ಕೆಎಚ್ಬಿ ಫ್ಲಾಟ್ಗಳಿಗೆ ಶೇ. 2 ರಿಯಾಯಿತಿ
Team Udayavani, Jan 5, 2019, 1:05 AM IST
ಬೆಂಗಳೂರು:ವಸತಿ ಇಲಾಖೆಯಲ್ಲಿ ಗೃಹ ಮಂಡಳಿಯಿಂದ ನಿರ್ಮಾಣವಾಗಿರುವ ಪ್ಲಾಟ್ಗಳನ್ನು ಶೇ. 2 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ನೂತನ ವಸತಿ ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.
ಸಚಿವರಾಗಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ನಂತರ ಮೊದಲ ಬಾರಿಗೆ ವಸತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕೊಳಚೆ ನಿರ್ಮೂಲನಾ ಮಂಡಳಿ, ಗೃಹ ಮಂಡಳಿ ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ಗೃಹ ಮಂಡಳಿ ವತಿಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಿಸಿರುವ ಸುಮಾರು 1178 ಪ್ಲಾಟ್ಗಳು ಮಾರಾಟವಾಗಿಲ್ಲ. ಅವುಗಳನ್ನು ಮಾರಾಟ ಮಾಡಲು ಈಗ ನಿಗದಿಪಡಿಸಿರುವ ಬೆಲೆಗಿಂತ ಶೇ. 2 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.
ಸಹಾಯಧನ ಹೆಚ್ಚಳಕ್ಕೆ ಚಿಂತನೆ
ರಾಜ್ಯದಲ್ಲಿ ವಸತಿ ರಹಿತರು ನಿರ್ಮಿಸಿಕೊಳ್ಳುತ್ತಿರುವ ಪ್ರತಿ ಮನೆಗೆ ನೀಡುತ್ತಿರುವ ಸಹಾಯಧನ ಹೆಚ್ಚಳ ಮಾಡುವ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ. ಆ ರೀತಿಯ ಪ್ರಸ್ತಾವನೆ ಬಂದರೆ, ಸಹಾಯಧನ ಹೆಚ್ಚಳ ಮಾಡುವ ಕುರಿತು ಚಿಂತನೆ ನಡೆಸಲಾಗುವುದು. ಪ್ರಸ್ತುತ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 1.75 ಲಕ್ಷ ರೂ.ಸಾಮಾನ್ಯ ವರ್ಗದವರಿಗೆ 1.25 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ ಎಂದರು.
4 ಲಕ್ಷ ಮನೆ ನಿರ್ಮಾಣ ಗುರಿ: ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ಗ್ರಾಮೀಣ ಪ್ರದೇಶದ ವಸತಿ ರಹಿತರಿಗೆ ರಾಜೀವ್ ಗಾಂಧಿ ಆವಾಸ್ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ಯೋಜನೆ, ಬಸವ ವಸತಿ ಯೋಜನೆಗಳ ಮೂಲಕ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಮನೆಗಳ ನಿರ್ಮಾಣ ಮಾಡಲು ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿದೆ. ಅದರಂತೆ ಪ್ರಸಕ್ತ ವರ್ಷ ನಾಲ್ಕು ಲಕ್ಷ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ