ತಾಮ್ರಕ್ಕೆ ಚಿನ್ನ ಲೇಪಿಸಿ ವಂಚನೆ

ಚಿನ್ನ ಲೇಪಿತ ತಾಮ್ರ ಅಡಮಾನವಿಟ್ಟು ಬ್ಯಾಂಕ್‌ಗಳಿಗೆ ಮೋಸ

Team Udayavani, Nov 24, 2022, 12:16 PM IST

11

ಬೆಂಗಳೂರು: ಬ್ಯಾಂಕ್‌ಗಳಲ್ಲಿ ನಕಲಿ ಚಿನ್ನಾಭರಣ ಅಡಮಾನ ಇಟ್ಟು ಕೋಟ್ಯಂತರ ರೂ. ವಂಚಿಸಿದ್ದ ಗದಗ ಜಿಲ್ಲೆಯ ಬಿಜೆಪಿ ಕಾರ್ಪೋರೆಟರ್‌ ಪುತ್ರ ಸೇರಿ ಮೂವರು ಆರೋಪಿಗಳನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

ಗದಗ ಜಿಲ್ಲೆಯ ಬಿಜೆಪಿ ಕಾರ್ಪೋರೆಟರ್‌ ವೊಬ್ಬರ ಪುತ್ರ ದತ್ತಾತ್ರೇಯ ಬಾಕಳೆ ಅಲಿಯಾಸ್‌ ಯಶ್‌(28), ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರುಣ್‌ ರಾಜು ಕಾನಡೆ (30) ಮತ್ತು ಉಡುಪಿ ಜಿಲ್ಲೆಯ ಸತ್ಯಾನಂದ ಅಲಿಯಾಸ್‌ ಸತ್ಯ(28) ಬಂಧಿತರು.

ಆರೋಪಿಗಳಿಂದ 1475.640 ಗ್ರಾಂ ನಕಲಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪೈಕಿ ಸತ್ಯಾನಂದ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಬ್ಯಾಂಕ್‌ವೊಂದಕ್ಕೆ ಮಹಿಳೆ ಜಯಲಕ್ಷ್ಮೀ ಎಂಬಾಕೆ ಜತೆ ಹೋಗಿ, ಮಹಿಳೆ ಹೆಸರಿನಲ್ಲಿ 235 ಗ್ರಾಂ ಚಿನ್ನಾಭರಣ ಅಡಮಾನ ಇಟ್ಟು 7.15 ಲಕ್ಷ ರೂ. ಸಾಲ ಪಡೆದುಕೊಳ್ಳಲು ಮುಂದಾಗಿದ್ದನು. ಆಗ ಅನುಮಾನಗೊಂಡ ಬ್ಯಾಂಕ್‌ ಸಿಬ್ಬಂದಿ ಚಿನ್ನಾಭರಣಗಳನ್ನು ಪರಿಶೀಲಿಸಿ ನಕಲಿ ಚಿನ್ನಾಭರಣಗಳೆಂದು ದೃಢವಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳದಿಂದ ನಕಲಿ ಚಿನ್ನ:

ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ತಾಮ್ರದ ಮೇಲೆ ಚಿನ್ನದ ಲೇಪನ ಮಾಡಿ ಹಾಲ್‌ಮಾರ್ಕ್‌ ಗುರುತು ಮುದ್ರಿಸುತ್ತಿದ್ದರು. ನಂತರ ಅವುಗಳನ್ನು ಪಶ್ಚಿಮ ಬಂಗಾಳದಿಂದ ಕೋರಿಯರ್‌ ಮೂಲಕ ಬೆಂಗಳೂರಿಗೆ ತರಿಸಿಕೊಂಡು ರಾಷ್ಟ್ರೀಕೃತ ಬ್ಯಾಂಕ್‌ ಗಳಲ್ಲಿ ಅಡಮಾನ ಇಟ್ಟು ಸಾಲ ಪಡೆಯುತ್ತಿದ್ದರು. ಬಳಿಕ ಹಣ ಕಟ್ಟದೆ ವಂಚಿಸುತ್ತಿದ್ದರು. ಇದೇ ರೀತಿ ಗುಜರಾತ್‌, ಕರ್ನಾಟಕದ ಬೆಂಗಳೂರು, ಉಡುಪಿ, ಗದಗ, ಕೊಪ್ಪಳ, ಹುಬ್ಬಳ್ಳಿ ಜಿಲ್ಲೆಗಳಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸುಮಾರು 15 ಕೆ. ಜಿಗಳಷ್ಟು ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಕೋಟ್ಯಂತರ ರೂ. ಸಾಲವಾಗಿ ಪಡೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ತಾಮ್ರದಿಂದ ತಯಾರಿಸಿದ ಆಭರಣಕ್ಕೆ ಚಿನ್ನದ ಲೇಪನ ಮಾಡಿಸಿದ್ದರೂ ಅದರಲ್ಲಿ ಶೇ.30ರಷ್ಟು ಚಿನ್ನದ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಅದನ್ನು ಕಂಡ ಕೆಲವರು ಅಸಲಿ ಚಿನ್ನ ಎಂದು ಚಿನ್ನಾಭರಣ ಅಡಮಾನ ಇಟ್ಟುಕೊಳ್ಳುತ್ತಿದ್ದರು. ಕ್ಯಾಸಿನೋದಲ್ಲಿ ಮೋಜು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಚಿನ್ನಾಭರಣ ಅಡಮಾನ ಇಟ್ಟು ಬಂದ ಹಣದಲ್ಲಿ ಗೋವಾದ ಕ್ಯಾಸಿನೋದಲ್ಲಿ ಜೂಜಾಟ ಆಡಿ ಮೋಜು-ಮಸ್ತಿ ಮಾಡುತ್ತಿದ್ದರು. ನಂತರ ಇತರೆ ತಮ್ಮ ಚಟಗಳಿಗೆ ಹಣ ವ್ಯಯಿಸುತ್ತಿದ್ದರು ಎಂದು ಪೊಲೀಸರು ಹೇಳಿದರು

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.