ಪರಿತ್ಯಕ್ತ ಶಿಶು ರಕ್ಷಣೆಗೆ “ಮಮತೆಯ ತೊಟ್ಟಿಲು’


Team Udayavani, Feb 26, 2019, 6:29 AM IST

parityakta.jpg

ಬೆಂಗಳೂರು: ಹೆತ್ತವರಿಂದ ತ್ಯಜಿಸಲ್ಪಟ್ಟ ಅನಾಥ ಮಗುವಿಗೆ ಸುರಕ್ಷಿತ ಆಶ್ರಯ ಒದಗಿಸುವ, ಆ ಮೂಲಕ ಶಿಶು ಮರಣ ಪ್ರಮಾಣ ಕುಗ್ಗಿಸುವ ಉದ್ದೇಶದೊಂದಿಗೆ ಸ್ವಯಂಸೇವಾ ಸಂಸ್ಥೆಯೊಂದು ಮಮತಾ ಕಾ ಜೋಲಾ (ಮಮತೆಯ ತೊಟ್ಟಿಲು) ಎಂಬ ವಿನೂತನ ಯೋಜನೆ ಜಾರಿಗೊಳಿಸಿದೆ.

ಅಸಹಜತೆ ಅಥವಾ ಇಷ್ಟವಿಲ್ಲದ ಕಾರಣಕ್ಕೆ ಜನಿಸಿದ ಮಗುವನ್ನು ಮಹಿಳೆಯರು ಕಸದ ತೊಟ್ಟಿ, ಖಾಲಿ ಜಾಗ ಅಥವಾ ಇತರ ಅನಾರೋಗ್ಯಕರ ಸ್ಥಳಗಳಲ್ಲಿ ಎಸೆದು ಹೋಗುತ್ತಾರೆ. ಇಂಥ ಸಂದರ್ಭದಲ್ಲಿ ಮಗು ಮೃತಪಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇಂತಹ ಶಿಶುಗಳ ರಕ್ಷಣೆಗೆ ವಿಶ್ರಾಂತಿ ಎನ್‌ಜಿಒ “ಮಮತೆಯ ತೊಟ್ಟಿಲು’ ಪರಿಚಯಿಸಿದೆ.

ಭಾರತೀಯ ದಂಡ ಸಂಹಿತೆ 317ರ ಪ್ರಕಾರ ಮಗುವನ್ನು ಹೀಗೆ ಎಸೆದು ಅಥವಾ ಬಿಟ್ಟು ಹೋಗುವುದು ಶಿಕ್ಷಾರ್ಹ ಅಪರಾಧ. ಪೋಷಕರಿಂದ ದೂರವಾಗುವ ಮಕ್ಕಳು ಮುಂದೆ ಏನಾದರು ಎಂಬ ಮಾಹಿತಿಯೇ ಇರುವುದಿಲ್ಲ. ಯಾವುದೇ ಮಗುವಿನ ಬದುಕು ಬರಡಾಗಬಾರದು ಎಂಬ ಆಶಯದೊಂದಿಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಹೇಗಿದೆ ಯೋಜನೆ?: ಸಂಸ್ಥೆಯ ಕೇಂದ್ರಗಳು, ಪಿಎಚ್‌ಸಿ, ಆಸ್ಪತ್ರೆ ಸೇರಿ ವಿವಿಧ ಸ್ಥಳಗಳಲ್ಲಿ ತೊಟ್ಟಿಲು ಇರಿಸಲಾಗುತ್ತದೆ. ಅನಾಥ, ಪರಿತ್ಯಕ್ತ ಮಗುವನ್ನು ತಾಯಂದಿರು ಎಲ್ಲಿಯೋ ಎಸೆಯುವ ಬದಲು ಈ ತೊಟ್ಟಿಲಲ್ಲಿ ಇರಿಸಿ ಹೋಗಬಹುದು. ಈ ತೊಟ್ಟಿಲು ಗಾಳಿ, ಬೆಳಕಿನ ಜತೆ ಸುರಕ್ಷಿತ ವ್ಯವಸ್ಥೆ ಹೊಂದಿರುತ್ತದೆ. ತೊಟ್ಟಿಲಿಗೆ ಮಗುವನ್ನು ಹಾಕಿದ 30 ಸೆಕೆಂಡ್‌ ಒಳಗಾಗಿ ವಿಶ್ರಾಂತಿ ಎನ್‌ಜಿಒ ಸಿಬಂದಿಗೆ ಮಾಹಿತಿ ಲಭಿಸಲಿದೆ. ಇದಾದ 5 ನಿಮಿಷದಲ್ಲಿ ಮಗುವನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗುತ್ತದೆ. ಮಗುವನ್ನು ಇರಿಸಿದವರ ಮಾಹಿತಿ ಗೌಪ್ಯವಾಗಿರುತ್ತದೆ.

ಎರಡು ಕಡೆ ಪ್ರಯೋಗ: ಪ್ರಸ್ತುತ ಮಾಲೂರು ತಾಲೂಕಿನ ಯಶವಂತಪುರ ಹಾಗೂ ಕೋಲಾರದ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗಳಲ್ಲಿ ಪ್ರಾಯೋಗಿಕವಾಗಿ ತೊಟ್ಟಿಲು ಇರಿಸಲಾಗಿದೆ. ಭಾರತದಲ್ಲೇ ಮೊದಲ ಬಾರಿ ಇಂಥ ಯೋಜನೆಯೊಂದನ್ನು ಜಾರಿಗೊಳಿಸಿದ್ದು, ಮುಂದಿನ ದಿನಗಳಲ್ಲಿ ಯೋಜನೆಯನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಎನ್‌ಜಿಒ ಸಂಸ್ಥಾಪಕಿ ಸರಸಾ ವಾಸುದೇವನ್‌ ತಿಳಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ತಡೆ: ಪ್ರತಿ ದಿನ ರಾಜ್ಯದ ಪ್ರತಿ ಜಿಲ್ಲೆಯಿಂದ ಒಂದು ನವಜಾತ ಶಿಶು ಹೆತ್ತವರಿಂದ ದೂರವಾಗಿ ಅನಾಥವಾಗುತ್ತದೆ. ಅನಾರೋಗ್ಯಕರ ಸ್ಥಳಗಳಲ್ಲಿ ಎಸೆಯುವ ಬದಲು ಶಿಶುಗಳನ್ನು ತೊಟ್ಟಿಲಿಗೆ ಹಾಕಿದರೆ ರಕ್ಷಿಸಬಹುದು. ಮುಖ್ಯವಾಗಿ ಹೆಣ್ಣು ಭೂಣ ಹತ್ಯೆ ತಡೆಗೆ ನೆರವಾಗುವುದು ಸಂಸ್ಥೆಯ ಆಶಯ.

ಮಮತೆಯ ತೊಟ್ಟಿಲು ಮೂಲಕ ರಕ್ಷಿಸುವ ಮಗುವಿಗೆ ಶಿಕ್ಷಣ ಸೇರಿ ಎಲ್ಲ ಸೌಕರ್ಯ ನೀಡಿ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಪೂರಕ ವ್ಯವಸ್ಥೆ ಮಾಡುತ್ತೇವೆ. ಮುಂದೆ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶವಿದೆ.
-ಸರಸಾ ವಾಸುದೇವನ್‌, ವಿಶ್ರಾಂತಿ ಸಂಸ್ಥಾಪಕಿ

* ರಾಜೇಶ್‌ ಪಟ್ಟಿ

ಟಾಪ್ ನ್ಯೂಸ್

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.