ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ : ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Apr 30, 2021, 5:54 PM IST
ಬೆಂಗಳೂರು: ನಗರ ಸ್ಥಳಿಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲವಿಗೆ ಕಾರಣರಾದ ಮತದಾರರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಈ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಕೋವಿಡ್ನಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಜನತೆಯ ಕೆಂಗಣ್ಣಿಗೆ ಗುರಿಯಾಗಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ ಎಂದು ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷದ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಆಶೀರ್ವಾದ ಮಾಡಿರುವ ಮತದಾರರ ನಿರೀಕ್ಷೆ ಹುಸಿಯಾಗದ ರೀತಿಯಲ್ಲಿ ಕೆಲಸ ಮಾಡಿ ಎಂದು ಗೆಲುವು ಸಾಧಿಸಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಅವರು ಕಿವಿಮಾತು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?