ಉಡುಗೊರೆ ಆಮಿಷ: 12 ಲಕ್ಷ ರೂ.ಟೋಪಿ
Team Udayavani, Oct 1, 2022, 2:07 PM IST
ಬೆಂಗಳೂರು: ವಾಟ್ಸ್ಆ್ಯಪ್ನಲ್ಲಿ ಬಂದ ಸಂದೇಶಕ್ಕೆ ಮರುಳಾದ ಮಹಿಳೆಯೊಬ್ಬರು ಉಡುಗೊರೆ ಪಡೆಯುವ ಆಮಿಷಕ್ಕೊಳಗಾಗಿ ಬರೋಬ್ಬರಿ 12.73 ಲಕ್ಷ ರೂ. ಕಳೆದುಕೊಂಡಿದ್ದಾರೆ.
ರಾಜರಾಜೇಶ್ವರಿನಗರದ ಸರಿತಾ (52) ವಂಚನೆಗೊಳಗಾದವರು. ಅಪರಿಚಿತ ವ್ಯಕ್ತಿಯೊಬ್ಬ ಸರಿತಾ ಅವರ ವಾಟ್ಸ್ಆ್ಯಪ್ಗೆ ಸಂದೇಶ ಕಳುಹಿಸಿದ್ದ. ಆತ ಕಳುಹಿಸಿದ ಸಂದೇಶಕ್ಕೆ ಸರಿತಾ ಸಹ ಪ್ರತಿಕ್ರಿಯಿಸಿದ್ದರು. ನಂತರ ಇಬ್ಬರೂ ಹಲವು ದಿನಗಳ ಕಾಲ ಚಾಟ್ ಮಾಡುತ್ತಿದ್ದರು. ತಾನು ವಿದೇಶದಲ್ಲಿ ಇರುವುದಾಗಿ ಪರಿಚಯಿಸಿಕೊಂಡಿದ್ದ ಅಪರಿಚಿತ ವ್ಯಕ್ತಿಯು “ನಿಮಗೆ ವಿದೇಶದಿಂದಲೇ ಬೆಲೆ ಬಾಳುವ ಉಡುಗೊರೆ ಕಳುಹಿಸಿರುವುದಾಗಿ’ ಹೇಳಿದ್ದ. ಇದಾದ ಕೆಲ ಹೊತ್ತಿನ ಬಳಿಕ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತರು, “ನಿಮ್ಮ ಹೆಸರಿಗೆ ವಿದೇಶದಿಂದ ಬೆಲೆ ಬಾಳುವ ಉಡುಗೊರೆ ಬಂದಿದೆ. ಈ ಉಡುಗೊರೆ ಪಡೆಯಲು ಕಸ್ಟಮ್ಸ್, ಜಿಎಸ್ಟಿ ಶುಲ್ಕ ಹಾಗೂ ಇನ್ನಿತರ ಶುಲ್ಕ ಪಾವತಿಸಬೇಕು’ ಎಂದು ಸಬೂಬು ಹೇಳಿ ಹಂತ-ಹಂತವಾಗಿ ಸರಿತಾ ಅವರಿಂದ ತಮ್ಮ ಬ್ಯಾಂಕ್ ಖಾತೆಗೆ 12.73 ಲಕ್ಷ ರೂ. ಅನ್ನು ಜಮೆ ಮಾಡಿಸಿದ್ದರು.
ಇದಾದ ಬಳಿಕ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದವರು ಹಾಗೂ ಉಡುಗೊರೆ ಕಳುಹಿಸಿರುವುದಾಗಿ ಹೇಳಿ ವಾಟ್ಸ್ಆ್ಯಪ್ನಲ್ಲಿ ಪರಿಚಯವಾಗಿದ್ದ ವ್ಯಕ್ತಿಗಳು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಆಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಸರಿತಾ ಗಮನಕ್ಕೆ ಬಂದಿತ್ತು. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ