Fraud: ಬಿಜೆಪಿ ರಾಜ್ಯಾಧ್ಯಕ್ಷ ಹೆಸರಲ್ಲಿ ಉದ್ಯಮಿಗೆ ವಂಚನೆ


Team Udayavani, Nov 27, 2023, 10:29 AM IST

tdy-2

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಸಾಲ ಕೊಡಿಸುವು ದಾಗಿ ಉದ್ಯಮಿಗಳಿಂದ ದಾಖಲೆಗಳನ್ನು ಪಡೆದು ವಂಚಿಸುತ್ತಿದ್ದ ಯೂಸೂಫ್ ಎಂಬಾತನನ್ನು ಮಲ್ಲೇಶ್ವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೂಂದೆಡೆ ಹೆಚ್ಚಿನ ತನಿಖೆಗೆ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.

ಆರೋಪಿ ಇತ್ತೀಚೆಗೆ ಹೋಟೆಲ್‌ ಉದ್ಯಮಿ ಶಾಜಿ ಕೃಷ್ಣನ್‌ ಎಂಬವರಿಗೆ ರಾಷ್ಟ್ರೀಕೃತ ಬ್ಯಾಂಕ್‌ವೊಂದರಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ, ಅವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ಬಳಿಕ ಕೃಷ್ಣನ್‌ ಅವರನ್ನು ಬ್ಯಾಂಕ್‌ಗೂ ಕರೆದುಕೊಂಡು ಹೋಗಿ ಅರ್ಜಿಗಳಿಗೆ ಸಹಿ ಮಾಡಿಸಿದ್ದಾನೆ. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದುಕೊಂಡಿದ್ದ. ಅದನ್ನು ಸರಿಯಾದ ಸಮಯಕ್ಕೆ ಕಟ್ಟದೆ ಸುಸ್ತಿದಾರನಾಗಿದ್ದ. ಈ ಮಧ್ಯೆ ಕಾರ್ಯನಿಮಿತ್ತ ಕೃಷ್ಣನ್‌ ಬ್ಯಾಂಕ್‌ಗೆ ಹೋದಾಗ ಈ ವಿಚಾರ ಬೆಳಕಿಗೆ ಬಂದಿತ್ತು.

ಈ ಸಂಬಂಧ ಶಾಜಿ ಕೃಷ್ಣನ್‌ ನೀಡಿದ ದೂರಿನ ಮೇರೆಗೆ ವಂಚನೆ ಕೇಸು ದಾಖಲಿಸಿಕೊಂಡು ಆರೋಪಿ ಯನ್ನು ವಶಕ್ಕೆ ಪಡೆಯಲಾಗಿದೆ.

ಉದ್ಯಮಿಗಳ ಜತೆ ಸ್ನೇಹ: ತನಗೆ ರಾಜಕೀಯ ಮುಖಂಡರು, ಬ್ಯಾಂಕ್‌ನ ಮ್ಯಾನೇಜರ್‌ಗಳು ಪರಿಚಯಸ್ಥರು ಎಂದು ಸುಳ್ಳು ಹೇಳಿಕೊಂಡು ಉದ್ಯಮಿಗಳ ಜತೆ ಸ್ನೇಹ ಬೆಳೆಸುತ್ತಿದ್ದ. ಸರ್ಕಾರದಲ್ಲಿ ಉದ್ಯಮಕ್ಕೆ ಸಂಬಂಧಿಸಿದ ಕೆಲಸ ಮಾಡಿಸಿ ಕೊಡುವುದಾಗಿ, ಕೆಲ ಸಚಿವರು ಹಾಗೂ ಅಧಿಕಾರಿಗಳಿಗೆ ಹಣ ಕೊಡಬೇಕೆಂದು ಉದ್ಯಮಿಗಳಿಂದ ಹಣ ಪಡೆದುಕೊಂಡಿದ್ದಾನೆ ಎಂಬುದು ತನಿಖೆ ಯಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ಯೂಸೂಫ್‌ ವಿರುದ್ಧ ನಗರದ ಹಲವು ಠಾಣೆಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿವೆ .

ಜಿಎಸ್‌ಟಿ ಕಮಿಷನರ್‌ ಹೆಸರಲ್ಲಿ ವಂಚನೆ: ಆರೋಪಿಯು ಟ್ರಾವೆಲ್ಸ್‌ ಕಂಪನಿ ಮಾಲೀ ಕರೊಬ್ಬರಿಗೆ ಜಿಎಸ್‌ಟಿ ಕಮಿಷನರ್‌ ಹೆಸರಲ್ಲಿ ಮೋಸ ಮಾಡಿದ್ದಾನೆ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಟ್ರಾವೆಲ್ಸ್‌ ಕಂಪನಿ ಮಾಲೀಕರು ಕೋಟ್ಯಂತರ ರೂ. ಜಿಎಸ್‌ಟಿ ಕಟ್ಟಬೇಕಿತ್ತು. ಈ ವಿಚಾರ ತಿಳಿದು ಪರಿಚಯಿಸಿಕೊಂಡಿದ್ದ ಯೂಸೂಫ್‌, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆಯುಕ್ತರು ತನಗೆ ಪರಿಚಿತರೆಂದು ಸುಳ್ಳು ಹೇಳಿದ್ದ. ನಂತರ ಟ್ರಾವೆಲ್ಸ್‌ ಕಂಪನಿ ಮಾಲೀಕರನ್ನು ಜಿಎಸ್‌ಟಿ ಕಚೇರಿಗೆ ಕರೆದೊಯ್ದಿದ್ದ. ಬಳಿಕ, ಜಿಎಸ್ಟಿ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ಜಿಎಸ್‌ ಟಿಯಲ್ಲಿ ಶೇ.50 ಕಡಿಮೆ ಮಾಡಲು ಒಪ್ಪಿದ್ದಾರೆ. ಅವರಿಗೆ ಕಮಿಷನ್‌ ರೂಪದಲ್ಲಿ ಮುಂಗಡ 15 ಲಕ್ಷ ರೂ. ಕೊಡಬೇ ಕೆಂದು ಹೇಳಿ ಹಣ ಪಡೆದು ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.

ನಿವೃತ್ತ ಎಸ್‌ಪಿ ಎದುರಲ್ಲೇ ವಂಚನೆ: ನಂದಿನಿಲೇಔಟ್‌ನ ಉದ್ಯಮಿ ಶಿವಾನಂದಮೂರ್ತಿ ಎಂಬುವರಿಗೆ ಹಳೆ ಕಾರು ಕೊಡಿಸುವುದಾಗಿ ನಂಬಿಸಿ ನಿವೃತ್ತ ಎಸ್‌ಪಿಯೊಬ್ಬರ ಸಮ್ಮುಖದಲ್ಲೇ ಮುಂಗಡವಾಗಿ 5 ಲಕ್ಷ ರೂ. ಪಡೆದು, ಕಾರು ಕೊಡಿಸದೆ ಯೂಸೂಫ್ ವಂಚಿಸಿದ್ದಾನೆ. ಅಲ್ಲದೆ, ಹಣ ವಾಪಸ್‌ ಕೇಳಿದ ಶಿವಾನಂದಮೂರ್ತಿಗೆ ಆರೋಪಿ ಕೊಲೆ ಬೆದರಿಕೆ ಹಾಕಿದ್ದ.

ಈ ಸಂಬಂಧ ಶಿವಾನಂದಮೂರ್ತಿ ಆರೋಪಿ ವಿರುದ್ಧ ಮಹಾಲಕ್ಷ್ಮೀ ಲೇಔಟ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹೆಸರಿನಲ್ಲಿ ಮೋಸ: ಆರೋಪಿ ಯೂಸೂಫ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೆಸರು ಹೇಳಿಕೊಂಡು ಕೆಲವರಿಂದ ಹಣ ಪಡೆದು ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ.

ಬಿಜೆಪಿ ಹೈಕಮಾಂಡ್‌ ನಾಯಕರು ತನಗೆ ಪರಿಚಯವಿದ್ದು, ರಾಜಕೀಯವಾಗಿ ಕೆಲಸ ಮಾಡಿಸುವುದಾಗಿ ಹಲವರಿಂದ ಹಣ ಪಡೆದು ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.