ್ಪಕ ಕಾಂಪೌಂಡಿಂಗ್‌ ಹಾಗೂ ವಿದ್ಯುತ್‌ ಬಲ್ಬ್ಗಳನ್ನು ಅಳವಡಿಕೆ ಮಾಡಲಾಗಿದೆ. 

ಮಾದರಿ ಆಗಲಿರುವ ಶಾಲೆಗಳು 
-ಆಸ್ಟಿನ್‌ಟೌನ್‌ ಬಾಲಕಿಯರ ಪ್ರೌಢಶಾಲೆ
-ಗಾಂಧಿನಗರ ಪ್ರೌಢಶಾಲೆ
-ಜಯನಗರ 1ನೇ ಬ್ಲಾಕ್‌ ಪ್ರೌಢಶಾಲೆ
-ಮೂಡಲಪಾಳ್ಯ ಪ್ರೌಢಶಾಲೆ
-ಕ್ಲೀವ್‌ಲ್ಯಾಂಡ್‌ಟೌನ್‌, ಪ್ರೌಢಶಾಲೆ ಹಾಗೂ ಕಾಲೇಜು
-ಭೈರಸಂದ್ರ ಪ್ರೌಢಶಾಲೆ ಹಾಗೂ ಕಾಲೇಜು 

ಬಿಬಿಎಂಪಿ ರೋಶಿನಿ ಯೋಜನೆಯಡಿ ಮೊದಲ ಹಂತದಲ್ಲಿ ಆರು ಶಾಲೆಗಳನ್ನು ಮಾದರಿ ಶಾಲೆಗಳಾಗಿ ನಿರ್ಮಿಸಲಾಗುತ್ತಿದೆ. ಅದರಂತೆ ಈಗಾಗಲೇ ಕ್ಲೀವ್‌ಲ್ಯಾಂಡ್‌ಟೌನ್‌ ಶಾಲೆ ಉದ್ಘಾಟನೆಗೆ ಸಿದ್ಧವಾಗಿದ್ದು, ಉಳಿದ ಶಾಲೆಗಳಲ್ಲಿಯೂ ಕಾಮಗಾರಿ ನಡೆಯುತ್ತಿದೆ. 
-ಅಲಿ ಸೇಠ್, ಸಿಇಒ ಟೆಕ್‌ ಅವಾಂತ್‌ ಗಾರ್ಡ್‌

* ವೆಂ.ಸುನೀಲ್‌ಕುಮಾರ್‌ 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.