ನೌಕರಿ ನೆಪದಲ್ಲಿ ಅಪಹರಣ: ಕಾರಿನಲ್ಲಿ ಅರೆನಗ್ನಗೊಳಿಸಿ ಸುಲಿಗೆ; ದಂಪತಿ ಸಹಿತ ನಾಲ್ವರ ಸೆರೆ


Team Udayavani, Aug 1, 2022, 4:17 PM IST

ನೌಕರಿ ನೆಪದಲ್ಲಿ ಅಪಹರಣ: ಕಾರಿನಲ್ಲಿ ಅರೆನಗ್ನಗೊಳಿಸಿ ಸುಲಿಗೆ; ದಂಪತಿ ಸಹಿತ ನಾಲ್ವರ ಸೆರೆ

ಬೆಂಗಳೂರು: ಮಹಿಳೆಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ದಂಪತಿ ಮತ್ತು ಸಹೋದರರು ಸೇರಿ ನಾಲ್ವರು ಮಹಾಲಕ್ಷ್ಮೀ ಲೇಔಟ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚಿಕ್ಕಗೊಲ್ಲರಹಟ್ಟಿ ನಿವಾಸಿಗಳ ರವಿ(27) ಮತ್ತು ಆತನ ಪತ್ನಿ ಮಂಗಳ(26) ಹಾಗೂ ಸೋದರ ಸಂಬಂಧಿಗಳಾದ ಶ್ರೀನಿವಾಸ್‌ (24), ಶಿವಕುಮಾರ್‌ (19) ಬಂಧಿತರು. ಆರೋಪಿಗಳಿಂದ 23 ಗ್ರಾಂ ಚಿನ್ನಾಭರಣ, 70 ಸಾವಿರ ರೂ. ನಗದು, ಕಾರು, ಮೊಬೈಲ್‌ಗಳು, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.  ಆರೋಪಿಗಳು ಇತ್ತೀಚೆಗೆ ನಂದಿನಿ ಲೇಔಟ್‌ನ ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ಅಪಹರಿಸಿ ಸುಲಿಗೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ರವಿ ದಂಪತಿ ಉತ್ತರಹಳ್ಳಿಯಲ್ಲಿರುವ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಹೌಸ್‌ಕಿಪಿಂಗ್‌ ಕೆಲಸ ಮಾಡುತ್ತಿದ್ದರು. ಇಬ್ಬರು ಎರಡನೇ ಮದುವೆಯಾಗಿದ್ದು, ಚಿಕ್ಕಗೊಲ್ಲರಹಟ್ಟಿಯಲ್ಲಿ ವಾಸವಾಗಿದ್ದರು. ಶಿವಕುಮಾರ್‌, ಶ್ರೀನಿವಾಸ್‌ ಚಾಮರಾಜಪೇಟೆಯ ಗ್ಯಾಸ್‌ ಏಜೆನ್ಸಿಯಲ್ಲಿ ಸಿಲಿಂಡರ್‌ ಡೆಲಿವರಿ ಬಾಯ್‌ ಆಗಿದ್ದರು. ಈ ಪೈಕಿ ಶಿವಕುಮಾರ್‌ ರವಿ ದಂಪತಿ ಮನೆಯಲ್ಲಿ ವಾಸವಾಗಿದ್ದ.

ಇದನ್ನೂ ಓದಿ:  ವರ್ಕ್‌ ಫ್ರಂ ಹೋಮ್‌: ನಿದ್ರೆಗೂ ಟೈಮಿಲ್ಲ

ವಿಚ್ಛೇದಿತ, ವಿಧವೆಯರೇ ಟಾರ್ಗೆಟ್‌: ಆರೋಪಿ ಮಂಗಳ ಈ ಹಿಂದೆ ನಗರದ ವಿವಿಧೆಡೆ ಬೇರೆ ಬೇರೆ ಕೆಲಸ ಮಾಡುವಾಗ ಹಲವಾರು ಮಂದಿಯನ್ನು ಪರಿಚಯಿಸಿಕೊಂಡಿದ್ದಳು. ಅವರ ಸಂಪರ್ಕದಿಂದಲೇ ವಿಚ್ಛೇದಿತ ಮತ್ತು ವಿಧವೆಯರು ಸೇರಿ ಮಹಿಳೆಯರಿಗೆ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ ಪ್ರಚಾರ ಮಾಡಿಕೊಂಡಿದ್ದಳು. ಹೀಗಾಗಿ, ಈಕೆಯನ್ನು ಹಲವಾರು ಮಂದಿ ಸಂಪರ್ಕಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೆಲವರಿಗೆ ಕೆಲಸ ಕೊಡಿಸಿದ್ದಾಳೆ. ಅವರ ಮೂಲಕ ಕೆಲ ಮಹಿಳೆಯರ ಮೊಬೈಲ್‌ ನಂಬರ್‌ ಪಡೆದು, ಈಕೆಯೇ ಸಂಪರ್ಕಿಸಿ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ ಸುಲಿಗೆ ಮಾಡುತ್ತಿದ್ದಳು ಎಂದು ಪೊಲೀಸರು ಹೇಳಿದರು.

ಅಪಹರಿಸಿ ಸುಲಿಗೆ: ಮಹಿಳೆಯರ ಬೇಡಿಕೆಯಂತೆ ಮಂಗಳ ಕೆಲಸ ಕೊಡಿಸುತ್ತೇನೆ ಎಂದು ಸ್ಥಳವೊಂದಕ್ಕೆ ಕರೆಸಿಕೊಳ್ಳುತ್ತಿದ್ದಳು. ಬಳಿಕ ರವಿ ಕಾರಿನಲ್ಲಿ ಬಂದು ಆ ಮಹಿಳೆಯರನ್ನು ಕರೆದುಕೊಂಡು, ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರಿನಲ್ಲಿ ಕೂರಿಸಿಕೊಂಡು ಕಾರು ಹತ್ತಿಕೊಳ್ಳುತ್ತಿದ್ದರು. ಬಳಿಕ ಮಾಗಡಿ ರಸ್ತೆ ಅಥವಾ ಕನಕಪುರ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆದೊ ಯುತ್ತಿದ್ದರು. ಅದನ್ನು ಪ್ರಶ್ನಿಸಿದ ಮಹಿಳೆಯರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸುತ್ತಿದ್ದರು. ನಂತರ ಹಣ, ಚಿನ್ನಾಭರಣ ಹಾಗೂ ಬ್ಯಾಂಕ್‌ ಖಾತೆಯಲ್ಲಿದ್ದ ಹಣ ವನ್ನು ವರ್ಗಾವಣೆ ಮಾಡಿಕೊಂಡು, ಮಾರಕಾಸ್ತ್ರ ತೋರಿಸಿ, ಅರೆನಗ್ನಗೊಳಿಸಿ ವಿಡಿಯೋ ಮಾಡುತ್ತಿದ್ದರು. ಒಂದು ವೇಳೆ ಪೊಲೀಸರಿಗೆ ಮಾಹಿತಿ ನೀಡಿದರೆ, ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು

ಅರೆನಗ್ನ ವಿಡಿಯೋ, ಬ್ಲ್ಯಾಕ್‌ಮೇಲ್‌:

ಇತ್ತೀಚೆಗೆ ನಂದಿನಿ ಲೇಔಟ್‌ ಮಹಿಳೆಯನ್ನು ಸಂದೀಪ್‌ ಬಾರ್‌ ಬಳಿ ಕರೆಸಿಕೊಂಡ ಮಂಗಳ, ಮೂವರು ಆರೋಪಿಗಳ ಜತೆ ಕಾರಿನಲ್ಲಿ ಕಳುಹಿಸಿದ್ದಳು. ಮಾರ್ಗ ಮಧ್ಯೆ ಅನುಮಾನಗೊಂಡು ಕಾರು ನಿಲ್ಲಿಸುವಂತೆ ಸಂತ್ರಸ್ತೆ ಕೂಗಿಕೊಂಡಾಗ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಬಳಿಕ ತಾವರೆಕೆರೆ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾರಕಾಸ್ತ್ರ ತೋರಿಸಿ ಅರೆನಗ್ನಗೊಳಿಸಿ ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ 27 ಗ್ರಾಂ ಚಿನ್ನಾಭರಣ, 84 ಸಾವಿರ ರೂ. ಫೋನ್‌ ಪೇ ಮೂಲಕ ವರ್ಗಾವಣೆ, ಬಳಿಕ ಪಿನ್‌ ನಂಬರ್‌ ಪಡೆದು ಎಟಿಎಂ ಕೇಂದ್ರದಲ್ಲಿ 40 ಸಾವಿರ ರೂ. ಪಡೆದುಕೊಂಡಿದ್ದಾರೆ. ಬಳಿಕ ಮೊಬೈಲ್‌ ಕಸಿದುಕೊಂಡು ಮಾರ್ಗಮಧ್ಯೆ ಬಿಟ್ಟು ಹೋಗಿದ್ದರು. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್‌ ಠಾಣೆಯ ಇನ್‌ಸ್ಪೆಕ್ಟರ್‌ ಎಚ್‌.ಎಂ.ಕಾಂತರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪ್ರಕರಣ ಭೇದಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.