ಫ್ಲೆಕ್ಸ್‌, ಬ್ಯಾನರ್‌ ಶಾಶ್ವತ ತೆರವಿಗೆ ಹೈ ತಾಕೀತು


Team Udayavani, Aug 2, 2018, 12:28 PM IST

flex.jpg

ಬೆಂಗಳೂರು: ಅಧಿಕೃತವೋ, ಅನಧಿಕೃತವೋ ಒಟ್ಟಿನಲ್ಲಿ ಫ್ಲೆಕ್ಸ್‌ ಹಾಗೂ ಬ್ಯಾನರ್‌ಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಬೆಂಗಳೂರಿನ ಸೌಂದರ್ಯ ಹಾಳಾಗುತ್ತಿದೆ. ಕೇವಲ ತಾತ್ಕಾಲಿಕ ಕ್ರಮಗಳಿಂದ ಈ ಪಿಡುಗು ಹೋಗುವುದಿಲ್ಲ. ಇದಕ್ಕೆ ಶಾಶ್ವತವಾದ ಕಠಿಣ ತೀರ್ಮಾನಗಳ ಅಗತ್ಯವಿದೆ.

ಆದ್ದರಿಂದ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಹಾಕುವ ಮತ್ತು ತೆರವುಗೊಳಿಸುವ ಬಗ್ಗೆ ಒಂದು ನೀತಿ ರೂಪಿಸಿ, ಆ ನೀತಿ ಹೇಗಿರುತ್ತದೆ ಎಂಬುದನ್ನು ಮುಂದಿನ ವಿಚಾರಣೆಯಲ್ಲಿ ತಿಳಿಸಿ ಎಂದು ಹೈಕೋರ್ಟ್‌ ಬಿಬಿಎಂಪಿಗೆ ತಾಕೀತು ಮಾಡಿದೆ.

ಬುಧವಾರ ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ.ಆರ್‌.ದೇವದಾಸ್‌ ಅವರಿದ್ದ ವಿಭಾಗೀಯ ಪೀಠ, ಫ್ಲೆಕ್ಸ್‌, ಬ್ಯಾನರ್‌ಗಳ ಹಾವಳಿ ನಗರಕ್ಕೆ ಅತ್ಯಂತ ತೊಂದರೆದಾಯಕ ವಿಚಾರವಾಗಿದೆ.

ಇಂದು ತೆರವುಗೊಳಿಸಿ, ನಾಳೆ ಮತ್ತೆ ನೇತು ಹಾಕುವುದಲ್ಲ. ಇದಕ್ಕೆ ಶಾಶ್ವತವಾಗಿ ಇತಿಶ್ರೀ ಹಾಡಬೇಕಾಗಿದೆ. ಅದಕ್ಕಾಗಿ ನೀತಿಯೊಂದನ್ನು ರೂಪಿಸಿ ಎಂದು ಬಿಬಿಎಂಪಿಗೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.

ತಾಕೀತು: ನಗರದಲ್ಲಿ ಅನಧೀಕೃತ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸುವ ಸಂಬಂಧ ಬುಧವಾರ ಮೂರು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ, ಬುಧವಾರ ಮಧ್ಯಾಹ್ನದೊಳಗೆ ಎಲ್ಲ ಅನಧೀಕೃತ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ತಾಕೀತು ಮಾಡಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ವಿಚಾರಣೆ ವೇಳೆ ಹಾಜರಿದ್ದರು.

ನಗರ ಸೌಂಧರ್ಯದ ಪ್ರಶ್ನೆ: ತಾವು ಅಧೀಕೃತ ಅನುಮತಿ ಪಡೆದ ಫ್ಲೆಕ್ಸ್‌, ಬ್ಯಾನರ್‌ಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ದೂರಿಗೆ, ತೆರವು ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಜಾಹಿರಾತುದಾರರ ಪರ ವಕೀಲರು ಮನವಿ ಮಾಡಿದ್ದರು ಎಂದಾಗ, ಅಕ್ರೋಶಗೊಂಡ ನ್ಯಾಯಪೀಠ, ನಿಮ್ಮದು ಅಧಿಕೃತವೋ, ಅನಧೀಕೃತವೋ ನಂತರ ನಿರ್ಧರಿಸೋಣ, ಈಗ ನಮ್ಮ ಮೊದಲು ನಮ್ಮ ಮುಂದಿರುವುದು ಬೆಂಗಳೂರಿನ ಸೌಂದರ್ಯದ ಪ್ರಶ್ನೆ. ಮೊದಲು ಎಲ್ಲ ಫ್ಲೆಕ್ಸ್‌, ಬ್ಯಾನರ್‌ಗಳು ತೆರವುಗೊಳ್ಳಲಿ.

ನೀವು ಅಧಿಕೃತವಾಗಿ ಪರವಾನಿಗೆ ಪಡೆದು ಹಾಕಿದ್ದರೆ, ಆಂತಹ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಪುನಃ ಹಾಕುವ ಬಗ್ಗೆ ಬೇಕಿದ್ದರೆ ನಿರ್ಧರಿಸೋಣ ಎಂದು ಹೇಳಿತು. ಅಲ್ಲದೇ ಫ್ಲೆಕ್ಸ್‌, ಬ್ಯಾನರ್‌ಗಳ ಬಗ್ಗೆ ನೀತಿ ರೂಪಿಸಿ, ಅದು ಹೇಗಿರುತ್ತದೆ ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸಿ ಎಂದು ಪೀಠ ವಿಚಾರಣೆಯನ್ನು ಆ.8ಕ್ಕೆ ಮುಂದೂಡಿತು.

ಬಿಬಿಎಂಪಿ ಮುಚ್ಚಿಬಿಡಿ: ಮಧ್ಯಾಹ್ನದ ವಿಚಾರಣೆಯಲ್ಲಿ ಈವರೆಗೆ 5 ಸಾವಿರ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಹಾಗಾದ್ರೆ ಉಳಿದ ಫ್ಲೆಕ್ಸ್‌ಗಳನ್ನು ರಾತ್ರಿಯೊಳಗೆ ತೆರವುಗೊಳಿಸುತ್ತೀರಾ ಎಂದು ಪ್ರಶ್ನಿಸಿತು. ಅನಧೀಕೃತ ಫ್ಲೆಕ್ಸ್‌ಗಳ ತೆರವಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಕೀಲರು ಸಮಜಾಯಿಷಿ ನೀಡಿದರು.

ವಕೀಲರ ಸಮಜಾಯಿಷಿಯಿಂದ ಸಿಟ್ಟಾದ ಮುಖ್ಯ ನ್ಯಾಯಮೂರ್ತಿಗಳು, ಈ ಕೆಲಸ ನೀವೆ ಮಾಡಲು ಆಗುವುದಿಲ್ಲವೇ, ಇಂತಹ ಸಣ್ಣ ವಿಚಾರಗಳೂ ಕೋರ್ಟ್‌ಗೆ ಬರಬೇಕೆ, ಕೋರ್ಟ್‌ ಹೇಳಿದ ಮೇಲೆಯೇ ನೀವು ಕೆಲಸ ಮಾಡಬೇಕಾ, ಬದ್ಧತೆಯಿಂದ ಕೆಲಸ ಮಾಡಲಾಗಿದ್ದರೆ ಬಿಬಿಎಂಪಿ ಯಾಕಿರಬೇಕು, ಅಧಿಕಾರಿ, ಸಿಬ್ಬಂದಿ ಯಾಕೆ ಬೇಕು.ಬಿಬಿಎಂಪಿಯನ್ನು ಮುಚ್ಚಿಬಿಡಿ ಎಂದು ನ್ಯಾಯಪೀಠ ಚಾಟಿ ಬೀಸಿತು.

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.