ಜನಪದ ಮರೆಯಾದ್ದರಿಂದ ಕೋಮು ಗಲಭೆ


Team Udayavani, Aug 20, 2018, 12:41 PM IST

janapada.jpg

ಬೆಂಗಳೂರು: ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವ ಕಾರಣದಿಂದಲೇ ದೇಶದಲ್ಲಿ ಕೊಮು ಗಲಭೆ ಮತ್ತು ಅಶಾಂತಿ ಉಂಟಾಗುತ್ತಿದೆ ಎಂದು ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅಭಿಪ್ರಾಯಪಟ್ಟಿದ್ದಾರೆ. ಡಾ.ವೇಮಗಲ್‌ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಷ್ಠಾನದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. 

ಇತಿಹಾಸ, ಕಲೆ, ಸಂಸ್ಕೃತಿ ಮತ್ತು ಪೂರ್ವಿಕರ ಆಚಾರ, ವಿಚಾರ ಮತ್ತು ಜೀವನಶೈಲಿ ಬಿಂಬಿಸುವ ಕೆಲಸಗಳನ್ನು ಜನಪದ ಕಲೆಗಳು ಮಾಡುತ್ತಿದ್ದವು. ಅಕ್ಷರ ಜ್ಞಾನ ಇಲ್ಲದ ಕಾಲದಲ್ಲಿ ಜನಸಾಮಾನ್ಯರು ಕಟ್ಟಿ ಬೆಳೆಸಿದ ಶ್ರೀಮಂತ ಸಂಸ್ಕೃತಿಯೇ ಈ ಜನಪದ. ಅಂತಹ ಕಲಾ ಸಂಸ್ಕೃತಿ ಆಧುನಿಕ ಯುಗದಲ್ಲಿ ಕಳೆದುಹೋಗುತ್ತಿರುವ ಕಾರಣದಿಂದಲೇ ದೇಶದೊಳಗೆ ಕೋಮು ಗಲಭೆ, ಅಶಾಂತಿ ಉಂಟಾಗಿದೆ ಎಂದು ಹೇಳಿದರು.

ಪದ್ಮಶ್ರೀ ದೊರೆಯಲಿ: ಗಾಯಕಿ ಬಿ.ಕೆ.ಸುಮಿತ್ರಾ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಆದರೆ, ಅದಕ್ಕಿಂತಲೂ ಉತ್ಕೃಷ್ಟವಾದ ಪ್ರಶಸ್ತಿಗೆ ಅವರು ಅರ್ಹರಾಗಿದ್ದಾರೆ. ಒಂದು ವೇಳೆ ನಾನೇದರೂ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಇದ್ದಿದ್ದರೆ ಗ್ರಾಮೀಣ ಪ್ರತಿಭೆಗಳಿಗೆ ಉನ್ನತ ಮಟ್ಟದ ಪ್ರಶಸ್ತಿಗಳನ್ನು ನೀಡುತ್ತಿದ್ದೆ. ಗಾಯಕರಾದ ಬಿ.ಕೆ.ಸುಮಿತ್ರಾ ಹಾಗೂ ಹಂಸಲೇಖ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹೆಸರುಗಳಿಸಿರುವ ಗಾನ ಕೋಗಿಲೆ ಗಂಗಮ್ಮ ಅವರು ಪ್ರದ್ಮಶ್ರೀ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಆದಷ್ಟು ಶೀಘ್ರವಾಗಿ ಅವರಿಗೆ ಈ ಪ್ರಶಸ್ತಿ ದೊರೆಯಬೇಕು ಎಂದು ಆಶಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರು ಮಾತನಾಡಿ, ಜನಪದ ಸಾಹಿತ್ಯ ಸಂದರ್ಭಕ್ಕಾನುಸಾರವಾಗಿ ರಚಿತವಾಗಿರುವುದು. ಒಬ್ಬರ ಬಾಯಿಯಿಂದ ಮತ್ತೂಬ್ಬರ ಬಾಯಿಗೆ ಹರಿದು ಬಂದ ಜನಪದ ಸಾಹಿತ್ಯ ಇಲ್ಲಿಯವರೆಗೂ ಬದುಕಿದೆ. ಅದನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸವನ್ನು ಇಂದಿನ ಪೀಳಿಗೆ ಮಾಡಬೇಕಿದೆ ಎಂದರು.

ಜಾನಪದ ಕಲೆಗಳು ಗ್ರಾಮೀಣ ಕಲಾಪ್ರಕಾರಗಳ ಜೀವಂತಿಕೆಯ ದ್ಯೊತಕ. ಇಂತಹ ಕಲೆಗಳ ಬಗ್ಗೆ ಯುವ ಜನತೆಯಲ್ಲಿ ಆಸಕ್ತಿ ಬೆಳೆಯಬೇಕು. ಯುವ ತಲೆಮಾರಿಗೆ ಅದರಲ್ಲೂ ದೊಡ್ಡ ನಗರಗಳಲ್ಲಿ ವಾಸಿಸುವವರಿಗೆ ಜನಪದ ಕಲೆಗಳ ಪರಿಚಯವೇ ಇರುವುದಿಲ್ಲ. ಅವರಿಗೆ ಜನಪದ ಕಲೆಗಳನ್ನು ತಲುಪಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಂಗೀತ ಸಂಯೋಜಕ ಹಂಸಲೇಖ ಹಾಗೂ ಗಾಯಕಿ ಬಿ.ಕೆ.ಸುಮಿತ್ರ ಅವರಿಗೆ ಡಾ.ವೇಮಗಲ್‌ ನಾರಾಯಣಾÌಮಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ಪ್ರತಿಷ್ಠಾನದ ಅಧ್ಯಕ್ಷ ಡಾ.ವೇಮಗಲ್‌ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.