Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ


Team Udayavani, Mar 18, 2024, 10:25 AM IST

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

ಬೆಂಗಳೂರು: ಯುಪಿಐ ಮೂಲಕ ಹಣ ಪಾವತಿಸಿ ಮೊಬೈಲ್‌ನಲ್ಲಿ ನಕಲಿ ರಶೀದಿ ತೋರಿಸಿ ಚಿನ್ನಾಭರಣ ಮಳಿಗೆ ಮಾಲೀಕನಿಗೆ ಲಕ್ಷಾಂತರ ರೂ. ವಂಚಿಸಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೇವನಹಳ್ಳಿ ನಿವಾಸಿ ನಂದನ್‌(40) ಮತ್ತು ಆಕೆಯ ಪ್ರಿಯತಮೆ ರಾಜರಾಜೇಶ್ವರಿನಗರ ನಿವಾಸಿ ಕಲ್ಪಿತಾ(35) ಬಂಧಿತರು. ಆರೋಪಿ ಗಳಿಂದ ಚಿನ್ನಾಭರಣ ವಶಕ್ಕೆ ಪಡೆಯ ಲಾಗಿದೆ. ಆರೋಪಿಗಳು ಇತ್ತೀಚೆಗೆ ಮಾಗಡಿ ಮುಖ್ಯ ರಸ್ತೆಯಲ್ಲಿರುವ ಪರಮೇಶ್ವರ ಬ್ಯಾಂಕರ್ಸ್‌ ಆ್ಯಂಡ್‌ ಜ್ಯುವೆಲರ್ಸ್‌ನಲ್ಲಿ 36 ಗ್ರಾಂ ತೂಕದ ಚಿನ್ನಾಭರಣ ಖರೀದಿಸಿ, ನಕಲಿ ಆ್ಯಪ್‌ ಮೂಲಕ 2.29 ಲಕ್ಷ ರೂ. ಪಾವತಿಸಿ ವಂಚಿಸಿದ್ದರು. ಈ ಸಂಬಂಧ ಮಳಿಗೆ ಮಾಲೀಕ ಗೇರ್ವಚಂದ್‌ ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿ ನಂದನ್‌ಗೆ ಈಗಾಗಲೇ ಮದುವೆ ಯಾಗಿದ್ದು, ಪತ್ನಿಯಿಂದ ದೂರವಾ ಗಿದ್ದಾನೆ. ಇತ್ತ ಕಲ್ಪಿತಾ ಕೂಡ ಪತಿಯಿಂದ ದೂರವಾಗಿ ಒಂಟಿಯಾಗಿ ವಾಸವಾಗಿ ದ್ದಳು. ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯ ವಾದ ಆರೋಪಿಗಳು ಕೆಲ ತಿಂಗ ಳಿಂದ ಸಹ ಜೀವನ ನಡೆಸುತ್ತಿ ದ್ದಾರೆ. ಇಬ್ಬರು ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ.

ಈ ಮಧ್ಯೆ ಫ್ರಾಂಕ್‌ ಪೇಮೆಂಟ್‌ ಎಪಿಕೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು, ಚಿನ್ನಾಭರಣ ಮಳಿಗೆಗಳು, ಹೋಟೆಲ್‌, ದಿನಸಿ ಅಂಗಡಿ ಸೇರಿ ವಿವಿಧೆಡೆ ತೆರಳಿ ಅಗತ್ಯ ವಸ್ತುಗಳನ್ನು ಖರೀದಿಸಿ ಈ ಆ್ಯಪ್‌ ಮೂಲಕ ಹಣ ಪಾವತಿಸುತ್ತಿದ್ದರು. ಬಳಿಕ ತಮ್ಮ ಮೊಬೈಲ್‌ನಲ್ಲಿ ಪೇಮೆಂಟ್‌ ಆಗಿದೆ ಎಂಬ ಸಂದೇಶ ತೋರಿಸಿ, ಅಂಗಡಿ ಮಾಲೀಕರನ್ನು ವಂಚಿಸುತ್ತಿದ್ದರು. ಅಸಲಿಗೆ ಅಂಗಡಿ ಮಾಲೀಕರಿಗೆ ಹಣವೇ ಜಮೆ ಆಗುತ್ತಿರಲಿಲ್ಲ ಎಂದು ಪೊಲೀಸರು ಹೇಳಿದರು.

ಏನಿದು ವಂಚನೆ?: ಮಾ.4ರಂದು ಬೆಳಗ್ಗೆ 9.30ಕ್ಕೆ ಆರೋಪಿಗಳು ಮಾಗಡಿ ಮುಖ್ಯರಸ್ತೆ ಯಲ್ಲಿ ರುವ ಪರಮೇಶ್ವರ ಬ್ಯಾಂಕರ್ಸ್‌ ಮತ್ತು ಜ್ಯುವೆಲರ್ಸ್‌ ಅಂಗಡಿಗೆ ಹೋಗಿ, 36 ಗ್ರಾಂ ತೂಕದ ಚಿನ್ನಾಭರಣ ಖರೀದಿಸಿದ್ದಾರೆ. ಬಳಿಕ ತಮ್ಮ ಬಳಿ ನಗದು ಇಲ್ಲ. ನೆಫ್ಟ್ ಮೂಲಕ ಹಣ ಕಳುಹಿಸುತ್ತೇವೆ ಎಂದು 2,29,300 ರೂ. ನಕಲಿ ಆ್ಯಪ್‌ ಮೂಲಕ ಹಣ ಜಮೆ ಮಾಡಿದ್ದಾರೆ. ಬಳಿಕ ಒಡವೆಗಳನ್ನು ಪಡೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ಕೆಲ ಹೊತ್ತಿನ ಬಳಿಕ ಮಳಿಗೆ ಮಾಲೀಕರು ಬ್ಯಾಂಕ್‌ ಖಾತೆಯಲ್ಲಿ ಹಣ ಜಮೆ ಆಗಿರುವ ಬಗ್ಗೆ ಪರಿಶೀಲಿಸಿದಾಗ ಹಣ ವರ್ಗಾವಣೆ ಆಗದಿರುವುದು ಕಂಡು ಬಂದಿದೆ. ಈ ಸಂಬಂಧ ಮಾಲೀಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸ ಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಚಿನ್ನಾಭರಣ ಮಳಿಗೆ ಯಿಂದ ದೋಚಿದ್ದ ಚಿನ್ನಾಭರಣಗಳನ್ನು ಬೇರೆಡೆ ಅಡವಿಟ್ಟು, ಹಣ ಪಡೆದು ಐಷಾ ರಾಮಿ ಜೀವನಕ್ಕೆ ವ್ಯಯಿಸಿದ್ದಾರೆ ಎಂಬುದು ಗೊತ್ತಾಗಿದೆ. ಅಲ್ಲದೆ, ಬೇರೆ ಕಡೆಯೂ ಇದೇ ರೀತಿಯಲ್ಲಿ ವಂಚನೆ ಮಾಡಿರುವುದು ಕಂಡು ಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

 

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.