ವ್ಯಾಪಾರಿ ಅಪಹರಿಸಲು ಯತ್ನಿಸಿದ್ದ ನಾಲ್ವರ ಬಂಧನ


Team Udayavani, Jun 9, 2018, 11:59 AM IST

vyapari.jpg

ಬೆಂಗಳೂರು: ಕಳೆದ ತಿಂಗಳು ನಡೆದ ಪಿಠೊಪಕರಣ ವ್ಯಾಪಾರಿ ಬಿಲ್ಡರ್‌ ಮಸೂದ್‌ ಅಲಿ ಅಪಹರಣ ಯತ್ನ ಪ್ರಕರಣ ಭೇದಿಸಿರುವ ಪುಲಿಕೇಶಿನಗರ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಚೇಳಿಕೆರೆಯ ಶೇಝ್ ಜುಬೇರ್‌ (26), ಆರ್‌.ಟಿ.ನಗರದ ಮೆಹ್ತಾಬ್‌ (27), ಕೆ.ಜಿ.ಹಳ್ಳಿಯ ನಿಯಾಮತುಲ್ಲಾ (19) ಮತ್ತು ಡಿ.ಜೆ.ಹಳ್ಳಿಯ ಸೈಯದ್‌ ಇಸ್ರಾರ್‌ (22) ಬಂಧಿತರು. ಈ ಪೈಕಿ ಆರೋಪಿ ಜುಬೇರ್‌ ಉದ್ಯಮಿ ಮಸೂದ್‌ ಅಲಿಗೆ ಪರಿಚಿತನಾಗಿದ್ದು, ಅಪಹರಣ ಮಾಡಿ ಐದು ಕೋಟಿ ರೂ.ಗೆ ಬೇಡಿಕೆ ಇಡಲು ತನ್ನ ಸಹಚರರೊಂದಿಗೆ ಸಂಚು ರೂಪಿಸಿದ್ದ.

ಅದರಂತೆ ಮೇ 21ರಂದು ಫ್ರೆಜರ್‌ಟೌನ್‌ನ ಆಸಾಯ್‌ ರಸ್ತೆಯಲ್ಲಿ ಕಾರಿನಲ್ಲಿ ಹೋಗುವಾಗ ಅಲಿ ಅವರನ್ನು ಅಹರಿಸಲು ಯತ್ನಿಸಿದ್ದು, ಪ್ರತಿರೋಧ ವ್ಯಕ್ತಪಡಿಸಿದಾಗ ಗುಂಡಿನ ದಾಳಿ ನಡೆಸಿದ್ದರು. ಅದೃಷ್ಟವಶಾತ್‌ ಉದ್ಯಮಿ ಪ್ರಾಣಾಪಾಯದಿಂದ ಪಾರಾಗಿದ್ದರು. ಮೊಬೈಲ್‌ ನೆಟ್‌ವರ್ಕ್‌ ಹಾಗೂ ಇತರೆ ತಾಂತ್ರಿಕ ತನಖೆಯಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಆರೋಪಿ ಶೇಝ್ ಜುಬೇರ್‌ ಎಂಜಿನಿಯರ್‌ ಆಗಿದ್ದು, ಮೆಹ್ತಾಬ್‌ ಎನ್‌ಫೀಲ್ಡ್‌ ಕಂಪನಿಯ ಮಾಜಿ ನೌಕರ. ನಿಯಾಮತುಲ್ಲಾ ಮೊಬೈಲ್‌ ಸಿಮ್‌ ಕಾರ್ಡ್‌ ಅಂಗಡಿ ಇಟ್ಟುಕೊಂಡಿದ್ದ. ಸೈಯ್ಯದ್‌ ಇಸ್ರಾರ್‌ ಪಿಓಪಿ ಕೆಲಸ ಮಾಡಿಕೊಂಡಿದ್ದ.

5 ಕೋಟಿ ರೂ.ಗೆ ಬೇಡಿಕೆ: ಈ ಹಿಂದೆ ಶೇಝ್ ಜುಬೇರ್‌ ಸಂಬಂಧಿಯೊಬ್ಬರು ಉದ್ಯಮಿ ಮಸೂದ್‌ ಅಲಿ ಅವರಿಂದ ಫ್ಲಾಟ್‌ವೊಂದನ್ನು ಖರೀದಿಸಿದ್ದರು. ಆಗ ಪರಿಚಯವಾದ ಜುಬೇರ್‌, ಆಗಾಗ ಮಸೂದ್‌ ಅಲಿ ಮನೆಗೆ ಹೋಗುತ್ತಿದ್ದ. ಜತೆಗೆ ಮಸೂದ್‌ ಅಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ತಿಳಿದುಕೊಂಡಿದ್ದ.

ಈ ಹಿನ್ನೆಲೆಯಲ್ಲಿ ಅಲಿ ಅವರನ್ನು ಅಪಹರಿಸಿ 5 ಕೋಟಿ ರೂ.ಗೆ ಬೇಡಿಕೆ ಇಡಲು ತೀರ್ಮಾನಿಸಿದ್ದ. ಅದರಂತೆ ಮೂರು ತಿಂಗಳ ಹಿಂದೆ ತನ್ನ ಮನೆಯಲ್ಲಿಯೇ ಇತರೆ ಆರೋಪಿಗಳ ಜತೆ ಸೇರಿ ಅಪಹರಣಕ್ಕೆ ಸಂಚು ರೂಪಿಸಿದ್ದ. ಬಳಿಕ ಮಸೂದ್‌ ಅಲಿಯ ಪ್ರತಿ ಚಲನವಲನಗಳ ಬಗ್ಗೆ ನಿಗಾವಹಿಸಿದ್ದು, ನಿತ್ಯ ಓಡಾಡುವ ರಸ್ತೆ ಹಾಗೂ ಕಚೇರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು.

ಪ್ರತಿರೋಧಿಸಿದ್ದಕ್ಕೆ ಗುಂಡೇಟು: ಮೇ 21ರಂದು ಅಪಹರಣಕ್ಕೆ ಸಂಚು ರೂಪಿಸಿ ಅಂದು ಮನೆಯಿಂದ ಸೇಂಟ್‌ ಮಾರ್ಕ್ಸ್ ರಸ್ತೆಯಲ್ಲಿರುವ ಪಿಠೊಪಕರಣ ಅಂಗಡಿಗೆ ಹೋಗುತ್ತಿದ್ದ ಅಲಿ ಅವರನ್ನು, ಆಸಾಯ್‌ ರಸ್ತೆಯಲ್ಲಿ ಆರೋಪಿಗಳು ಅಡ್ಡಗಟ್ಟಿದ್ದಾರೆ. ಬಳಿಕ ಅವರ ಕಾರಿನಲ್ಲೇ ಅಪಹರಿಸಲು ಯತ್ನಿಸಿದ್ದಾರೆ. ಆದರೆ, ಮಸೂದ್‌ ಅಲಿ ಪ್ರತಿರೋಧ ತೋರಿದಾಗ ಆರೋಪಿಗಳು ತಮ್ಮ ಬಳಿಯಿದ್ದ ಪಿಸ್ತೂಲ್‌ನಿಂದ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ನಂಬರ್‌ ಪ್ಲೇಟ್‌ ಬದಲಿಸಿದ್ದರು: ಆರೋಪಿಗಳ ಪೈಕಿ ಮೆಹ್ತಾಬ್‌ ತನ್ನ ಮನೆಯಲ್ಲಿ ಶುಭ ಕಾರ್ಯವಿದೆ. ಕುಟುಂಬ ಸದಸ್ಯರು ಬೇರೆಡೆ ಹೋಗಬೇಕಿದೆ ಎಂದು ಕಾರೊಂದನ್ನು ಎರಡು ದಿನಗಳಿಗೆ ಬಾಡಿಗೆಗೆ ಪಡೆದಿದ್ದ. ಅಪಹರಣಕ್ಕೂ ಮೊದಲು ಕಾರಿನ ಮೂಲ ನಂಬರ್‌ ಪ್ಲೇಟ್‌ ಬದಲಿಸಿ ನಕಲಿ ಪ್ಲೇಟ್‌ ಅಳವಡಿಸಿದ್ದ. ಕೃತ್ಯವೆಸಗಿ ಹೋಗುವಾಗ ಕಾರಿನ ನಂಬರ್‌ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದರೆ, ತನಿಖೆ ವೇಳೆ ಆರೋಪಿಗಳು ಬಳಸಿರುವುದು ನಕಲಿ ನಂಬರ್‌ ಪ್ಲೇಟ್‌ ಎಂದು ತಿಳಿಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.