ಎಫ್‌ಬಿ ಪರಿಚಿತ ವಿದೇಶಿ ಮಹಿಳೆಯಿಂದ ದೋಖಾ

ಜ್ಯುವೆಲ್ಲರಿ ಶಾಪ್‌ ಆರಂಭಿಸುವ ನೆಪದಲ್ಲಿ ಬ್ಯಾಂಕ್‌ ಉದ್ಯೋಗಿಗೆ 35 ಲಕ್ಷ ರೂ ವಂಚನೆ, ಹಣ ಪಡೆದ ಬಳಿಕ ನಾಪತ್ತೆ

Team Udayavani, Jun 24, 2022, 11:14 AM IST

5FB

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯೊಬ್ಬರು ಜ್ಯುವೆಲ್ಲರಿ ಶಾಪ್‌ ತೆರೆದು ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸುವುದಾಗಿ ನಂಬಿಸಿ ಬ್ಯಾಂಕ್‌ ಉದ್ಯೋಗಿಗೆ 35 ಲಕ್ಷ ರೂ. ವಂಚಿಸಿದ್ದಾಳೆ.

ಪುಲಕೇಶಿನಗರ ನಿವಾಸಿ ವಿನ್ಸೆಂಟ್‌ ಎಂಬವರು ಪೂರ್ವವಿಭಾಗದ ಸೆನ್‌ ಠಾಣೆಯಲ್ಲಿ ಇಂಗ್ಲೆಂಡ್‌ ಮೂಲದ ನ್ಯಾನ್ಸಿ ವಿಲಿಯಂ ಎಂಬಾಕೆ ವಿರುದ್ಧ ದೂರು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

ಫೇಸ್‌ ಬುಕ್‌ ಮೂಲಕ ಪರಿಚಯವಾದ ನಾನ್ಸಿ ವಿಲಿಯಂ ಬಳಿಕ ಮೊಬೈಲ್‌ ನಂಬರ್‌ ಪಡೆದುಕೊಂಡು ವಿನ್ಸೆಂಟ್‌ ಜತೆ ನಿತ್ಯ ಚಾಟಿಂಗ್‌ ಆರಂಭಿಸಿದ್ದಾಳೆ. ಈ ಮಧ್ಯೆ ಕೆಲ ದಿನಗಳ ಹಿಂದೆ ವಿದೇಶದಲ್ಲಿ ಜ್ಯುವೆಲ್ಲರಿ ಶಾಪ್‌ ಮಳಿಗೆ ಹೊಂದಿದ್ದು, ಅದನ್ನು ಭಾರತದಲ್ಲೂ ವಿಸ್ತರಿಸುವ ಬಗ್ಗೆ ಚಿಂತನೆ ಇದೆ. ತಾವು ಸಹಕಾರ ನೀಡಿ ದರೆ ತೆರೆಯುವುದಾಗಿ ನಂಬಿಸಿದ್ದಾಳೆ. ಅಲ್ಲದೆ, ಪಾಲು ದಾರಿಕೆಯಲ್ಲಿ ಜ್ಯುವೆಲ್ಲರಿ ಶಾಪ್‌ ತೆರೆದು, ಅದರ ನಿರ್ವಹಣೆಯನ್ನು ತಾವೇ ನೋಡಿಕೊಳ್ಳಬಹುದು ಎಂದು ನಂಬಿಸಿದ್ದಾಳೆ. ಇದನ್ನು ನಂಬಿದ ವಿನ್ಸೆಂಟ್‌ ಅವರು ನಾನ್ಸಿ ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ 35 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ. ಒಂದೂವರೆ ತಿಂಗಳಾದರೂ ಸ್ನೇಹಿತೆಯಿಂದ ಯಾವುದೇ ಪ್ರತಿ ಕ್ರಿಯೆ ಬಾರದಿದ್ದಾಗ ಆಕೆಯ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್ಛ್ ಆಫ್ ಆಗಿದೆ. ಜತೆಗೆ ಫೇಸ್‌ಬುಕ್‌, ಟ್ವಿಟರ್‌ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಹೀಗಾಗಿ ವಂಚಿಸಿದ ನ್ಯಾನ್ಸಿ ಎಂಬಾಕೆಯ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ವಿನ್ಸೆಂಟ್‌ ದೂರು ನೀಡಿದ್ದಾರೆ ಎಂದು ಸೆನ್‌ ಠಾಣೆ ಪೊಲೀಸರು ಹೇಳಿದರು.

ಭಾರತದಲ್ಲಿ ಹತ್ತಾರು ಖಾತೆಗಳು

ಆರೋಪಿಯ ಮೊಬೈಲ್‌ ನಂಬರ್‌ ಹಾಗೂ ಫೇಸ್‌ಬುಕ್‌ ಖಾತೆ ಪರಿಶೀಲಿಸಿದಾಗ ಇಂಗ್ಲೆಂಡ್‌ನಿಂದ ಕಾರ್ಯ ನಿರ್ವ ಹಿಸುತ್ತಿರುವುದು ಗೊತ್ತಾಗಿದೆ. ಜತೆಗೆ ಆಕೆ ಭಾರತದ ವಿವಿಧೆಡೆ ಇರುವ ಬ್ಯಾಂಕ್‌ಗಳಲ್ಲಿ ಸುಮಾರು 20ಕ್ಕೂ ಅಧಿಕ ಖಾತೆಗಳನ್ನು ಹೊಂದಿದ್ದಾಳೆ. ಹೀಗಾಗಿ ಆಕೆಯ ಖಾತೆಗಳಲ್ಲಿರುವ ಎಲ್ಲ ಹಣವನ್ನು ಜಪ್ತಿ ಮಾಡುವಂತೆ ಸಂಬಂಧಿಸಿದ ಬ್ಯಾಂಕ್‌ಗಳಿಗೆ ಪತ್ರ ಬರೆಯಲಾಗಿದೆ. ಆದರೆ, ಆಕೆ ಖಾತೆಯಲ್ಲಿ ಕಡಿಮೆ ಹಣವಿದೆ ಎಂದು ಪೊಲೀಸರು ಹೇಳಿದರು.

ಹಿನ್ನೆಲೆ ತಿಳಿದು ವ್ಯವಹರಿಸಿ

ಆರೋಪಿ ನ್ಯಾನ್ಸಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಆಕೆಯ ಬ್ಯಾಂಕ್‌ ಖಾತೆಗಳ ಹಣ ಜಪ್ತಿಗೆ ಬ್ಯಾಂಕ್‌ಗಳಿಗೆ ಪತ್ರ ಬರೆಯಲಾಗಿದೆ. ಹೀಗಾಗಿ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವ್ಯಕ್ತಿಗಳ ಪೂರ್ವಪರ ತಿಳಿದುಕೊಂಡು ಹಣಕಾಸಿನ ವ್ಯವಹಾರ ನಡೆಸಬೇಕು. ಅನುಮಾನಗೊಂಡರೆ ಕೂಡಲೇ ಸಮೀಪದ ಪೊಲೀಸ್‌ ಠಾಣೆಗೆ ದೂರು ನೀಡಿ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.