ಸ್ಕೌಟ್ಸ್, ಗೈಡ್ಸ್ಗೆ ಐದೂವರೆ ಲಕ್ಷ ನೋಂದಣಿ
Team Udayavani, Dec 12, 2018, 12:33 PM IST
ಬೆಂಗಳೂರು: ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ಗೆ ಪ್ರಸ್ತುತ ಐದೂವರೆ ಲಕ್ಷ ಜನ ನೋಂದಣಿಯಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ದುಪ್ಪಟ್ಟುಗೊಳಿಸುವ ಗುರಿ ಇದೆ ಎಂದು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ತಿಳಿಸಿದರು.
ನಗರದಲ್ಲಿ ಮಂಗಳವಾರ ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಕೊಂಡಜ್ಜಿ ಬಸಪ್ಪ ಅವರ 103ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ನೋಂದಣಿ ದೊಡ್ಡ ಸಮಸ್ಯೆಯೇ ಅಲ್ಲ.
ಮೊಬೈಲ್ಗಳ ಮೂಲಕ ಮಕ್ಕಳನ್ನು ತಲುಪದೆ, ವಿಭಿನ್ನ ಕಾರ್ಯಕ್ರಮಗಳು, ತತ್ವ-ಸಿದ್ಧಾಂತಗಳೊಂದಿಗೆ ತಲುಪುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೋಜನೆಗಳನ್ನು ಹಾಕಿಕೊಂಡಿದೆ. ಇದಕ್ಕೆ ಉತ್ತಮ ಸ್ಪಂದನೆಯೂ ದೊರೆಯುತ್ತಿದೆ. ಕೆಲವೇ ದಿನಗಳಲ್ಲಿ ನೋಂದಾಯಿತರ ಸಂಖ್ಯೆ ಹತ್ತು ಲಕ್ಷ ದಾಟಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೃಹತ್ ಸಮಾವೇಶ: ಏಪ್ರಿಲ್ನಲ್ಲಿ ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಅದರಲ್ಲಿ ಎನ್ಸಿಸಿ, ಎನ್ಎಸ್ಎಸ್, ರೋಟರಿಯಂತಹ ಎಲ್ಲ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ತರಲಾಗುವುದು ಎಂದು ಪಿಜಿಆರ್ ಸಿಂಧ್ಯಾ ಇದೇ ವೇಳೆ ಮಾಹಿತಿ ನೀಡಿದರು.
ಹುಟ್ಟು ಮತ್ತು ಸಾವು ಸಹಜ. ಇವುಗಳ ನಡುವೆ ನಾವು ಮಾಡುವ ಕೆಲಸ ಶಾಶ್ವತವಾಗಿರಬೇಕು. ಈ ನಿಟ್ಟಿನಲ್ಲಿ ನಮಗೆ ಕೊಂಡಜ್ಜಿ ಬಸಪ್ಪ ಮಾದರಿಯಾಗಿದ್ದಾರೆ. ಅವರು ತಮ್ಮ ಇಡೀ ಜೀವನವನ್ನು ಯುವಜನರ ಆಂದೋಲನಕ್ಕೆ ಮೀಸಲಿಟ್ಟರು. ಇದು ಮುಂದಿನ ಪೀಳಿಗೆಗೆ ಅನುಕೂಲಕ್ಕೆ ಕಾರಣವಾಯಿತು ಎಂದು ಸ್ಮರಿಸಿದರು.
ಪದಾಧಿಕಾರಿಗಳಾದ ಕೊಂಡಜ್ಜಿ ಬಿ. ಷಣ್ಮುಖಪ್ಪ, ಬಿ.ಎಸ್. ರವೀಂದ್ರ, ಎಂ.ಬಿ. ದೀಪಕ್ ಸುಮನ್, ನಿವೃತ್ತ ಲೆಫ್ಟಿನೆಂಟ್ ಜನರಲ್ ಸಿ.ಆರ್. ಸಂಪತ್ಕುಮಾರ್, ಮಕ್ಕಳ ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ, ನಿಮ್ಹಾನ್ಸ್ನ ಮನೋವೈದ್ಯ ಡಾ.ಶಶಿಧರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ