ಐಪಿಎಸ್ ಅಧಿಕಾರಿ ಹೆಸರಿನಲ್ಲಿ ವಂಚನೆ
Team Udayavani, Dec 24, 2022, 10:17 AM IST
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಆಪ್ತ ಸಹಾಯಕ ಎಂದು ಹೇಳಿಕೊಂಡು ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ಬನಶಂಕರಿ ನಿವಾಸಿ ಹೇಮಂತ್(25) ಬಂಧಿತ. ಆರೋಪಿ ಬನಶಂಕರಿ ನಿವಾಸಿ ನಾಗರಾಜು ಎಂಬುವರಿಗೆ ಬಿಬಿಎಂಪಿಯಲ್ಲಿ ಉದ್ಯೋಗ ಕೊಡಿಸುವುದಾಗಿ 3.50 ಲಕ್ಷ ರೂ. ಪಡೆದು ವಂಚಿಸಿದ್ದ. ಜತೆಗೆ ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಆಪ್ತ ಎಂದು ಹೇಳಿಕೊಂಡಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ದೂರುದಾರ ಹಲವು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರು. ಎಲ್ಲಿಯೂ ಕೆಲಸ ಸಿಕ್ಕಿರಲಿಲ್ಲ. 2020ರಲ್ಲಿ ಅವರಿಗೆ ಆರೋಪಿ ಹೇಮಂತ್ ಪರಿಚಯವಾಗಿತ್ತು. ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತೇನೆ. ಐಪಿಎಸ್ ಅಧಿಕಾರಿಯೊಬ್ಬರ ಆಪ್ತ ಸಹಾಯಕ. ದೊಡ್ಡ ಅಧಿಕಾರಿಗಳು ನನಗೆ ಪರಿಚಯ. ನಿಮಗೆ ಬಿಬಿಎಂಪಿಯಲ್ಲಿ ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೆ, ಕರ್ನಾಟಕ ಪೊಲೀಸ್ ಇಲಾಖೆ ಹೆಸರಿನಲ್ಲಿದ್ದ ಗುರುತಿನ ಚೀಟಿ ತೋರಿಸಿದ್ದ. ಹೀಗಾಗಿ ಆರೋಪಿ ನಂಬಿದ್ದ ದೂರುದಾರ ನಾಗರಾಜ್, ಸರ್ಕಾರಿ ಕೆಲಸ ಪಡೆಯುವ ಸಲುವಾಗಿ 3.50 ಲಕ್ಷ ರೂ. ಅನ್ನು ಆರೋಪಿಗೆ ನೀಡಿದ್ದರು. ಬಳಿಕ ಕೆಲಸ ಕೊಡಿಸದೆ ವಂಚಿಸಿದ್ದ. ಜತೆಗೆ ಆರೋಪಿಯ ಮೊಬೈಲ್ ನಂಬರ್ ಅನ್ನು ಕೂಡ ಎಡಿಜಿಪಿ ಹೇಮಂತ್ ಎಂದು ಬರುವಂತೆ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ.
ಹೀಗಾಗಿ ಕೆಲ ಸಾರ್ವಜನಿಕರು ಆರೋಪಿಗೆ ಹಣ ನೀಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…