ಪ್ರತಿ ತಿಂಗಳು ಇಂತಿಷ್ಟು ಫ್ಲೆಕ್ಸ್‌ ತೆರವು ಗುರಿ


Team Udayavani, Nov 8, 2022, 1:25 PM IST

tdy-3

ಬೆಂಗಳೂರು: ನಗರವನ್ನು ಫ್ಲೆಕ್ಸ್‌ ಮತ್ತು ಬ್ಯಾನರ್‌ ಮುಕ್ತವಾಗಿಸಲು ಕಂದಾಯ ಅಧಿಕಾರಿಗಳಿಗೆ ಫ್ಲೆಕ್ಸ್‌ ತೆರವು ಮತ್ತು ಫ್ಲೆಕ್ಸ್‌ ಅಳವಡಿಸುವವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸುವಂತೆ ಮಾಸಿಕ ಗುರಿ ನೀಡಲಾಗುತ್ತಿದೆ.

ಹೈಕೋರ್ಟ್‌ ಸೂಚನೆ ನೀಡಿದರೂ ನಗರದಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳ ಹಾವಳಿ ನಿಂತಿಲ್ಲ. ಈ ಬಗ್ಗೆ ಕೋರ್ಟ್‌ ಕಾಲಕಾಲಕ್ಕೆ ವಿಚಾರಣೆ ನಡೆಸುತ್ತಿದೆ. ಹೀಗಾಗಿ, ಬಿಬಿಎಂಪಿ ಕಾಯ್ದೆ 2020, ಬಿಬಿಎಂಪಿ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಉಪ ವಿಧಿಗಳು 2018 ಹಾಗೂ ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ) ತಡೆ ಕಾಯ್ದೆ 1981 ಅನುಸಾರ ಕ್ರಮ ಕೈಗೊಳ್ಳಬೇಕು. ಆದರೆ, ಬಿಬಿಎಂಪಿಯ ಕಂದಾಯ ಮೌಲ್ಯಮಾಪಕರು, ನಿರೀಕ್ಷಕರು ಸೇರಿ ಇನ್ನಿತರ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳ ಅಳವಡಿಕೆ ತಡೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಇನ್ನು ಮುಂದೆ ಫ್ಲೆಕ್ಸ್‌ ತೆರವು, ದೂರು ದಾಖಲಿನ ಕುರಿತಂತೆ ಮಾಸಿಕ ಗುರಿ ನೀಡಲಾಗುತ್ತಿದೆ. ಒಂದು ವೇಳೆ ಅದನ್ನು ಉಲ್ಲಂ ಸಿದರೆ ಸಂಬಂಧಪಟ್ಟ ಅಧಿಕಾರಿಗಳು ಶಿಸ್ತು ಕ್ರಮ ಎದುರಿಸಬೇಕಿದೆ.

ಜವಾಬ್ದಾರಿ ನಿರ್ವಹಿಸದ ಅಧಿಕಾರಿಗಳು: ಫ್ಲೆಕ್ಸ್‌, ಬ್ಯಾನರ್‌ಗಳ ಅಳವಡಿಕೆ ತಡೆ ಕುರಿತಂತೆ ಬಿಬಿಎಂಪಿ ಈ ಹಿಂದೆ ವಾರ್ಡ್‌ನ ಕಂದಾಯ ಮೌಲ್ಯ ಮಾಪಕರು/ ನಿರೀಕ್ಷಕರು, ವಾರ್ಡ್‌ ಮಾರ್ಷಲ್‌, ಸಹಾಯಕ/ ಕಿರಿಯ ಎಂಜಿನಿಯರ್‌ ಹಾಗೂ ಸಹಾಯಕ ಕಂದಾಯ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಲಾಗಿತ್ತು. ಅದರಲ್ಲಿ ಕಂದಾಯ ಮೌಲ್ಯ ಮಾಪಕರು/ನಿರೀಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ವಹಿಸಿ ತಮ್ಮ ವಾರ್ಡ್‌ನಲ್ಲಿ ಅನಧಿಕೃತ ಫ್ಲೆಕ್ಸ, ಬ್ಯಾನರ್‌ ಪ್ರದರ್ಶನ ತಡೆಯಬೇಕು. ಈ ಕುರಿತು ಸರ್ವೆ, ತಪಾಸಣೆ ನಡೆಸಬೇಕು. ಈ ವೇಳೆ ಅನಧಿಕೃತ ಜಾಹೀರಾತು ಕಂಡುಬಂದರೆ ತೆರವು ಮಾಡಬೇಕು. ಅಳವಡಿಕೆ ಮಾಡಿದವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಬೇಕು, ದಂಡ ವಿಧಿಸಿ, ತೆರವುಗೊಳಿಸಿದ ವೆಚ್ಚ ವಸೂಲಿ ಮಾಡಬೇಕು ಎಂದು ತಿಳಿಸಲಾಗಿತ್ತು. ಆದರೆ ಈ ಯಾವ ಕೆಲಸವನ್ನೂ ಪರಿಣಾಮಕಾರಿಯಾಗಿ ಮಾಡಿಲ್ಲ. ಪ್ರಮುಖವಾಗಿ ಫ್ಲೆಕ್ಸ್‌ ಅಳವಡಿಸುವವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸುವ ವಿಚಾರದಲ್ಲಿ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ. ಅದರ ಪರಿಣಾಮ ಈವರೆಗೆ ನಗರದ ವಿವಿಧ ಠಾಣೆಗಳಲ್ಲಿ 100ಕ್ಕೂ ಕಡಿಮೆ ದೂರು ದಾಖಲಾಗಿದೆ. ಆದರೆ, ನಗರದಲ್ಲಿ ದಿನದಿಂದ ದಿನಕ್ಕೆ ಫ್ಲೆಕ್ಸ್‌ಗಳ ಸಂಖ್ಯೆ ಹೆಚ್ಚುತ್ತಲ್ಲೇಯಿದೆ. ಅದರಲ್ಲೂ ರಾಜಕಾರಣಿಗಳಿಗೆ ಶುಭ ಕೋರುವುದು ಸೇರಿ, ರಾಜಕೀಯ ಪಕ್ಷಗಳ ಪ್ರಚಾರಕ್ಕೆ ಸಂಬಂಧಿಸಿದ ಫ್ಲೆಕ್ಸಗಳು ಹೆಚ್ಚಾಗಿ ಕಾಣಿಸುತ್ತಿವೆ.

ಮಾಸಿಕ ಗುರಿ ನಿಗದಿ: ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆ ತಡೆಗೆ ಜವಾಬ್ದಾರಿ ನಿಗದಿ ಮಾಡಿದರೂ ಸಮರ್ಪಕವಾಗಿ ಕೆಲಸ ಮಾಡದ ಆರ್‌ಒ, ಎಆರ್‌ಒಗಳ ಕಾರ್ಯ ವೈಖರಿ ಬಗ್ಗೆ ಹಿರಿಯ ಅಧಿಕಾರಿಗಳು ಅಸಮಾ ಧಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿಯೇ ಪ್ರತಿಯೊಬ್ಬ ಆರ್‌ಒ, ಎಆರ್‌ಒ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳ ಅಳವಡಿಕೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕು. ಜತೆಗೆ ಪ್ರತಿ ತಿಂಗಳು ಇಂತಿಷ್ಟು ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ತೆರವು ಮಾಡಬೇಕು ಎಂದು ಸೂಚಿಸಲಾಗುತ್ತಿದೆ.

ಅದರ ಜತೆಗೆ ಫ್ಲೆಕ್ಸ್‌ ಮತ್ತು ಬ್ಯಾನರ್‌ನಲ್ಲಿ ಹೆಸರಿರುವವರ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ದೂರು ನೀಡುವ ಕುರಿತಂತೆಯೂ ಗುರಿ ನಿಗದಿ ಮಾಡಲಾಗುತ್ತಿದೆ. ಪ್ರತಿ ತಿಂಗಳು ಈ ಗುರಿ ಸಡಿಲಿಕೆಯಾಗಲಿದ್ದು, ನಿರ್ದಿಷ್ಟ ಅವಧಿಯೊಳಗೆ ತಮ್ಮ ವ್ಯಾಪ್ತಿಯಲ್ಲಿ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳು ಇರದಂತೆ ಮಾಡಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗುತ್ತಿದೆ. ಒಂದು ವೇಳೆ ಆದೇಶ ಪಾಲಿಸದಿದ್ದರೆ ಅಂತಹ ಆರ್‌ಒ ಮತ್ತು ಎಆರ್‌ಒಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿಯೂ ಸೂಚಿಸಲಾಗುತ್ತದೆ. ಈ ಬಗ್ಗೆ ಮುಖ್ಯ ಆಯುಕ್ತರು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿ ಅಧಿಕೃತ ಆದೇಶ ಹೊರಡಿಸಲಿದ್ದಾರೆ.

ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳ ಅಳವಡಿಕೆ ತಡೆಗೆ ಆರ್‌ಒ ಮತ್ತು ಎಆರ್‌ಒಗಳಿಗೆ ಅಧಿಕಾರ ನೀಡಲಾ ಗಿದೆ. ಆದರೂ, ಅವರು ಸಮರ್ಪಕವಾಗಿ ಕೆಲಸ ಮಾಡು ತ್ತಿಲ್ಲ. ಹೀಗಾಗಿ ಫ್ಲೆಕ್ಸ್‌, ಬ್ಯಾನರ್‌ ತೆರವು ಮತ್ತು ಫ್ಲೆಕ್ಸ್, ಬ್ಯಾನ ರ್‌ಗಳಲ್ಲಿ ಹೆಸರಿರುವವರ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ದೂರು ನೀಡುವ ಕುರಿತು ಗುರಿ ನಿಗದಿ ಮಾಡಲಾಗುತ್ತಿದೆ. ಆ ಮೂಲಕ ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆ ತಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. – ತುಷಾರ್‌ ಗಿರಿನಾಥ್‌, ಬಿಬಿ ಎಂಪಿ ಮುಖ್ಯ ಆಯುಕ್ತ ‌

 

-ಗಿರೀಶ್‌ ಗರಗ

ಟಾಪ್ ನ್ಯೂಸ್

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.