ಚೈನ್‌ ಲಿಂಕ್‌ ಮಾದರಿಯಲಿ ಭಾರೀ ವಂಚನೆ


Team Udayavani, Jan 27, 2023, 9:58 AM IST

tdy-3

ಬೆಂಗಳೂರು: ಟೆಕ್ಸ್‌ಟೈಲ್ಸ್‌ ಉತ್ಪನ್ನಗಳಲ್ಲಿ ಮ್ಯಾಗ್ನೆಟಿಕ್‌ ಅಂಶವಿದೆ ಎಂದು ಸುಳ್ಳು ಪ್ರಚಾರ ಮಾಡಿ, ಸಾವಿರಾರು ಮಂದಿಯಿಂದ ನಗದು ಠೇವಣಿ ಸಂಗ್ರಹಿಸಿ ವಂಚಿಸುತ್ತಿದ್ದ ಇ-ಬಯೋಟೋರಿಯಂ ನೆಟ್‌ವರ್ಕ್‌ ಪ್ರೈವೇಟ್‌.ಲಿ.ನ ನಾಲ್ವರು ಆರೋಪಿಗಳನ್ನು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಧ್ಯ ಪ್ರದೇಶದ ಇಂದೋರ್‌ ನಗರ ನಿವಾಸಿ ಹಾಗೂ ವಂಚಕ ಕಂಪನಿಯ ಮಾಲೀಕ ಸುನೀಲ್‌ ಜೋಶಿ(57), ಬೆಂಗಳೂರು ಶಾಖೆಯ ಮುಖ್ಯಸ್ಥ, ಸುಭಾಷನಗರ ನಿವಾಸಿ ಸಾದಿಕ್‌ ಸಲಿ (33), ಸುಬ್ರಹ್ಮಣ್ಯಪುರ ನಿವಾಸಿ ಯೋಗೀಶ್‌(44) ಮತ್ತು ಸಂಸ್ಥೆ ಪರಿಚಯಿಸುವ ಉತ್ಪನ್ನಗಳ ಬಗ್ಗೆ ಸಾರ್ವಜನಿಕ ಮಾಹಿತಿ ನೀಡುವ ಗೋವಾ ಮೂಲದ ಪ್ರಮೋದ್‌ ಗೋಪಿನಾಥ್‌ ನಾಯಕ್‌(52) ಬಂಧಿತರು.

ಆರೋಪಿಗಳಿಂದ ಕೆಲ ಉತ್ಪನ್ನಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಇತ್ತೀಚೆಗೆ ಅಂಬೇಡ್ಕರ್‌ಭವನದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಅದರಲ್ಲಿ ಮಾನವನ ಆರೋಗ್ಯಕ್ಕೆ ಸಂಬಂಧಿಸಿದ ಮ್ಯಾಗ್ನೆಟಿಕ್‌ ಉತ್ಪನ್ನಗಳ ಮಾರಾಟ ಮಾಡಿ ಲಾಭ ಪಡೆಯುವ ಉದ್ದೇಶದಿಂದ, ಬಿ.ಪಿ. ಆಕ್ಸಿಜನ ಲೆವಲ್‌ ಹಾಗೂ ಇನ್ನು ಇತರೆ ಆರೋಗ್ಯ ಸಮಸ್ಯೆಗಳನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವ ಉಪಕರಣಗಳನ್ನು ಪರಿಚಯಿಸುತ್ತಿದ್ದರು. ಈ ವಸ್ತುಗಳನ್ನು ವಿವಿಧ ಮಾದರಿಯಲ್ಲಿ ಮಾರಾಟ ಮಾಡಬಹುದೆಂದು ಪ್ರಚೋದನೆ ನೀಡುತ್ತಿದ್ದರು. ಅಲ್ಲದೆ, ಇದೇ ವೇಳೆ ಈ ರೀತಿ ವಸ್ತುಗಳ ಮಾರಾಟ ಮಾಡಿ ಕಂಪನಿಗೆ ಹಾಗೂ ವೈಯಕ್ತಿಕವಾಗಿಒಂದೂವರೆ ಲಕ್ಷ ರೂ.ನಿಂದ 10 ಲಕ್ಷ ರೂ.ವರೆಗೆ ಹಣ ಗಳಿಸಿರುವ ವ್ಯಕ್ತಿಗಳಿಗೆ ಸನ್ಮಾನ ಮಾಡಲಾಗಿತ್ತು.

ಹೀಗೆ ಸಾವಿರಾರು ಮಂದಿಯನ್ನು ಕಾರ್ಯಕ್ರಮಕ್ಕೆ ಕರೆಸಿಕೊಂಡು, ಚೈನ್‌ಲಿಂಕ್‌ ಮಾದರಿಯಲ್ಲಿ ವ್ಯವಹಾರ ನಡೆಸಿದರೆ ಭಾರೀ ಲಾಭ ಬರುತ್ತದೆ ಎಂದು ನಂಬಿಸಿ ವಂಚಿಸುತ್ತಿದ್ದರು.ಈ ಮಾಹಿತಿ ಪಡೆದು ಹೈಗ್ರೌಂಡ್ಸ್‌ ಠಾಣಾಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಹೇಳಿದರು.

ಸಾವಿರಾರು ಮಂದಿಯನ್ನು ಕರೆಸಿಕೊಂಡು, ಚೈನ್‌ಲಿಂಕ್‌ ಮಾದರಿಯಲ್ಲಿ ಕಂಪನಿ ಹೆಸರಿನಲ್ಲಿ ವ್ಯವಹಾರ ನಡೆಸಬೇಕು. ಅದಕ್ಕೆ ಮುಂಗಡವಾಗಿ ಠೇವಣಿ ಇರಿಸಬೇಕು. ಹೆಚ್ಚಿನ ಜನ ಸೇರಿಸಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ಆಮಿಷವೊಡ್ಡಿ ಕಾರ್ಯಕ್ರಮ ಆಯೋಜಿಸುತ್ತಿದ್ದರು. ಮೊದಲೇ ಅನೇಕ ಮಂದಿಯನ್ನು ಕಂಪನಿಗೆ ಸೇರಿಸಿಕೊಂಡು, ಅವರನ್ನು ಸಾಧಕರೆಂದು ತೋರಿಸಿ ಸನ್ಮಾನ ಮಾಡಿ ಚೈನ್‌ಲಿಂಕ್‌ ವ್ಯವಹಾರ ನಡೆಸುತ್ತಿದ್ದರು ಎಂದು ಹೇಳಿದರು.

 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.