ಬೈ ಒನ್ ಗೆಟ್ ಒನ್ ಆಫರ್ ನಂಬಿದ ಯುವಕನಿಗೆ 3.98 ಲಕ್ಷ ರೂ. ಟೋಪಿ
Team Udayavani, Feb 25, 2023, 1:43 PM IST
ಬೆಂಗಳೂರು: ಒಂದು ರಾಜಸ್ಥಾನ ಥಾಲಿ ಖರೀದಿಗೆ ಮತ್ತೊಂದು ಥಾಲಿ ಉಚಿತ ಎಂದು ಫೇಸ್ಬುಕ್ ಜಾಹೀರಾತಿಗೆ ಮರುಳಾದ ಯುವಕನೊಬ್ಬ ಸೈಬರ್ ಕಳ್ಳರ ಬಲೆಗೆ ಬಿದ್ದು 3.98 ಲಕ್ಷ ರೂ. ಕಳೆದುಕೊಂಡಿದ್ದಾನೆ.
ತ್ಯಾಗರಾಜನಗರದ ನಿವಾಸಿ ಉಪೇಂದ್ರ ಕುಮಾರ್ (38) ವಂಚನೆಗೊಳಗಾದವನು.
ಒಂದು ರಾಜಸ್ಥಾನ ಥಾಲಿ ಖರೀದಿಸಿದರೆ ಮತ್ತೂಂದು ಥಾಲಿ ಉಚಿತ ಎಂಬ ಫೇಸ್ಬುಕ್ನಲ್ಲಿ ಜಾಹೀರಾತು ಗಮನಿಸಿದ ಉಪೇಂದ್ರ ಕುಮಾರ್ ಆ ಪೇಜ್ಗೆ ಹೋಗಿ ಪರಿಶೀಲಿಸಿದ್ದರು. ಇದಾದ ಕೆಲ ಹೊತ್ತಿನಲ್ಲೇ ಅಪರಿಚಿತ ನಂಬರ್ನಿಂದ ಉಪೇಂದ್ರ ಕುಮಾರ್ಗೆ ವಾಟ್ಸ್ಆ್ಯಪ್ ಕರೆ ಬಂದಿತ್ತು. ಥಾಲಿ ಆಫರ್ ಪಡೆಯಲು 2 ಅಪ್ಲಿಕೇಶನ್ ಡೌನ್ ಲೋಡ್ ಮಾಡಿ 1 ರೂ. ಹಾಕುವಂತೆ ಸೂಚಿಸಿದ್ದರು. ಅದರಂತೆ ಉಪೇಂದ್ರ ಕುಮಾರ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಬ್ಯಾಂಕ್ ಖಾತೆಯಲ್ಲಿದ್ದ 3.98 ಲಕ್ಷ ರೂ. ಹಂತ-ಹಂತವಾಗಿ ಕಡಿತಗೊಂಡಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ