ಮಗುವಿಗೊಂದು ಮರ-ಶಾಲೆಗೊಂದು ವನ
Team Udayavani, May 29, 2018, 7:05 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಮಗುವಿಗೊಂದು ಮರ- ಶಾಲೆಗೊಂದು ವನ ವಿಶೇಷ ಕಾರ್ಯಕ್ರಮ ಅನುಷ್ಠಾನಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ವಿಶ್ವ ಪರಿಸರ ದಿನಾಚರಣೆಯಿಂದಲೇ(ಜೂನ್ 5) ಮಗುವಿಗೊಂದು ಮರ- ಶಾಲೆಗೊಂದು ವನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.
ಆಗಸ್ಟ್ ಕೊನೆಯವರೆಗೂ ಪ್ರತಿ ವಿದ್ಯಾರ್ಥಿ ಅಥವಾ ವಿದ್ಯಾರ್ಥಿ ತಂಡದಿಂದ ಭವಿಷ್ಯಕ್ಕೆ ಉಪಯುಕ್ತವಾಗುವ ನೆರಳು ಹಾಗೂ ಫಲ ನೀಡುವ ಗಿಡವನ್ನು ನೆಟ್ಟು ಪೋಷಿಸಲು ಬೇಕಾದ ಕ್ರಮ ತೆಗೆದುಕೊಳ್ಳಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.
ಶಾಲಾವರಣದಲ್ಲಿ ಹೂವಿನ ಗಿಡ, ಅಲಂಕಾರಿಕ ಗಿಡ ಅಥವಾ ಔಷಧ ಗಿಡವನ್ನು ನೆಟ್ಟು ಶಾಲೆಯ ಸೊಬಗನ್ನು ಹೆಚ್ಚಿಸಬಹುದು. ಮೈದಾನ ಹೊರತುಪಡಿಸಿ, ಶಾಲೆಗೆ ಸೇರಿದ ನಿರುಪಯುಕ್ತ ಭೂಮಿಯಲ್ಲಿ ತೆಂಗು, ಮಾವು, ಹಲಸು, ನೇರಳೆ, ಸೀಬೆ, ದಾಳಿಂಬೆ, ಬೇವು, ಅರಳಿ, ಹೊಂಗೆ, ಸಂಪಿಗೆ, ಅಶೋಕ ಮೊದಲಾದ ಸಸಿಗಳನ್ನು ಸಮೀಪದ ಅರಣ್ಯ ಇಲಾಖೆಯಿಂದ ಪಡೆದು, ನೆಡುವುದು. ಶಾಲೆಗಳಲ್ಲಿ ಅಗತ್ಯ ಭೂಮಿ ಇದ್ದರೆ ಶಾಲಾ ಕೈತೋಟ ನಿರ್ಮಿಸಿ, ಅದರ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಲು ಶಾಲಾ ಮುಖ್ಯಶಿಕ್ಷಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಇಲಾಖೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ