ವಜ್ರಾಭರಣ ಆಸೆ ತೋರಿಸಿ ಮಹಿಳೆಗೆ ವಂಚನೆ


Team Udayavani, Jan 7, 2020, 11:44 AM IST

bng-tdy-2

ಬೆಂಗಳೂರು: ಮ್ಯಾಟ್ರಿಮೋನಿ ವೆಬ್‌ಸೈಟ್‌ ನಲ್ಲಿ ಪರಿಚಯವಾದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿದ ವ್ಯಕ್ತಿ, ಭಾರೀ ಮೊತ್ತದ ವಜ್ರ ತಂದಿದ್ದು ಅದನ್ನು ತರಲು ಏರ್‌ಪೋರ್ಟ್‌ನ ಅಧಿಕಾರಿಗಳಿಗೆ ಹಣ ಕೊಡಬೇಕಿದೆ ಎಂದು ನಂಬಿಸಿ 3.90 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮೋಸ ಹೋದ ಮಹಿಳೆ ನೀಡಿರುವ ದೂರಿನ ಅನ್ವಯ, ಅರ್ಮಾನ್‌ ಮಲಿಕ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಆಡುಗೋಡಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ಮಹಿಳೆ ವಿಧವೆ ಆಗಿದ್ದು ಮರು ವಿವಾಹ ಆಗಲು ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ವಿವರ ಹಾಕಿದ್ದರು. ಇದನ್ನು ಗಮನಿಸಿದ ಅರ್ಮಾನ್‌ ಮಲಿಕ್‌ ಎಂಬಾತ, ತಾನು ದುಬೈನಲ್ಲಿ ಇರುವುದಾಗಿ ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾನೆ. ಜತೆಗೆ ಡಿ.28ರಂದು ಭಾರತಕ್ಕೆ ಬರಲಿದ್ದು, ಮದುವೆ ಮಾಡಿಕೊಳ್ಳುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ.

ಈ ಮಧ್ಯೆ ಡಿ.30ರಂದು ಏರ್‌ಪೋರ್ಟ್‌ ಸಿಬ್ಬಂದಿ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಯೊಬ್ಬ, ಅರ್ಮಾನ್‌ ಮಲಿಕ್‌ ದೆಹಲಿ ವಿಮಾನ ನಿಲ್ದಾಣದಲ್ಲಿದ್ದು, ಆತ ಭಾರೀ ಪ್ರಮಾಣದ ವಜ್ರಾಭರಣ, ಲಗೇಜ್‌ ತಂದಿದ್ದಾನೆ.ಅದನ್ನು ಜಪ್ತಿ ಮಾಡಿಕೊಂಡಿದ್ದು ಅದಕ್ಕೆ ದಂಡ ಕಟ್ಟಿದರೆ ಆಭರಣ ಹಾಗೂ ಅರ್ಮಾನ್‌ ನನ್ನು ಬಿಟ್ಟು ಕಳುಹಿಸುವುದಾಗಿ ತಿಳಿಸಿದ್ದಾನೆ.

ಆತನ ಮಾತು ನಂಬಿದ ಮಹಿಳೆ, ಕರೆ ಮಾಡಿದ್ದ ವ್ಯಕ್ತಿ ಕಳಿಸಿದ್ದ ವಿವಿಧ ಬ್ಯಾಂಕ್‌ ಖಾತೆಗಳಿಗೆ 3.90 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಆದರೆ, ಪುನಃ ಅರ್ಮಾನ್‌ ಕರೆ ಮಾಡಿಲ್ಲ. ಬೆಂಗಳೂರಿಗೂ ಬಂದಿಲ್ಲ. ಏರ್‌ ಪೋರ್ಟ್‌ ಸಿಬ್ಬಂದಿ ಹೆಸರಲ್ಲಿ ಕರೆ ಮಾಡಿದ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದರೆ ಸ್ವಿಚ್‌ ಆಫ್ ಆಗಿತ್ತು. ಬಳಿಕ ಜ.2ರಂದು ಏರ್‌ಪೋರ್ಟ್‌ ಸಿಬ್ಬಂದಿ ಹೆಸರಲ್ಲಿ ಮಹಿಳೆಗೆ ಕರೆ ಮಾಡಿದ ಮತ್ತೂಬ್ಬ ವ್ಯಕ್ತಿ, 85 ಸಾವಿರ ರೂ. ನೀಡಿ ಪಾರ್ಸೆಲ್‌ ತೆಗೆದುಕೊಂಡು ಹೋಗುವಂತೆ ಹೇಳಿದ್ದಾನೆ. ಅಷ್ಟರಲ್ಲಾಗಲೇ ಮೋಸ ಹೋಗಿರುವ ಸಂಗತಿ ಅರಿತಿದ್ದ ಮಹಿಳೆ, ಹಣ ಕಳುಹಿಸದೆ, ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಬರ್‌ ವಂಚಕರ ತಂಡ ಮಹಿಳೆಗೆ ವಂಚನೆ ಮಾಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಇಂತಹ ಆಮಿಷದ ಕರೆಗಳಿಗೆ ಸಾರ್ವಜನಿಕರು ಮಾರುಹೋಗಬಾರದು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.