“ರಾಜ್ಯದ ತೆಲುಗು ಭಾಷಿಕರು ಬಿಜೆಪಿ ಬೆಂಬಲಿಸಬೇಕು’
Team Udayavani, May 10, 2018, 6:50 AM IST
ಬೆಂಗಳೂರು: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಕಾರಣ ಬಿಜೆಪಿ ಬೆಂಬಲಿಸಬೇಡಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಲಗು ಭಾಷಿಕರನ್ನು ಪ್ರಚೋದಿಸುವುದು ಸರಿಯಲ್ಲ. ಕೇಂದ್ರ ಸರಕಾರವು ಆಂಧ್ರ ಪ್ರದೇಶಕ್ಕೆ 70,000 ಕೋಟಿ ರೂ.ವಿಶೇಷ ಅನುದಾನ ನೀಡಿದ್ದು, ಪಕ್ಷವನ್ನು ಬೆಂಬಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಯು.ವಿ.ಕೃಷ್ಣಂರಾಜು ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಜಗತ್ತಿನಾದ್ಯಂತ ಹಾಗೂ ಭಾರತದಲ್ಲಿ ಪ್ರಧಾನಿ ಮೋದಿ ಪರ ಅಲೆ ಇದೆ. ದೇಶದ ಅಭಿವೃದ್ಧಿಗೆ ಬಿಜೆಪಿ ಶ್ರಮಿಸುತ್ತಿದೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಒಂದೇ ಸರಕಾರವಿದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯವಾಗಲಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿನ ತೆಲುಗು ಭಾಷಿಕರು ಪಕ್ಷವನ್ನು ಬೆಂಬಲಿಸಬೇಕು ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ