ಆಹಾರ ಪೂರೈಕೆ; ಹಲವೆಡೆ ಏರಿಕೆ, ಕೆಲವೆಡೆ ಇಳಿಕೆ!


Team Udayavani, Oct 2, 2017, 1:03 PM IST

indra-canteen.jpg

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನದ ಊಟದ ಸಂಖ್ಯೆ ಹೆಚ್ಚಿಸಿ, ರಾತ್ರಿ ಊಟದ ಸಂಖ್ಯೆ ಕಡಿಮೆ ಮಾಡಲು ನಿರ್ಧರಿಸಿರುವ ಬಿಬಿಎಂಪಿ, ಆಹಾರ ವಿತರಣೆ ಪಟ್ಟಿ ಪರಿಷ್ಕರಿಸುತ್ತಿದೆ.

ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನ ಊಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. ಇದರಿಂದ ಆಹಾರ ಬೇಗ ಖಾಲಿಯಾಗುತ್ತಿದ್ದು, ಹಲವರು ಹಸಿದೇ ವಾಪಸಾಗುತ್ತಿದ್ದಾರೆ. ಕೆಲವೆಡೆ ರಾತ್ರಿ ಆಹಾರ ಹಾಗೆ ಉಳಿಯುತ್ತಿದೆ. ಈ ಅಸಮತೋಲನ ಸರಿದೂಗಿಸಲು ಪಾಲಿಕೆ ಅಧಿಕಾರಿಗಳು ಪರಿಷ್ಕರಣೆಗೆ ಮುಂದಾಗಿದ್ದಾರೆ.

ಅಧ್ಯಯನ ನಡೆಸಿ ಸೂಚನೆ: ಇಂದಿರಾ ಕ್ಯಾಂಟೀನ್‌ ಆರಂಭವಾಗಿ ಒಂದೂವರೆ ತಿಂಗಳು ಕಳೆದಿದೆ. ಪ್ರಸ್ತುತ ಒಂದು ಹೊತ್ತಿಗೆ 300 ಜನರಿಗೆ ಊಟ ವಿತರಿಸುತ್ತಿದ್ದರೂ ಆಹಾರದ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಿ ವರದಿ ತಯಾರಿಸಿರುವ ಅಧಿಕಾರಿಗಳು, 101 ವಾರ್ಡ್‌ಗಳಲ್ಲಿ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಎಷ್ಟು ಜನರಿಗೆ ಆಹಾರ ವಿತರಿಸಬೇಕು ಎಂಬ ಪಟ್ಟಿ ಸಿದ್ಧಪಡಿಸಿ, ಅದರಂತೆ ಆಹಾರ ವಿತರಿಸಲು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

ಆಹಾರದ ಗುಣಮಟ್ಟ ಹಾಗೂ ರುಚಿ ಬಗ್ಗೆ ಜನ ತೃಪ್ತರಾಗಿದ್ದಾರೆ. ಆದರೆ, ವಿತರಣೆ ಆರಂಭವಾದ ಅರ್ಧ ಗಂಟೆಯಲ್ಲೇ ಆಹಾರ ಖಾಲಿಯಾಗುವ ಬಗ್ಗೆ ದೂರುಗಳಿವೆ. ಕಾರಣ, ಕ್ಯಾಂಟೀನ್‌ಗಳಿಗೆ ಭೇಟಿ ನೀಡುವ ಜನಸಂಖ್ಯೆಗೆ ಅನುಗುಣವಾಗಿ ಊಟದ ಸಂಖ್ಯೆ ನಿಗದಿಪಡಿಸುವಂತೆ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಯಾವ ವಾರ್ಡ್‌ನ ಕ್ಯಾಂಟೀನ್‌ನಲ್ಲಿ ಯಾವ ಹೊತ್ತಿಗೆ ಎಷ್ಟು ಆಹಾರ ವಿತರಿಸಬೇಕು ಎಂಬ ಹೊಸ ಪಟ್ಟಿ ಭಾನುವಾರದಿಂದಲೇ ಜಾರಿಗೆ ಬಂದಿದೆ.  ಪಾಲಿಕೆಯಿಂದ 101 ಕ್ಯಾಂಟೀನ್‌ಗಳಿಗೆ ನೇಮಿಸಿರುವ ನೋಡಲ್‌ ಅಧಿಕಾರಿಗಳು ಒಂದೂವರೆ ತಿಂಗಳಿನಿಂದ ಆಯಾ ಕ್ಯಾಂಟೀನಗಳಲ್ಲಿ ವಿತರಣೆಯಾದ, ಉಳಿಕೆಯಾದ ಹಾಗೂ ಕೊರತೆಯಾದ ಊಟದ ಸಂಖ್ಯೆಗಳ ಮಾಹಿತಿ ಕಲೆಹಾಕಿದ್ದಾರೆ.

ಹಲವು ಕ್ಯಾಂಟೀನ್‌ಗಳಲ್ಲಿ ತಿಂಡಿ-ಊಟ ಬೇಗ ಖಾಲಿಯಾಗುತ್ತಿದ್ದು, ವಿತರಿಸುವ ಪ್ಲೇಟ್‌ ಆಹಾರದ ಸಂಖ್ಯೆ ಹೆಚ್ಚಿಸಬೇಕು ಎಂಬ ಮನವಿಗಳು ಬಂದಿವೆ. ಇದಕ್ಕೆ ಪೂರಕವಾಗಿ ನೋಡಲ್‌ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಅದಕ್ಕನುಗುಣವಾಗಿ ಆಹಾರ ಪೂರೈಸಲು ಗುತ್ತಿಗೆ ಸಂಸ್ಥೆಗಳಿಗೆ ಆದೇಶಿಸಲಾಗಿದೆ.
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಈ ಕ್ಯಾಂಟೀನ್‌ಗಳಿಗಿನ್ನು ಆಹಾರ ಪೂರೈಕೆ ಕಡಿಮೆ
ವಾರ್ಡ್‌    ತಿಂಡಿ    ಮಧ್ಯಾಹ್ನ ಊಟ
-ಕೆ.ಜಿ.ಹಳ್ಳಿ    250    250
-ಈಜೀಪುರ        300    300
-ಕರಿಸಂದ್ರ    300    300
-ಮಾರುತಿಸೇವಾನಗರ    300    400
-ಹೊಯ್ಸಳನಗರ    300    300

ಇಲ್ಲಿ ರಾತ್ರಿ ಊಟದ ಸಂಖ್ಯೆ ಇಳಿಕೆ
-ಆರ್‌.ಆರ್‌.ನಗರ    100
-ಉಳ್ಳಾಲ    150
-ಚಂದ್ರ ಲೇಔಟ್‌    200
-ಕೊಟ್ಟಿಗೆಪಾಳ್ಯ    200
-ಬಸವನಗುಡಿ    200

ಆಹಾರ ಪೂರೈಕೆ ಏರಿಕೆಯಾದ ಕ್ಯಾಂಟೀನ್‌ಗಳು
ವಾರ್ಡ್‌    ತಿಂಡಿ    ಮಧ್ಯಾಹ್ನ ಊಟ    ರಾತ್ರಿ ಊಟ
-ಮಹಾಲಕ್ಷ್ಮೀಪುರ    600    600    400
-ಜಯನಗರ    600    600    300
-ಸುಭಾಷ್‌ನಗರ    600    600    400    
-ಕೊಡಿಗೆಹಳ್ಳಿ    500    500    400
-ಕೆಂಪೇಗೌಡನಗರ    500    500    400
-(ಸಂಖ್ಯೆ ಪ್ಲೇಟ್‌ಗಳಲ್ಲಿ)

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.