ವೆಬ್ಸೈಟ್ಗೆ ಹಣ ಹೂಡಿದ್ದ ಟೆಕಿಗೆ 27 ಲಕ್ಷ ರೂ. ಟೋಪಿ
Team Udayavani, Jul 6, 2023, 2:25 PM IST
ಬೆಂಗಳೂರು: ಹೆಚ್ಚಿನ ಲಾಭಾಂಶ ನೀಡುವುದಾಗಿ ವೆಬ್ಸೈಟ್ ವೊಂದರಲ್ಲಿ ಹೂಡಿಕೆ ಮಾಡಿದ್ದ ಟೆಕಿಗೆ ಸೈಬರ್ ಕಳ್ಳರು 27 ಲಕ್ಷ ರೂ. ವಂಚನೆ ಮಾಡಿದ್ದಾರೆ. ಹರಳೂರು ರಸ್ತೆಯ ಅಮಿತ್ ಕಪಿಲ್ (44) ವಂಚನೆಗೊಳಗಾದ ಸಾಫ್ಟ್ವೇರ್ ಎಂಜಿನಿಯರ್.
ಅಮಿತ್ ಹೆಚ್ಚಿನ ಲಾಭಾಂಶ ಪಡೆಯುವ ಉದ್ದೇಶದಿಂದ ವೆಬ್ಸೈಟ್ವೊಂದರಲ್ಲಿ ಹಣ ಹೂಡಿಕೆ ಮಾಡಲು ಮುಂದಾಗಿದ್ದರು. ಆ ವೆಬ್ ಸೈಟ್ನಲ್ಲಿದ್ದ ಮೊಬೈಲ್ ನಂಬರ್ಗೆ ಕರೆ ಮಾಡಿ ವಿಚಾರಿಸಿದಾಗ ಅಪರಿಚಿತರು ಅಮಿತ್ ಅವರ ಆಧಾರ್ ಕಾರ್ಡ್, ಪ್ಯಾನ್ ವಿವರ ಪಡೆದಿದ್ದರು. ಬಳಿಕ ಹೆಚ್ಚಿನ ಲಾಭಾಂಶ ನೀಡುವ ಭರವಸೆ ನೀಡಿದ್ದರು. ಅಪರಿಚಿತರು ಸೂಚಿಸಿದ ಬ್ಯಾಂಕ್ ಖಾತೆಗೆ ಹಂತ-ಹಂತವಾಗಿ 27 ಲಕ್ಷ ರೂ. ನೆಟ್ ಬ್ಯಾಂಕಿಂಗ್ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಇದಾದ ಬಳಿಕ ಅಪರಿಚಿತರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ
Bengaluru: ಬಕ್ರೀದ್ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ
Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು
Bengaluru Parks: ಪಾರ್ಕ್ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ
Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.