Fraud: 150 ಜನರಿಂದ 40 ಕೋಟಿ ರೂ. ಸಂಗ್ರಹಿಸಿ ವಂಚನೆ


Team Udayavani, Apr 3, 2024, 9:57 AM IST

Fraud: 150 ಜನರಿಂದ 40 ಕೋಟಿ ರೂ. ಸಂಗ್ರಹಿಸಿ ವಂಚನೆ

ಬೆಂಗಳೂರು: ಚೈನ್‌ ಲಿಂಕ್‌ ವ್ಯವಹಾರದ ಹೆಸರಿನಲ್ಲಿ ನೂರಾರು ಮಂದಿಗೆ ಕೋಟ್ಯಂತರ ರೂ. ಹೂಡಿಕೆ ಮಾಡಿಕೊಂಡು ವಂಚಿಸುತ್ತಿದ್ದ ಆರೋಪದಡಿ “ಅಕ್ಷಯ್‌ ಫಾರ್ಚೂನ್‌’ (ಎ.ಎಫ್‌. ಡೆವಲಪರ್ಸ್‌) ಕಂಪನಿ ವಿರುದ್ಧ ಗೋವಿಂದರಾಜನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಈ ಕುರಿತ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಪ್ರಕರಣದ ಆರೋಪಿ, ಕಂಪನಿಯ ಮಾಲೀಕ ಮುನಿರಾಜು(37) ಮತ್ತು ವ್ಯವಸ್ಥಾಪಕ ಮಂಜು(39) ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ವಿಜಯನಗರದ ಎಂ.ಸಿ. ಲೇಔಟ್‌ನಲ್ಲಿ ವಂಚಕರು ಕಂಪನಿ ಕಚೇರಿ ತೆರೆದಿದ್ದು, ಹೂಡಿಕೆ ಹೆಸರಿನಲ್ಲಿ 150ಕ್ಕೂ ಹೆಚ್ಚು ಜನರಿಂದ ಸುಮಾರು 40 ಕೋಟಿ ರೂ. ಕಟ್ಟಿಸಿಕೊಂಡು ವಂಚಿಸಿರುವ ಮಾಹಿತಿ ಇದೆ. ಹೂಡಿಕೆ ಮಾಡಿದ ಹಣದ ಮೇಲೆ ತಿಂಗಳಿಗೆ ಶೇ.25ರಷ್ಟು ಲಾಭಾಂಶ ನೀಡುವುದಾಗಿ ಆರೋಪಿಗಳು ಹೇಳುತ್ತಿದ್ದರು. ಯಾರಾದರೂ ಹೂಡಿಕೆದಾರರು, ತಮ್ಮ ಪರಿಚಯಸ್ಥರು ಹಾಗೂ ಇತರರಿಂದ ಹಣ ಹೂಡಿಕೆ ಮಾಡಿದರೆ ಕಮಿಷನ್‌ ಕೂಡ ನೀಡುತ್ತಿದ್ದರು. ಇದರೊಂದಿಗೆ ಕಡಿಮೆ ಮೊತ್ತಕ್ಕೆ ಫ್ಲ್ಯಾಟ್‌ ಮತ್ತು ನಿವೇಶನ ಕೊಡಿಸುವುದಾಗಿ ವಂಚಿಸುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಪತ್ನಿ, ಸಂಬಂಧಿಕರೂ ಭಾಗಿ: “ಆರೋಪಿ ಮುನಿರಾಜು, ಈತನ ಪತ್ನಿ ಹಾಗೂ ಕುಟುಂಬದ ಸದಸ್ಯರು ಕಂಪನಿಯ ನಿರ್ದೇಶಕರಾಗಿದ್ದಾರೆ ಎಂಬುದು ಗೊತ್ತಾಗಿದೆ. ಪ್ರತಿಯೊಬ್ಬರೂ ವಂಚನೆ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಎಲ್ಲರನ್ನೂ ವಿಚಾರಣೆ ನಡೆಸಬೇಕಿದೆ. ಮುನಿರಾಜು ಪತ್ನಿ, ಹಲವರನ್ನು ಸಂಪರ್ಕಿಸಿ ಹಣ ಹೂಡಿಕೆ ಮಾಡಿಸಿದ್ದರೆಂಬ ಮಾಹಿತಿ ಇದೆ. ಕೆಲ ಹೂಡಿಕೆದಾರರಿಗೆ ಆರಂಭದಲ್ಲಿ ಲಾಭಾಂಶ ಸಹ ನೀಡಿದ್ದರು. ಕೆಲ ತಿಂಗಳಿನಿಂದ ಲಾಭಾಂಶ ನೀಡದೇ ವಂಚಿಸಿದ್ದಾರೆ ಎಂದು ಸಿಸಿಬಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಲಕ್ಷ ರೂ.ಗೆ 5 ಸಾವಿರ ರೂ.ನೀಡುವ ಆಮಿಷ  :

1 ಲಕ್ಷ ರೂ. ಹೂಡಿಕೆ ಮಾಡಿದರೆ ಪ್ರತಿ ತಿಂಗಳು 5 ಸಾವಿರ ರೂ. ಲಾಭಾಂಶ ನೀಡುವುದಾಗಿಯೂ ಆರೋಪಿಗಳು ಜಾಹೀರಾತು ನೀಡುತ್ತಿದ್ದರು. ಅವರ ಮಾತು ನಂಬಿದ್ದ ಸಾರ್ವಜನಿಕರು, ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ವಂಚನೆ ಬಗ್ಗೆ ಕೆಲ ಹೂಡಿಕೆದಾರರು ಮಾಹಿತಿ ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಕೆಲ ಹೂಡಿಕೆದಾರರು ಈಗಾಗಲೇ ಹೇಳಿಕೆ ಸಹ ನೀಡಿದ್ದಾರೆ. ಎ.ಎಫ್‌. ಡೆವಲ ಪರ್ಸ್‌ ಕಂಪನಿಯಿಂದ ಯಾರಿಗಾದರೂ ವಂಚನೆಯಾಗಿದ್ದರೆ ಸಿಸಿಬಿಯ ಚಾಮರಾಜ ಪೇಟೆಯಲ್ಲಿರುವ ಕಚೇರಿಗೆ ದೂರು ನೀಡಬ ಹುದು ಎಂದು ಸಿಸಿಬಿ ಪೊಲೀಸರು ಕೋರಿದ್ದಾರೆ.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.