Fraud: ಪಾರ್ಟ್ ಟೈಂ ಉದ್ಯೋಗ ಕೊಡಿಸುವುದಾಗಿ 58.83 ಲಕ ರೂ. ವಂಚಿಸಿದ ಸೈಬರ್ ಕಳ್ಳರು
Team Udayavani, Oct 14, 2023, 12:37 PM IST
ಬೆಂಗಳೂರು: ಪಾರ್ಟ್ ಟೈಂ ಉದ್ಯೋಗ ಕೊಡಿಸುವ ನೆಪದಲ್ಲಿ ಆನ್ಲೈನ್ ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ ಮಾಡಿ ಟಾಸ್ಕ್ಗಳ ಮೂಲಕ ಹಣ ದ್ವಿಗುಣಗೊಳಿಸಬಹುದು ಎಂದು ಎಂಜಿನಿಯರ್ಗೆ ಸೈಬರ್ ಕಳ್ಳರು 58.83 ಲಕ್ಷ ರೂ. ವಂಚಿಸಿದ್ದಾರೆ.
ನಾಗರ ಬಾವಿಯ ವಿಶ್ವನಾಥ್ (31) ವಂಚನೆ ಗೊಳಗಾದವರು. ಖಾಸಗಿ ಕಂಪನಿಯಲ್ಲಿ ಎಂಜಿನಿ ಯರ್ ವಿಶ್ವನಾಥ್ಗೆ ಕೆಲ ದಿನಗಳ ಹಿಂದೆ ವಾಟ್ಸ್ಆ್ಯಪ್ ನಂಬರ್ನಿಂದ ಅಪರಿಚಿತ ವ್ಯಕ್ತಿ ಪಾರ್ಟ್ ಟೈಂ ಉದ್ಯೋಗ ಬಗ್ಗೆ ಸಂದೇಶ ಕಳುಹಿಸಿದ್ದ. ವಿಶ್ವನಾಥ್ ಸಂದೇಶ ಕಳುಹಿಸಿದ ಅಪರಿಚಿತರನ್ನು ಸಂಪರ್ಕಿಸಿ ಈ ಬಗ್ಗೆ ವಿಚಾರಿಸಿದ್ದರು. ನಂತರ ಟೆಲಿಗ್ರಾಂ ಲಿಂಕ್ ಕಳುಹಿಸಿದ ಅಪರಿಚಿರು, ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಟಾಸ್ಕ್ಗಳ ಮೂಲಕ ಕಟ್ಟಿರುವ ಹಣ ದ್ವಿಗುಣಗೊಳಿಸಬಹುದು. ಜೊತೆಗೆ ಕಮೀಷನ್ ಸಹ ಸಿಗಲಿದೆ ಎಂದು ನಂಬಿಸಿ ದ್ದರು. ಬಳಿಕ ಆನ್ಲೈನ್ ಟ್ರೇಡಿಂಗ್ಗೆ ನಿಮ್ಮ ನ್ನು ರಿಜಿಸ್ಟರ್ ಮಾಡಿಸಿರುವುದಾಗಿ ಹೇಳಿದ್ದಾರೆ.
ಬಳಿಕ ಹಂತವಾಗಿ 58.83 ಲಕ್ಷ ರೂ. ಅನ್ನು ಅವರ ಖಾತೆಗೆ ಜಮೆ ಮಾಡಿಸಿದ್ದಾರೆ. ಪ್ರಾರಂಭದಲ್ಲಿ ಸ್ವಲ್ಪ ಪ್ರಮಾದ ದುಡ್ಡನ್ನು ಕಮೀಷನ್ ರೂಪದಲ್ಲಿ ವಿಶ್ವನಾಥ್ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಅಸಲು ಹಣ ಡ್ರಾ ಮಾಡಲು ಇನ್ನಷ್ಟು ದುಡ್ಡು ಜಮೆ ಮಾಡುವಂತೆ ಒತ್ತಾಯಿಸಿದ್ದರು. ಅನುಮಾನಗೊಂಡ ವಿಶ್ವನಾಥ್ ಈ ಬಗ್ಗೆ ಪರಿಚಿತರ ಮೂಲಕ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈಚಳಕ ಎಂಬುದು ಗೊತ್ತಾಗಿದೆ. ನಂತರ ಸೈಬರ್ ವಂಚಕರು ಸಂಪರ್ಕಕ್ಕೆ ಸಿಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ