ಮೂರು ವರ್ಷದ ಬಾಲಕಿ ಸೇರಿ ನಾಲ್ವರ ಸಾವು


Team Udayavani, Nov 13, 2018, 12:00 PM IST

mooru-var.jpg

ಬೆಂಗಳೂರು: ಮನೆ ಖರೀದಿಗೆ 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಮೃತಪಟ್ಟ ಕಾರಣ, ಹಣ ವಾಪಸ್‌ ಬರುವುದಿಲ್ಲವೆಂದು  ಮೂರು ವರ್ಷದ ಬಾಲಕಿ ಸೇರಿ ನಾಲ್ವರ ದುರಂತ ಸಾವು ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.

 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಹಣ ವಾಪಸ್‌ ಬರಲ್ಲ ಎಂದು ಆತಂಕಗೊಂಡ ಗೃಹಿಣಿ, ತನ್ನ ಮೂರು ವರ್ಷದ ಮಗಳು ಹಾಗೂ ತಂದೆ ತಾಯಿಗೆ ವಿಷಪೂರಿತ ಮಾತ್ರೆ ನುಂಗಿಸಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಧಾರಾಣಿ (29) ಸೋನಿಕಾ (3)  ಜನಾರ್ದನ್‌ (55) ಅವರ ಪತ್ನಿ ಸುಮಿತ್ರಾ (45) ಮೃತರು.

ನಾಲ್ವರು ಮೃತಪಟ್ಟಿರುವ ಎರಡು ಪುಟಗಳ ಡೆತ್‌ ನೋಟ್‌ ದೊರೆತಿದ್ದು” ಮನೆ ಖರೀದಿಸುವ ಸಲುವಾಗಿ ನೀಡಿದ್ದ 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದು, ಹಣ ಹಾಗೂ ಮನೆ ಸಿಗುವುದಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆಯಲಾಗಿದೆ. ಆದರೆ, ಹಣ ಪಡೆದುಕೊಂಡ ವ್ಯಕ್ತಿ ಯಾರು? ಆತನ ವಿಳಾಸ ಏನನ್ನೂ ನಮೂದಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರ ಠಾಣೆ ಪೊಲೀಸರು, ಹಲವು ಆಯಾಮಗಳಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ. ಮೃತ ಸುಧಾರಾಣಿ ಪತಿ ಅರ್ಜುನ್‌ನನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಮೃತ ದೇಹಗಳನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ಬಂದ ಬಳಿಕ ನಾಲ್ವರ ಸಾವು ಹೇಗೆ ಸಂಭವಿಸಿದೆ ಎಂಬುದು ಖಚಿತವಾಗಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಡವಾಗಿ ನಾಲ್ವರ ಸಾವು ಬೆಳಕಿಗೆ!: ಮೃತ ಸುಧಾರಾಣಿಗೆ 4 ವರ್ಷಗಳ ಹಿಂದೆ ಮತ್ತಿಕೆರೆಯ ಅರ್ಜುನ್‌ ಎಂಬಾತನ ಜತೆ ವಿವಾಹವಾಗಿದ್ದು, ದಂಪತಿಗೆ ಮೂರು ವರ್ಷದ  ಸೋನಿಕಾ ಮಗಳಿದ್ದಾಳೆ. ಅರ್ಜುನ್‌ ಮತ್ತಿಕೆರೆಯಲ್ಲಿ ಮೆಡಿಕಲ್‌ ಸ್ಟೋರ್‌ ನಡೆಸುತ್ತಿದ್ದ ಅದನ್ನು ಸುಧಾರಾಣಿ ನಿರ್ವಹಣೆ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಮಗಳ ಜತೆ  ಪೋಷಕರ ಮನೆಗೆ ಬಂದಿದ್ದ ಸುಧಾರಾಣಿ ಬಂದಿದ್ದರು.

ಕಳೆದ ಎರಡು ದಿನಗಳಿಂದ ಮನೆಯ ಬಾಗಿಲು ತೆಗೆದಿರಲಿಲ್ಲ. ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಮನೆಯಿಂದ ಕೆಟ್ಟ ವಾಸನೆ ಬರಲಾರಂಭಿಸಿದೆ. ಇದನ್ನು ಗಮನಿಸಿದ ಮನೆಯ ಮಾಲೀಕರು ಮನೆಯ ಬಾಗಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಅನುಮಾನಗೊಂಡು ಸುಧಾರಾಣಿ ಪತಿಗೆ ಪೋನ್‌ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅವರು ಬಂದು ನೋಡಿದಾಗ ಪತ್ನಿ, ಮಗಳು, ಅತ್ತೆ, ಮಾವ ಮೃತಪಟ್ಟಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಡೆತ್‌ನೋಟ್‌’ನಲ್ಲಿದೆಯೇ ಸಾವಿನ ರಹಸ್ಯ?: ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮನೆಯನ್ನು ಪರಿಶೀಲಿಸಿದ್ದಾರೆ. ಜನಾರ್ದನ ಹಾಗೂ ಪತ್ನಿ ತಮ್ಮ ಕೊಠಡಿಯಲ್ಲಿ ತಮ್ಮ ಬೆಡ್‌ಮೇಲೆಯೇ ಅಸುನೀಗಿದ್ದರು. ಇತ್ತ ಸುಧಾರಾಣಿ ಹಾಗೂ ಸೋನಿಕಾ ಕೂಡ ಜೊತೆಯಲ್ಲಿಯೇ ಕೊನೆಯುಸಿರೆಳೆದಿದ್ದು, ಅಲ್ಲಿ ಡೆತ್‌ ನೋಟ್‌ ಲಭ್ಯವಾಗಿದೆ.

ಡೆತ್‌ನೋಟ್‌ನಲ್ಲಿರುವ ಮಾಹಿತಿಯನ್ನು ಗಮನಿಸಿದರೆ ಸುಧಾರಾಣಿ ಮೊದಲು ತಂದೆ, ತಾಯಿ ಮಗಳನ್ನು ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಆದರೆ. ಡೆತ್‌ ನೋಟ್‌ ನಿಜವಾಗಿಯೂ ಬರೆದಿರುವುದು ಯಾರು ಎಂಬುದು ಖಚಿತವಾಗಬೇಕಿದೆ. ಹೀಗಾಗಿ, ಆಕೆಯ ಬರವಣಿಗೆ ಶೈಲಿಯನ್ನು ಪರಿಶೀಲಿಸಬೇಕಿದೆ. ಮೃತರ ಮರಣೋತ್ತರ ಪರೀಕ್ಷಾ ವರದಿಯೂ ಕೈ ಸೇರಬೇಕಿದೆ. ಜತೆಗೆ, 25 ಲಕ್ಷ ರೂ. ಹಣ ಪಡೆದಿದ್ದವರು ಯಾರು ಎಂಬುದು ತನಿಖೆಯಲ್ಲಿ ಗೊತ್ತಾಗಬೇಕಿದೆ.

ಜತೆಗೆ, ಸುಧಾರಾಣಿ ಹಾಗೂ ಆಕೆಯ ಪೋಷಕರು ಬಳಸುತ್ತಿದ್ದ ಮೊಬೈಲ್‌ ಫೋನ್‌ಗಳ ದೂರವಾಣಿ ಕರೆಗಳು, ಮೆಸೇಜ್‌ಗಳನ್ನು ಪರಿಶೀಲಿಸಲಾಗುತ್ತಿದ್ದು, ಕೊಲೆಯೇ? ಆತ್ಮಹತ್ಯೆಯೇ ಎಂಬುದು ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ನಾಲ್ವರು ಸಾವಿನ ಪ್ರಕರಣದ ತನಿಖೆಯನ್ನು ಹಲವು ದೃಷ್ಟಿಕೋನಗಳಲ್ಲಿ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ದೊರೆತಿರುವ ಡೆತ್‌ನೋಟ್‌ನಲ್ಲಿ ಹಲವು ಮಾಹಿತಿಯಿದ್ದು, ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಮೃತರ ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಾವು ಸಂಭವಿಸಿರುವುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.
-ಕಲಾ ಕೃಷ್ಣಮೂರ್ತಿ, ಡಿಸಿಪಿ, ಈಶಾನ್ಯ ವಿಭಾಗ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.